AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chetan Ahimsa: 14 ದಿನ ನ್ಯಾಯಾಂಗ ಬಂಧನಕ್ಕೆ ನಟ ಚೇತನ್​ ಅಹಿಂಸಾ; ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದ ಪೊಲೀಸರು

Aa Dinagalu Chetan | Judicial Custody: ನಟ ಚೇತನ್​ ಅಹಿಂಸಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ಅವರು ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಬೇಕಿದೆ.

Chetan Ahimsa: 14 ದಿನ ನ್ಯಾಯಾಂಗ ಬಂಧನಕ್ಕೆ ನಟ ಚೇತನ್​ ಅಹಿಂಸಾ; ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದ ಪೊಲೀಸರು
ಚೇತನ್ ಅಹಿಂಸಾ
ಮದನ್​ ಕುಮಾರ್​
|

Updated on: Mar 21, 2023 | 8:39 PM

Share

ಮುಖ್ಯಾಂಶಗಳು

  • ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿರುವ ನಟ ‘ಆ ದಿನಗಳು’ ಚೇತನ್​
  • ಚೇತನ್​ ಅಹಿಂಸಾ ಪೋಸ್ಟ್​ಗೆ ಹಿಂದೂಪರ ಸಂಘಟನೆಗಳಿಂದ ವಿರೋಧ
  • ಅರೆಸ್ಟ್​ ಬಳಿಕ ಚೇತನ್​ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್​

ಸೋಶಿಯಲ್​ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ್ದ ನಟ ‘ಆ ದಿನಗಳು’ ಚೇತನ್​ (Aa Dinagalu Chetan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ. ಅದರ ಅನ್ವಯ ಪರಪ್ಪನ ಅಗ್ರಹಾರ ಜೈಲಿಗೆ ಚೇತನ್​ ಅವರನ್ನು ಶಿಫ್ಟ್​ ಮಾಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿ ಚೇತನ್​ ಅಹಿಂಸಾ (Chetan Ahimsa) ವಿರುದ್ಧ ಐಪಿಸಿ ಸೆಕ್ಷನ್​ 295 ಎ ಹಾಗೂ 505 ಬಿ ಅಡಿಯಲ್ಲಿ ಪ್ರಕರಣ​ ದಾಖಲಾಗಿದೆ. ಆ ಸಂಬಂಧ ಇಂದು (ಮಾರ್ಚ್​ 21) ಬೆಳಗ್ಗೆ ಚೇತನ್​ ಅವರನ್ನು ಬಂಧಿಸಲಾಗಿತ್ತು. ಈಗ ನ್ಯಾಯಾಂಗ ಬಂಧನಕ್ಕೆ (Judicial Custody) ಕೋರ್ಟ್​ ಆದೇಶಿಸಿರುವುದರಿಂದ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.

ಚೇತನ್​ ಬಂಧನಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ:

ನಟ ಚೇತನ್​ ಅವರನ್ನು ಬಂಧಿಸಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್​ ಅವರನ್ನು ಅರೆಸ್ಟ್​ ಮಾಡಿರುವುದನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. ‘ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ನೀಡಲಾಗಿದೆ. ಹೇಳಿಕೆ ನೀಡಿದ ಮಾತ್ರಕ್ಕೆ ಬಂಧಿಸುವುದು ಸರಿಯಲ್ಲ. ಕೋರ್ಟ್​ನಲ್ಲಿ ಇಂತಹ ಕೇಸ್​ ನಿಲ್ಲುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ
Image
ಹಿಂದಿ ಹೇರಿಕೆಯಂತೆ, ಹಿಂದುತ್ವ ಹೇರಿಕೆಯನ್ನು ನಾವು ಒಪ್ಪಲ್ಲ ಎಂದ ಚೇತನ್ ಅಹಿಂಸಾ
Image
Chetan Ahimsa: ಭೂತಕೋಲ ಬಗ್ಗೆ ನೀಡಿದ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಚೇತನ್​ ಸ್ಪಷ್ಟನೆ; ಇಲ್ಲಿದೆ ಲೈವ್​ ವಿಡಿಯೋ
Image
‘ಕನ್ನಡ ಚಿತ್ರರಂಗ ಅತಿ ಕಳಪೆ’ ಎಂದವರಿಗೆ ಚೇತನ್​ ಬೆಂಬಲ; ಖಡಕ್​ ಎಚ್ಚರಿಕೆ ಕೊಟ್ಟ ರಕ್ಷಿತ್​ ಶೆಟ್ಟಿ

ಇದನ್ನೂ ಓದಿ: Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ

ಚೇತನ್​ ಮಾಡಿದ ಟ್ವೀಟ್​ನಲ್ಲಿ ಏನಿದೆ?

‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು. ಇದು ಒಂದು ಸುಳ್ಳು.

1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’. ಇದು ಒಂದು ಸುಳ್ಳು.

ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಸತ್ಯವೇ ಸಮಾನತೆ’ ಎಂದು ಚೇತನ್​ ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಇದನ್ನೂ ಓದಿ: ನಟ ಚೇತನ್​ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚೇತನ್​ ಮಾಡಿರುವ ಈ ಪೋಸ್ಟ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕೆಲವರು ಚೇತನ್ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ದೂರು ನೀಡಿವೆ. ಸಿನಿಮಾ ಹೊರತಾಗಿಯೂ ಚೇತನ್​ ಅವರು ಸುದ್ದಿ ಆಗುತ್ತಾರೆ. ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಅವರು ಆಗಾಗ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​