AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Chetan: ನಟ ಚೇತನ್​ಗೆ ಜಾಮೀನು; ಆಕ್ಷೇಪಾರ್ಹ ಟ್ವೀಟ್​ ಪ್ರಕರಣದಲ್ಲಿ ರಿಲೀಫ್​

32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್​ಗೆ ಜಾಮೀನು ಸಿಕ್ಕಿದೆ. ಕೆಲ ಷರತ್ತುಗಳನ್ನು ಹಾಕಿ ಜಾಮೀನು ನೀಡಲಾಗಿದೆ. ಇದರಿಂದ ನಟನಿಗೆ ಕೊಂಚ ರಿಲೀಫ್​ ಆಗಿದೆ.

Actor Chetan: ನಟ ಚೇತನ್​ಗೆ ಜಾಮೀನು; ಆಕ್ಷೇಪಾರ್ಹ ಟ್ವೀಟ್​ ಪ್ರಕರಣದಲ್ಲಿ ರಿಲೀಫ್​
ಚೇತನ್
TV9 Web
| Edited By: |

Updated on:Feb 25, 2022 | 6:40 PM

Share

ಸದಾ ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್​ (Actor Chetan) ಅವರು ಆಕ್ಷೇಪಾರ್ಹ ಟ್ವೀಟ್​ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಮಂಗಳವಾರ (ಫೆಬ್ರವರಿ 22) ಅವರನ್ನು ಬಂಧಿಸಿ, ಬುಧವಾರ (ಫೆಬ್ರವರಿ 23) 8ನೇ ಎಸಿಎಂಎಂ ಕೋರ್ಟ್‌ (ACMM Court) ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿತ್ತು. ಈಗ 32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್​ಗೆ ಜಾಮೀನು ಸಿಕ್ಕಿದೆ. ಕೆಲ ಷರತ್ತುಗಳನ್ನು ಹಾಕಿ ಜಾಮೀನು ನೀಡಲಾಗಿದೆ. ಇದರಿಂದ ನಟನಿಗೆ ಕೊಂಚ ರಿಲೀಫ್​ ಆಗಿದೆ.

ಚೇತನ್​ಗೆ ಜಾಮೀನು ನೀಡಲು ಕೆಲ ಷರತ್ತುಗಳನ್ನು ಹಾಕಲಾಗಿದೆ. ಒಂದು ಲಕ್ಷ ರೂ. ಬಾಂಡ್ ಕೊಡಬೇಕು. ಇಬ್ಬರ ಶ್ಯೂರಿಟಿ ಹಾಕಬೇಕು. ಪೊಲೀಸರು ನಡೆಸುವ ತನಿಖೆಗೆ ಸಹಕರಿಸಬೇಕು ಎಂಬುದು ಷರತ್ತಿನಲ್ಲಿದೆ. ಇತ್ತೀಚೆಗೆ ಹಿಜಾಬ್​ ವಿವಾದ ಸಾಕಷ್ಟು ಸುದ್ದಿಯಾಗಿತ್ತು. ​ಫೆಬ್ರವರಿ 16ರಂದು ಟ್ವೀಟ್​ ಮಾಡಿದ್ದ ಚೇತನ್, ಅದರಲ್ಲಿ ಹಿಜಾಬ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಅಲ್ಲದೆ, ಹೈಕೋರ್ಟ್​ ಜಡ್ಜ್​​ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು. ಇದರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು.

ಚೇತನ್​ಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರದಲ್ಲಿ ಮಾತನಾಡಿದ್ದ ಅವರ ಪತ್ನಿ ಮೇಘಾ, ‘ಚೇತನ್​ ತುಂಬ ಚೆನ್ನಾಗಿ ಇದ್ದಾರೆ. ಯಾರೂ ಚಿಂತೆ ಮಾಡಬೇಡಿ. ಅವರು ಧೈರ್ಯವಾಗಿದ್ದಾರೆ. ಈ ಘಟನೆಯಿಂದ ಅವರಿಗೆ ಏನೂ ತೊಂದರೆ ಆಗುವುದಿಲ್ಲ. ಅವರು ಆತಂಕಕ್ಕೆ ಒಳಗಾಗಿಲ್ಲ. ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಜನರು ನನಗೆ ಕರೆ ಮಾಡುತ್ತಿದ್ದಾರೆ. ಎಲ್ಲರೂ ಬೆಂಬಲ ನೀಡುತ್ತಿದ್ದಾರೆ. ನಮ್ಮ ವಕೀಲರ ತಂಡ ಇದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ’ ಎಂದಿದ್ದರು.

ಸಿನಿಮಾ ಹೊರತಾಗಿ ಹಲವು ಕಾರಣಗಳಿಂದಾಗಿ ಚೇತನ್​ ಸುದ್ದಿಯಲ್ಲಿ ಇರುತ್ತಾರೆ. ತಮ್ಮ ಸಿದ್ಧಾಂತದ ಕಾರಣದಿಂದ ಅವರು ಕೆಲವರ ವಿರೋಧ ಕಟ್ಟಿಕೊಂಡಿದ್ದಾರೆ. ಈಗ ಜಾಮೀನು ದೊರೆತಿರುವುದರಿಂದ ಅವರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

 ಇದನ್ನೂ ಓದಿ: Chetan kumar: ‘ಆ ದಿನಗಳು’ ಖ್ಯಾತಿಯ ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ 

‘ಚೇತನ್​ ಬಗ್ಗೆ ಚಿಂತೆ ಬೇಡ, ಸ್ಟ್ರಾಂಗ್​​ ಆಗಿದ್ದಾರೆ’; ನ್ಯಾಯಾಂಗ ಬಂಧನ ಕುರಿತು ನಟನ ಪತ್ನಿ ಪ್ರತಿಕ್ರಿಯೆ

Published On - 6:29 pm, Fri, 25 February 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ