Chetan Ahimsa: 14 ದಿನ ನ್ಯಾಯಾಂಗ ಬಂಧನಕ್ಕೆ ನಟ ಚೇತನ್​ ಅಹಿಂಸಾ; ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದ ಪೊಲೀಸರು

Aa Dinagalu Chetan | Judicial Custody: ನಟ ಚೇತನ್​ ಅಹಿಂಸಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ಅವರು ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಬೇಕಿದೆ.

Chetan Ahimsa: 14 ದಿನ ನ್ಯಾಯಾಂಗ ಬಂಧನಕ್ಕೆ ನಟ ಚೇತನ್​ ಅಹಿಂಸಾ; ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದ ಪೊಲೀಸರು
ಚೇತನ್ ಅಹಿಂಸಾ

Updated on: Mar 21, 2023 | 8:39 PM

ಸೋಶಿಯಲ್​ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ್ದ ನಟ ‘ಆ ದಿನಗಳು’ ಚೇತನ್​ (Aa Dinagalu Chetan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ. ಅದರ ಅನ್ವಯ ಪರಪ್ಪನ ಅಗ್ರಹಾರ ಜೈಲಿಗೆ ಚೇತನ್​ ಅವರನ್ನು ಶಿಫ್ಟ್​ ಮಾಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿ ಚೇತನ್​ ಅಹಿಂಸಾ (Chetan Ahimsa) ವಿರುದ್ಧ ಐಪಿಸಿ ಸೆಕ್ಷನ್​ 295 ಎ ಹಾಗೂ 505 ಬಿ ಅಡಿಯಲ್ಲಿ ಪ್ರಕರಣ​ ದಾಖಲಾಗಿದೆ. ಆ ಸಂಬಂಧ ಇಂದು (ಮಾರ್ಚ್​ 21) ಬೆಳಗ್ಗೆ ಚೇತನ್​ ಅವರನ್ನು ಬಂಧಿಸಲಾಗಿತ್ತು. ಈಗ ನ್ಯಾಯಾಂಗ ಬಂಧನಕ್ಕೆ (Judicial Custody) ಕೋರ್ಟ್​ ಆದೇಶಿಸಿರುವುದರಿಂದ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.

ಚೇತನ್​ ಬಂಧನಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ:

ನಟ ಚೇತನ್​ ಅವರನ್ನು ಬಂಧಿಸಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್​ ಅವರನ್ನು ಅರೆಸ್ಟ್​ ಮಾಡಿರುವುದನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. ‘ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ನೀಡಲಾಗಿದೆ. ಹೇಳಿಕೆ ನೀಡಿದ ಮಾತ್ರಕ್ಕೆ ಬಂಧಿಸುವುದು ಸರಿಯಲ್ಲ. ಕೋರ್ಟ್​ನಲ್ಲಿ ಇಂತಹ ಕೇಸ್​ ನಿಲ್ಲುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ
ಹಿಂದಿ ಹೇರಿಕೆಯಂತೆ, ಹಿಂದುತ್ವ ಹೇರಿಕೆಯನ್ನು ನಾವು ಒಪ್ಪಲ್ಲ ಎಂದ ಚೇತನ್ ಅಹಿಂಸಾ
Chetan Ahimsa: ಭೂತಕೋಲ ಬಗ್ಗೆ ನೀಡಿದ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಚೇತನ್​ ಸ್ಪಷ್ಟನೆ; ಇಲ್ಲಿದೆ ಲೈವ್​ ವಿಡಿಯೋ
‘ಕನ್ನಡ ಚಿತ್ರರಂಗ ಅತಿ ಕಳಪೆ’ ಎಂದವರಿಗೆ ಚೇತನ್​ ಬೆಂಬಲ; ಖಡಕ್​ ಎಚ್ಚರಿಕೆ ಕೊಟ್ಟ ರಕ್ಷಿತ್​ ಶೆಟ್ಟಿ

ಇದನ್ನೂ ಓದಿ: Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ

ಚೇತನ್​ ಮಾಡಿದ ಟ್ವೀಟ್​ನಲ್ಲಿ ಏನಿದೆ?

‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು. ಇದು ಒಂದು ಸುಳ್ಳು.

1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’. ಇದು ಒಂದು ಸುಳ್ಳು.

ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಸತ್ಯವೇ ಸಮಾನತೆ’ ಎಂದು ಚೇತನ್​ ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಇದನ್ನೂ ಓದಿ: ನಟ ಚೇತನ್​ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚೇತನ್​ ಮಾಡಿರುವ ಈ ಪೋಸ್ಟ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕೆಲವರು ಚೇತನ್ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ದೂರು ನೀಡಿವೆ. ಸಿನಿಮಾ ಹೊರತಾಗಿಯೂ ಚೇತನ್​ ಅವರು ಸುದ್ದಿ ಆಗುತ್ತಾರೆ. ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಅವರು ಆಗಾಗ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us