AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಗೆ ಜೈಲೂಟ ಸಖತ್ ಇಷ್ಟ, ಬೇರೆಯವರಿಗೆ ಏಕೆ ಕಷ್ಟವೋ ಗೊತ್ತಿಲ್ಲ’; ನಟ ಚೇತನ್

ದರ್ಶನ್ ಅರೆಸ್ಟ್ ಆಗಿರೋ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳು ಅವರನ್ನು ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ದರ್ಶನ್ ಬಗ್ಗೆ ಟೀಕೆ ಮಾಡಿದ್ದಾರೆ. ಈಗ ದರ್ಶನ್ ಜೈಲೂಟದ ಬಗ್ಗೆ ದೂರು ನೀಡುತ್ತಿರುವ ಬಗ್ಗೆ ನಟ ಚೇತನ್ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ನಂಗೆ ಜೈಲೂಟ ಸಖತ್ ಇಷ್ಟ, ಬೇರೆಯವರಿಗೆ ಏಕೆ ಕಷ್ಟವೋ ಗೊತ್ತಿಲ್ಲ’; ನಟ ಚೇತನ್
ದರ್ಶನ್-ಚೇತನ್
ರಾಜೇಶ್ ದುಗ್ಗುಮನೆ
|

Updated on: Jul 31, 2024 | 10:44 AM

Share

ನಟ ದರ್ಶನ್ ಅವರು ಜೈಲೂಟ ಚೆನ್ನಾಗಿಲ್ಲ, ಮನೆ ಊಟ ಕೊಡಿ ಎಂದು ಪದೇ ಪದೇ ಕೇಳಿಕೊಳ್ಳುತ್ತಿದ್ದಾರೆ. ಈಗಾಗಲೇ ಕೋರ್ಟ್​ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಕೆ ಆಗಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಬಳಿ ಮನೆ ಊಟ ಕೊಡೋಕೆ ಕೇಳಿದ್ದರು. ಆದರೆ, ಈ ಅರ್ಜಿ ತಿರಸ್ಕರಿಸಲ್ಪಟ್ಟಿದೆ. ಇದನ್ನು ದರ್ಶನ್ ಅವರು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದಾರೆ. ಈ ಮಧ್ಯೆ ‘ಆ ದಿನಗಳು’ ಚೇತನ್ ಅವರು ಜೈಲೂಟವನ್ನು ಹೊಗಳಿದ್ದಾರೆ. ‘ನಂಗೆ ಜೈಲೂಟ ಸಖತ್ ಇಷ್ಟ’ ಎಂದಿದ್ದಾರೆ.

ದರ್ಶನ್ ಅರೆಸ್ಟ್ ಆಗಿರೋ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳು ಅವರನ್ನು ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ದರ್ಶನ್ ಬಗ್ಗೆ ಟೀಕೆ ಮಾಡಿದ್ದಾರೆ. ಈಗ ದರ್ಶನ್ ಜೈಲೂಟದ ಬಗ್ಗೆ ದೂರು ನೀಡುತ್ತಿರುವ ಬಗ್ಗೆ ನಟ ಚೇತನ್ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಜೈಲೂಟು ನನಗೆ ಸಖತ್ ಇಷ್ಟ. ನನ್ನ ಬರ್ತ್​ಡೇ ದಿನ ನಾನು ಜೈಲಿನಲ್ಲಿ ಇದ್ದೆ. ಆ ದಿನ ಪುಳಿಯೋಗರೆ ಕೊಟ್ಟಿದ್ದರು. ಆ ಪುಳಿಯೋಗರೆ ನನಗೆ ಸಖತ್ ಇಷ್ಟ. ನನಗೆ ಏನು ಕೊಟ್ಟರೂ ಅದನ್ನು ತಿನ್ನುತ್ತಿದ್ದೆ. ಹೀಗಾಗಿ, ಅಲ್ಲಿಯ ಊಟ ನನಗೆ ಸಮಸ್ಯೆ ಆಗಿಲ್ಲ. ಬೇರೆಯವರಿಗೆ ಕಷ್ಟ ಆದರೆ ಅದು ಅವರು ಅಭ್ಯಾಸ ಮಾಡಿಕೊಂಡಿದ್ದು’ ಎಂದಿದ್ದಾರೆ ಚೇತನ್. ಈ ಮೂಲಕ ಪರೋಕ್ಷವಾಗಿ ದರ್ಶನ್ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ದರ್ಶನ್ ಬರೆದಿದ್ದ ಪತ್ರದಲ್ಲಿ ಏನಿತ್ತು?

ದರ್ಶನ್ ಅವರನ್ನು ಚೇತನ್ ಭೇಟಿ ಮಾಡಿದ್ದು ಕೆಲವೇ ಕೆಲವು ಬಾರಿಯಂತೆ. ಈ ಬಗ್ಗೆ ಮಾತನಾಡಿರೋ ಅವರು, ‘ದರ್ಶನ್ ಅವರನ್ನು ಎರಡು ಮೂರು ಭೇಟಿ ಮಾಡಿದ್ದೆ ಅಷ್ಟೆ. ಅವರ ಬಗ್ಗೆ ನನಗೆ ಗೊತ್ತಾಗೋದು ಮಾಧ್ಯಮದವರಿಂದ. ನ್ಯಾಯಾಲಯದ ವ್ಯವಸ್ಥೆಯ​ ಮೇಲೆ ನಂಬಿಕೆ ಇದೆ. ಈ ಪ್ರಕರಣದಲ್ಲಿ ಪೊಲೀಸರು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಪ್ಪು ಮಾಡದೆ ಇದ್ದರೆ ಶಿಕ್ಷೆ ಆಗಬಾರದು’ ಎಂದಿದ್ದಾರೆ ಚೇತನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?