Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Chetan: ನಟ ಚೇತನ್​ಗೆ ಜಾಮೀನು; ಆಕ್ಷೇಪಾರ್ಹ ಟ್ವೀಟ್​ ಪ್ರಕರಣದಲ್ಲಿ ರಿಲೀಫ್​

32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್​ಗೆ ಜಾಮೀನು ಸಿಕ್ಕಿದೆ. ಕೆಲ ಷರತ್ತುಗಳನ್ನು ಹಾಕಿ ಜಾಮೀನು ನೀಡಲಾಗಿದೆ. ಇದರಿಂದ ನಟನಿಗೆ ಕೊಂಚ ರಿಲೀಫ್​ ಆಗಿದೆ.

Actor Chetan: ನಟ ಚೇತನ್​ಗೆ ಜಾಮೀನು; ಆಕ್ಷೇಪಾರ್ಹ ಟ್ವೀಟ್​ ಪ್ರಕರಣದಲ್ಲಿ ರಿಲೀಫ್​
ಚೇತನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 25, 2022 | 6:40 PM

ಸದಾ ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್​ (Actor Chetan) ಅವರು ಆಕ್ಷೇಪಾರ್ಹ ಟ್ವೀಟ್​ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಮಂಗಳವಾರ (ಫೆಬ್ರವರಿ 22) ಅವರನ್ನು ಬಂಧಿಸಿ, ಬುಧವಾರ (ಫೆಬ್ರವರಿ 23) 8ನೇ ಎಸಿಎಂಎಂ ಕೋರ್ಟ್‌ (ACMM Court) ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿತ್ತು. ಈಗ 32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್​ಗೆ ಜಾಮೀನು ಸಿಕ್ಕಿದೆ. ಕೆಲ ಷರತ್ತುಗಳನ್ನು ಹಾಕಿ ಜಾಮೀನು ನೀಡಲಾಗಿದೆ. ಇದರಿಂದ ನಟನಿಗೆ ಕೊಂಚ ರಿಲೀಫ್​ ಆಗಿದೆ.

ಚೇತನ್​ಗೆ ಜಾಮೀನು ನೀಡಲು ಕೆಲ ಷರತ್ತುಗಳನ್ನು ಹಾಕಲಾಗಿದೆ. ಒಂದು ಲಕ್ಷ ರೂ. ಬಾಂಡ್ ಕೊಡಬೇಕು. ಇಬ್ಬರ ಶ್ಯೂರಿಟಿ ಹಾಕಬೇಕು. ಪೊಲೀಸರು ನಡೆಸುವ ತನಿಖೆಗೆ ಸಹಕರಿಸಬೇಕು ಎಂಬುದು ಷರತ್ತಿನಲ್ಲಿದೆ. ಇತ್ತೀಚೆಗೆ ಹಿಜಾಬ್​ ವಿವಾದ ಸಾಕಷ್ಟು ಸುದ್ದಿಯಾಗಿತ್ತು. ​ಫೆಬ್ರವರಿ 16ರಂದು ಟ್ವೀಟ್​ ಮಾಡಿದ್ದ ಚೇತನ್, ಅದರಲ್ಲಿ ಹಿಜಾಬ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಅಲ್ಲದೆ, ಹೈಕೋರ್ಟ್​ ಜಡ್ಜ್​​ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು. ಇದರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು.

ಚೇತನ್​ಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರದಲ್ಲಿ ಮಾತನಾಡಿದ್ದ ಅವರ ಪತ್ನಿ ಮೇಘಾ, ‘ಚೇತನ್​ ತುಂಬ ಚೆನ್ನಾಗಿ ಇದ್ದಾರೆ. ಯಾರೂ ಚಿಂತೆ ಮಾಡಬೇಡಿ. ಅವರು ಧೈರ್ಯವಾಗಿದ್ದಾರೆ. ಈ ಘಟನೆಯಿಂದ ಅವರಿಗೆ ಏನೂ ತೊಂದರೆ ಆಗುವುದಿಲ್ಲ. ಅವರು ಆತಂಕಕ್ಕೆ ಒಳಗಾಗಿಲ್ಲ. ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಜನರು ನನಗೆ ಕರೆ ಮಾಡುತ್ತಿದ್ದಾರೆ. ಎಲ್ಲರೂ ಬೆಂಬಲ ನೀಡುತ್ತಿದ್ದಾರೆ. ನಮ್ಮ ವಕೀಲರ ತಂಡ ಇದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ’ ಎಂದಿದ್ದರು.

ಸಿನಿಮಾ ಹೊರತಾಗಿ ಹಲವು ಕಾರಣಗಳಿಂದಾಗಿ ಚೇತನ್​ ಸುದ್ದಿಯಲ್ಲಿ ಇರುತ್ತಾರೆ. ತಮ್ಮ ಸಿದ್ಧಾಂತದ ಕಾರಣದಿಂದ ಅವರು ಕೆಲವರ ವಿರೋಧ ಕಟ್ಟಿಕೊಂಡಿದ್ದಾರೆ. ಈಗ ಜಾಮೀನು ದೊರೆತಿರುವುದರಿಂದ ಅವರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

 ಇದನ್ನೂ ಓದಿ: Chetan kumar: ‘ಆ ದಿನಗಳು’ ಖ್ಯಾತಿಯ ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ 

‘ಚೇತನ್​ ಬಗ್ಗೆ ಚಿಂತೆ ಬೇಡ, ಸ್ಟ್ರಾಂಗ್​​ ಆಗಿದ್ದಾರೆ’; ನ್ಯಾಯಾಂಗ ಬಂಧನ ಕುರಿತು ನಟನ ಪತ್ನಿ ಪ್ರತಿಕ್ರಿಯೆ

Published On - 6:29 pm, Fri, 25 February 22

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್