AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಗೆ ಜೈಲೂಟ ಸಖತ್ ಇಷ್ಟ, ಬೇರೆಯವರಿಗೆ ಏಕೆ ಕಷ್ಟವೋ ಗೊತ್ತಿಲ್ಲ’; ನಟ ಚೇತನ್

ದರ್ಶನ್ ಅರೆಸ್ಟ್ ಆಗಿರೋ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳು ಅವರನ್ನು ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ದರ್ಶನ್ ಬಗ್ಗೆ ಟೀಕೆ ಮಾಡಿದ್ದಾರೆ. ಈಗ ದರ್ಶನ್ ಜೈಲೂಟದ ಬಗ್ಗೆ ದೂರು ನೀಡುತ್ತಿರುವ ಬಗ್ಗೆ ನಟ ಚೇತನ್ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ನಂಗೆ ಜೈಲೂಟ ಸಖತ್ ಇಷ್ಟ, ಬೇರೆಯವರಿಗೆ ಏಕೆ ಕಷ್ಟವೋ ಗೊತ್ತಿಲ್ಲ’; ನಟ ಚೇತನ್
ದರ್ಶನ್-ಚೇತನ್
ರಾಜೇಶ್ ದುಗ್ಗುಮನೆ
|

Updated on: Jul 31, 2024 | 10:44 AM

Share

ನಟ ದರ್ಶನ್ ಅವರು ಜೈಲೂಟ ಚೆನ್ನಾಗಿಲ್ಲ, ಮನೆ ಊಟ ಕೊಡಿ ಎಂದು ಪದೇ ಪದೇ ಕೇಳಿಕೊಳ್ಳುತ್ತಿದ್ದಾರೆ. ಈಗಾಗಲೇ ಕೋರ್ಟ್​ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಕೆ ಆಗಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಬಳಿ ಮನೆ ಊಟ ಕೊಡೋಕೆ ಕೇಳಿದ್ದರು. ಆದರೆ, ಈ ಅರ್ಜಿ ತಿರಸ್ಕರಿಸಲ್ಪಟ್ಟಿದೆ. ಇದನ್ನು ದರ್ಶನ್ ಅವರು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದಾರೆ. ಈ ಮಧ್ಯೆ ‘ಆ ದಿನಗಳು’ ಚೇತನ್ ಅವರು ಜೈಲೂಟವನ್ನು ಹೊಗಳಿದ್ದಾರೆ. ‘ನಂಗೆ ಜೈಲೂಟ ಸಖತ್ ಇಷ್ಟ’ ಎಂದಿದ್ದಾರೆ.

ದರ್ಶನ್ ಅರೆಸ್ಟ್ ಆಗಿರೋ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳು ಅವರನ್ನು ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ದರ್ಶನ್ ಬಗ್ಗೆ ಟೀಕೆ ಮಾಡಿದ್ದಾರೆ. ಈಗ ದರ್ಶನ್ ಜೈಲೂಟದ ಬಗ್ಗೆ ದೂರು ನೀಡುತ್ತಿರುವ ಬಗ್ಗೆ ನಟ ಚೇತನ್ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಜೈಲೂಟು ನನಗೆ ಸಖತ್ ಇಷ್ಟ. ನನ್ನ ಬರ್ತ್​ಡೇ ದಿನ ನಾನು ಜೈಲಿನಲ್ಲಿ ಇದ್ದೆ. ಆ ದಿನ ಪುಳಿಯೋಗರೆ ಕೊಟ್ಟಿದ್ದರು. ಆ ಪುಳಿಯೋಗರೆ ನನಗೆ ಸಖತ್ ಇಷ್ಟ. ನನಗೆ ಏನು ಕೊಟ್ಟರೂ ಅದನ್ನು ತಿನ್ನುತ್ತಿದ್ದೆ. ಹೀಗಾಗಿ, ಅಲ್ಲಿಯ ಊಟ ನನಗೆ ಸಮಸ್ಯೆ ಆಗಿಲ್ಲ. ಬೇರೆಯವರಿಗೆ ಕಷ್ಟ ಆದರೆ ಅದು ಅವರು ಅಭ್ಯಾಸ ಮಾಡಿಕೊಂಡಿದ್ದು’ ಎಂದಿದ್ದಾರೆ ಚೇತನ್. ಈ ಮೂಲಕ ಪರೋಕ್ಷವಾಗಿ ದರ್ಶನ್ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ದರ್ಶನ್ ಬರೆದಿದ್ದ ಪತ್ರದಲ್ಲಿ ಏನಿತ್ತು?

ದರ್ಶನ್ ಅವರನ್ನು ಚೇತನ್ ಭೇಟಿ ಮಾಡಿದ್ದು ಕೆಲವೇ ಕೆಲವು ಬಾರಿಯಂತೆ. ಈ ಬಗ್ಗೆ ಮಾತನಾಡಿರೋ ಅವರು, ‘ದರ್ಶನ್ ಅವರನ್ನು ಎರಡು ಮೂರು ಭೇಟಿ ಮಾಡಿದ್ದೆ ಅಷ್ಟೆ. ಅವರ ಬಗ್ಗೆ ನನಗೆ ಗೊತ್ತಾಗೋದು ಮಾಧ್ಯಮದವರಿಂದ. ನ್ಯಾಯಾಲಯದ ವ್ಯವಸ್ಥೆಯ​ ಮೇಲೆ ನಂಬಿಕೆ ಇದೆ. ಈ ಪ್ರಕರಣದಲ್ಲಿ ಪೊಲೀಸರು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಪ್ಪು ಮಾಡದೆ ಇದ್ದರೆ ಶಿಕ್ಷೆ ಆಗಬಾರದು’ ಎಂದಿದ್ದಾರೆ ಚೇತನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ