AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತನ್​ ಕೇವಲ 1 ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದೇಕೆ? ಶಿವರಾಮ್​ ಹೆಬ್ಬಾರ್​ ಜತೆಗಿನ ಜಟಾಪಟಿ ಬಗ್ಗೆ ನಟನ ಪ್ರತಿಕ್ರಿಯೆ

Shivaram Hebbar: ಶಿವರಾಮ್​ ಹೆಬ್ಬಾರ್​ ವಿರುದ್ಧ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿದ್ದು ಯಾಕೆಂದರೆ, ಇದು ದುಡ್ಡಿಗಾಗಿ ಹಾಕಿರುವುದಲ್ಲ. ಲಕ್ಷ, ಕೋಟಿ ಹಾಕುವ ಉದ್ದೇಶ ಇಲ್ಲ ಎಂದು ಚೇತನ್​ ಪ್ರತಿಕ್ರಿಯಿಸಿದ್ದಾರೆ.

ಚೇತನ್​ ಕೇವಲ 1 ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದೇಕೆ? ಶಿವರಾಮ್​ ಹೆಬ್ಬಾರ್​ ಜತೆಗಿನ ಜಟಾಪಟಿ ಬಗ್ಗೆ ನಟನ ಪ್ರತಿಕ್ರಿಯೆ
ನಟ ಚೇತನ್​ ಕುಮಾರ್
TV9 Web
| Edited By: |

Updated on: Jun 27, 2021 | 4:14 PM

Share

ನಟ ಚೇತನ್​ ಅವರು ಬ್ರಾಹ್ಮಣ್ಯದ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದನ್ನು ಖಂಡಿಸಿ, ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​ ಟ್ವೀಟ್​ ಮಾಡಿದ್ದರು. ಆ ಟ್ವೀಟ್​ನಿಂದ ತಮ್ಮ ತೇಜೋವಧೆ ಆಗಿದೆ ಎಂದು ಆರೋಪಿಸಿ ಸಚಿವರ ವಿರುದ್ಧ ಚೇತನ್​ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅಷ್ಟಕ್ಕೂ ಚೇತನ್​ 1 ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದಾದರೂ ಯಾಕೆ ಎಂಬ ಅನುಮಾನ ಎಲ್ಲರಲ್ಲೂ ಮೂಡಿತ್ತು. ಆ ಬಗ್ಗೆ ಅವರೀಗ ಪ್ರತಿಕ್ರಿಯೆ ನೀಡಿದ್ದಾರೆ.

‘ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿದ್ದು ಯಾಕೆಂದರೆ, ಇದು ದುಡ್ಡಿಗಾಗಿ ಹಾಕಿರುವುದಲ್ಲ. ಲಕ್ಷ, ಕೋಟಿ ಹಾಕುವ ಉದ್ದೇಶ ಇಲ್ಲ. ಒಂದು ಮೊತ್ತ ಹಾಕಬೇಕು. ಅದರಲ್ಲಿ ಅತೀ ಕಡಿಮೆ ಎಂದರೆ ಒಂದು ರೂಪಾಯಿ. ಅದನ್ನು ಸಾಂಕೇತಿಕವಾಗಿ ಹಾಕಿದ್ದೇನೆ. ಅವರು ಕ್ಷಮೆ ಕೇಳಬೇಕು. ಗಂಜಿ ಕಾಸು, ಕಂಟಕಕರ ಅಂತ ಮಾತನಾಡಿರುವುದು ತಪ್ಪು’ ಎಂದು ಚೇತನ್​ ಹೇಳಿದ್ದಾರೆ.

‘ನಾವು ಪ್ರಜಾಪ್ರಭುತ್ವವನ್ನು ನಂಬುವವರು. ಚರ್ಚೆಯನ್ನು ನಂಬುವವರು. ನೀವು ಚರ್ಚೆ ಮಾಡಿ. ನಿಮ್ಮಂತೆ ನಮಗೂ ಮಾತನಾಡುವ ಹಕ್ಕಿದೆ. ಜನಸೇವಕರಾದ​ ನಿಮ್ಮಂದ ನಾವು ಏನಾದರೂ ಕಲಿಯಲು ಸಿದ್ಧರಿದ್ದೇವೆ. ನಮ್ಮಿಂದ ಕಲಿಯುವುದು ಇದ್ದರೆ ನೀವು ಅದನ್ನು ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಅಧಿಕೃತ ಟ್ವಿಟರ್​ ಖಾತೆ ಮೂಲಕ ಈ ರೀತಿ ಮಾತನಾಡುವುದನ್ನು ನಾನು ಒಪ್ಪುವುದಿಲ್ಲ. ಅದಕ್ಕೆ ನಾನು ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ಕ್ರಿಮಿನಲ್​ ಹಾಕಿಲ್ಲ, ಸಿವಿಲ್​ ಹಾಕಿದ್ದೇನೆ. ಅವರು ಕ್ಷಮೆ ಕೇಳಲಿ’ ಎಂದು ಚೇತನ್​ ಹೇಳಿದ್ದಾರೆ.

1 ರೂ. ಮಾನನಷ್ಟ ಪರಿಹಾರ ನೀಡಬೇಕು ಮತ್ತು ಬೇಷರತ್​ ಕ್ಷಮೆ ಯಾಚಿಸಬೇಕು ಎಂದು ಚೇತನ್​ ಹೂಡಿರುವ ಮೊಕದ್ದಮೆಗೆ ಸಂಬಂಧಿಸಿದಂತೆ ಸಿಟಿ ಸಿವಿಲ್​ ಸೆಷನ್ಸ್​ ಕೋರ್ಟ್​ನಿಂದ ಸಚಿವ ಶಿವರಾಮ್​ ಹೆಬ್ಬಾರ್​ಗೆ ನೋಟಿಸ್​ ಜಾರಿ ಮಾಡಲಾಗಿದೆ. ಜು.14ಕ್ಕೆ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ:

ಚೇತನ್​ ಗಡಿಪಾರಿಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ; ನಟನ ಪ್ರತಿಕ್ರಿಯೆ ಏನು?

ನಟ ಚೇತನ್​ ಈವರೆಗೆ ಒಮ್ಮೆಯೂ ವೋಟ್​ ಹಾಕಿಲ್ಲ; ಅದಕ್ಕೆ ಇದೆ ಒಂದು ವಿಶೇಷ ಕಾರಣ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ