AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೇತನ್​ ಅಪಹರಣವಾಗಿದೆ’ ಎಂದ ಪತ್ನಿ ಮೇಘಾ; ಅವರನ್ನು ಬಂಧಿಸಿದ್ದೇವೆ ಎಂದ ಪೊಲೀಸರು

ಅವರ ಪತ್ನಿ ಮೇಘಾ ಅವರು ಫೇಸ್​ಬುಕ್​ ಲೈವ್​ ಬಂದು ಪೊಲೀಸರ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ‘ನನ್ನ ಪತಿಯ ಅಪಹರಣವಾಗಿದೆ’ ಎಂದು ಹೇಳಿಕೊಂಡಿದ್ದಾರೆ ಮೇಘಾ.

‘ಚೇತನ್​ ಅಪಹರಣವಾಗಿದೆ’ ಎಂದ ಪತ್ನಿ ಮೇಘಾ; ಅವರನ್ನು ಬಂಧಿಸಿದ್ದೇವೆ ಎಂದ ಪೊಲೀಸರು
ಮೇಘಾ-ಚೇತನ್​ ಕುಮಾರ್​
TV9 Web
| Edited By: |

Updated on:Feb 22, 2022 | 9:27 PM

Share

ನಟ ‘ಆ ದಿನಗಳು’ ಚೇತನ್ (Chetan) ಸದಾ ವಿವಾದದ ಮೂಲಕವೇ ಸುದ್ದಿ ಆಗುತ್ತಿರುತ್ತಾರೆ. ಈ ಮೊದಲು ಅವರು ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಇಂದು (ಫೆಬ್ರವರಿ 22) ನಟ ಚೇತನ್‌ ಅವರನ್ನು ಶೇಷಾದ್ರಿಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಅವರ ಪತ್ನಿ ಮೇಘಾ ಅವರು ಫೇಸ್​ಬುಕ್​ ಲೈವ್​ ಬಂದು ಪೊಲೀಸರ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ‘ನನ್ನ ಪತಿಯ ಅಪಹರಣವಾಗಿದೆ’ ಎಂದು ಹೇಳಿಕೊಂಡಿದ್ದಾರೆ ಮೇಘಾ (Megha S). ಇದಕ್ಕೆ ಪೊಲೀಸರಿಂದ ಸ್ಪಷ್ಟನೆ ಸಿಕ್ಕಿದ್ದು, ಅವರನ್ನು ಬಂಧಿಸಿದ್ದೇವೆ ಎಂದಿದ್ದಾರೆ.

ಚೇತನ್​ ಕುಮಾರ್​ ಅವರ ಫೇಸ್​ಬುಕ್​ ಪೇಜ್​ನಿಂದ ಲೈವ್​ ಬಂದಿರುವ ಮೇಘಾ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಚೇತನ್​ ಅವರು ಮನೆಯಲ್ಲೇ ಇದ್ದರು.  ನಂತರ ಅವರು ಕಾಣಿಸಲಿಲ್ಲ. ಪೊಲೀಸರು ಬಂದು ಅವರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಕೆಲವರು ಹೇಳಿದರು. ಫೋನ್​ ಆಫ್​ ಆಗಿದೆ. ಈಗ ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿದ್ದೇನೆ.  ಚೇತನ್​ ನಮ್ಮ ಬಳಿ ಇಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ’ ಎಂದಿದ್ದಾರೆ ಮೇಘಾ.

‘ಚೇತನ್​ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ನೇರವಾಗಿ ಬಂದು ಚೇತನ್​ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಚೇತನ್​ ಎಲ್ಲಿದ್ದಾರೆ ಎಂದೂ ಹೇಳುತ್ತಿಲ್ಲ. ಇದೊಂದು ರೀತಿ ಕಿಡ್ನ್ಯಾಪ್​ ಮಾಡಿದಂತೆ. ನಮಗೆ ಅನ್ಯಾಯ ಆಗಿದೆ. ಪೊಲೀಸ್​ ಆದರೂ ನಮಗೆ ಮಾಹಿತಿ ನೀಡಬಹುದಿತ್ತು. ಅದನ್ನೂ ಮಾಡುತ್ತಿಲ್ಲ’ ಎಂದು ಮೇಘಾ ಆರೋಪಿಸಿದ್ದಾರೆ.

‘ಶೇಷಾದ್ರಿಪುರಂ ಠಾಣೆಯ ಪೊಲೀಸರು ಚೇತನ್​ರನ್ನು ಬಂಧಿಸಿದ್ದಾರೆ. ನ್ಯಾಯಾಧೀಶರಿಗೆ ನಿಂದಿಸಿದ ಆರೋಪ ಪ್ರಕರಣದಡಿ ಬಂಧನ ನಡೆದಿದೆ. ಸ್ವಯಂಪ್ರೇರಿತ ಕೇಸ್‌ ದಾಖಲಿಸಿ ನಟ ಚೇತನ್‌ನನ್ನ ಬಂಧಿಸಿದ್ದೇವೆ’ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್​.ಅನುಚೇತ್ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಮೇಕಾದಾಟು ಯೋಜನೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್​ ಪಾದಯಾತ್ರೆ ನಡೆಸಿತ್ತು. ಇದನ್ನು ಚೇತನ್​ ವಿರೋಧಿಸಿದ್ದರು. ‘ಮೂರು ರಾಜಕೀಯ ಪಕ್ಷಗಳು ಈ ಯೋಜನೆಯಲ್ಲಿ ಅವಕಾಶವಾದ ರಾಜಕಾರಣ ಮಾಡುತ್ತಿವೆ. ಅದು ಬೆಳಕಿಗೆ ಬಂದಿದೆ. ಇಡೀ ಕರ್ನಾಟಕವೇ ಮೇಕೆದಾಟು ಅಣೆಕಟ್ಟು ಪರವಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದನ್ನು ನಾವು ಒಪ್ಪಲ್ಲ. ನಾಳೆ ರಸ್ತೆಗೆ ಬಂದು ಪ್ರತಿಭಟನೆ ಮಾಡುತ್ತೇವೆ. ಕರ್ನಾಟಕದ ನೆಲ, ಜಲದ ಪರವಾಗಿ ನಾವೂ ಇದ್ದೇವೆ. ಆದರೆ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ವಿರೋಧ ಇದೆ. ಜನಪರ, ಪರಸರ ಸ್ನೇಹಿ ವಿಚಾರಗಳನ್ನು ತರಬೇಕು’ ಎಂದು ಚೇತನ್ ಕುಮಾರ್​​ ಹೇಳಿದ್ದರು.

ಇದನ್ನೂ ಓದಿ: ‘ರಜನಿಕಾಂತ್ ಅವರಿಗೆ ಕಂಡಕ್ಟರ್ ಕೆಲಸ ಕೊಡಿಸಿದ್ದು ನಮ್ಮ ತಾತ’; ರಜನಿಕಾಂತ್ ಸಂಬಂಧಿ ಎಂದಿರುವ ಚೇತನ್ ಹೇಳಿಕೆ

‘ಅಧಿಕಾರ ದಾಹಕ್ಕಾಗಿ ಮತಾಂತರ ನಿಷೇಧ ಕಾಯ್ದೆ’: ಬೊಮ್ಮಾಯಿ ವಿರುದ್ಧ ಚೇತನ್​ ಗರಂ

Published On - 5:48 pm, Tue, 22 February 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ