Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್

James Movie: ಸ್ಯಾಂಡಲ್​ವುಡ್ ಕಲಾವಿದ ಅವಿನಾಶ್ ನಿಧನದ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಂತಹ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿ ನಟ ಟಿವಿ9ಗೆ ಮಾಹಿತಿ ನೀಡಿದ್ದಾರೆ.

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್
ನಟ ಅವಿನಾಶ್
Follow us
| Updated By: shivaprasad.hs

Updated on:Jan 05, 2022 | 6:28 PM

ಸ್ಯಾಂಡಲ್​ವುಡ್ ಹಿರಿಯ ನಟ ಅವಿನಾಶ್ ತಮ್ಮ ಪಾತ್ರ ಪೋಷಣೆಯಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿರುವ ನಟ. ಪೋಷಕ ಪಾತ್ರದಿಂದ ಹಿಡಿದು ಖಳನಾಯಕನ ಪಾತ್ರದವರೆಗೆ ಅವರು ಅಬ್ಬರಿಸಿದ್ದಾರೆ. ಕಲಾತ್ಮಕ ಚಿತ್ರಗಳಲ್ಲಿ ಬಣ್ಣಹಚ್ಚಿ ಅಪಾರ ಮನ್ನಣೆಯನ್ನೂ ಪಡೆದಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು ಅವಿನಾಶ್ ಇನ್ನಿಲ್ಲ ಎಂಬ ಸುದ್ದಿ ಹರಡಿಸಿದ್ದರು. ಇದು ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ನಟ ಅವಿನಾಶ್ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಈ ಕುರಿತು ಸೈಬರ್ ಕ್ರೈಂಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

ಅವಿನಾಶ್‌‌ ಸುಳ್ಳು ಸುದ್ದಿಯ ಕುರಿತು ಪ್ರತಿಕ್ರಿಯಿಸಿದ್ದು, ‘‘ಆರಾಮವಾಗಿದ್ದೇನೆ. ಬೆಳಗ್ಗೆ ವರ್ಕೌಟ್ ಮಾಡಿದ್ದೇನೆ’’ ಎಂದಿದ್ದಾರೆ. ಅಲ್ಲದೇ ಇಂತಹ ಸುದ್ದಿ ಹರಿದಾಡಿದ್ದರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿಯೂ ನಟ ತಿಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಲು ಮುಂದಾಗಿದ್ದಾರೆ.

ಜೇಮ್ಸ್ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿರುವ ಅವಿನಾಶ್: ಪ್ರಸ್ತುತ ‘ಜೇಮ್ಸ್’ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿರುವುದಾಗಿ ಅವಿನಾಶ್ ತಿಳಿಸಿದ್ದಾರೆ. ಪುನೀತ್ ನಟನೆಯ ಕೊನೆಯ ಚಿತ್ರ ಇದಾಗಿತ್ತು. ಇದೀಗ ಚಿತ್ರತಂಡ ಶೂಟಿಂಗ್ ನಡೆಸುತ್ತಿದ್ದು, ಚಿತ್ರ ಮುಕ್ತಾಯದ ಹಂತದಲ್ಲಿದೆ. ನಟ ಅವಿನಾಶ್ ಈ ಕುರಿತು ಮಾತನಾಡಿ, ಅಪ್ಪು ಇಲ್ಲದೇ ಶೂಟಿಂಗ್ ಮಾಡೋದು ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Ek Love Ya: ಸ್ಯಾಂಡಲ್​ವುಡ್​ಗೆ ಕೊರೊನಾತಂಕ; ಬಹುನಿರೀಕ್ಷಿತ ‘ಏಕ್​ ಲವ್ ಯಾ’ ರಿಲೀಸ್ ಮುಂದೂಡಿಕೆ

ಮನೆಯಲ್ಲಿ ಕುಳಿತು ನೋಡಬಹುದು ‘ಪುಷ್ಪ’ ಚಿತ್ರ; ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ಗೆ ದಿನಾಂಕ ನಿಗದಿ

Published On - 2:28 pm, Wed, 5 January 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ