AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Arrest: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್

Darshan Pavithra Gowda Case: ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು.

Darshan Arrest: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್
Kiran HV
| Updated By: ರಾಜೇಶ್ ದುಗ್ಗುಮನೆ|

Updated on:Jun 11, 2024 | 11:55 AM

Share

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಹೋಟೆಲ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ

ಪವಿತ್ರಾ ಗೌಡ ಹಾಗೂ ದರ್ಶನ್ ಮಧ್ಯೆ ಆಪ್ತತೆ ಇದೆ. ಇಬ್ಬರೂ ಹಲವು ಕಡೆಗಳಲ್ಲಿ ಸುತ್ತಾಡಿ ಬಂದಿದ್ದರು. ಇವರ ಸಂಬಂಧದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:20 am, Tue, 11 June 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ