ಬ್ರಾಹ್ಮಣ್ಯ ಅನ್ನೋ ಭೇದ-ಭಾವದ ವಿರುದ್ಧ ನನ್ನ ಹೊರಾಟ: ನಟ ಚೇತನ್
ಬ್ರಾಹ್ಮಣ್ಯ ಅನ್ನೊ ಭೇದ-ಭಾವದ ವಿರುದ್ಧ ನನ್ನ ಹೊರಟವೇ ಹೊರತು, ಯಾವ ಜಾತಿ ಅಥವಾ ಜನಾಂಗದ ವಿರುದ್ಧವಲ್ಲ. ನೋಟಿಸ್ ಹಿನ್ನೆಲೆಯಲ್ಲಿ ಇಂದು ಬಸವನಗುಡಿ ಠಾಣೆಗೆ ಬಂದಿದ್ದೆ ಎಂದಿದ್ದಾರೆ ಚೇತನ್.
ಬ್ರಾಹ್ಮಣ್ಯ ಅನ್ನೊ ಭೇದ-ಭಾವದ ವಿರುದ್ಧ ನನ್ನ ಹೊರಟವೇ ಹೊರತು, ಯಾವ ಜಾತಿ ಅಥವಾ ಜನಾಂಗದ ವಿರುದ್ಧವಲ್ಲ. ನೋಟಿಸ್ ಹಿನ್ನೆಲೆಯಲ್ಲಿ ಇಂದು ಬಸವನಗುಡಿ ಠಾಣೆಗೆ ಬಂದಿದ್ದೆ. ಕಾನೂನಿನ ಬಗ್ಗೆ ಗೌರವ ಇದೆ ಎಂದು ನಟ ಚೇತನ್ ಹೇಳಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ ನಟ ಚೇತನ್ ಅವರಿಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ, ಇಂದು ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು.
‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ. ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
Loading...
Unable to load recommendations.
Follow Us

