AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಗೆ ಜೈಲೂಟ ಸಖತ್ ಇಷ್ಟ, ಬೇರೆಯವರಿಗೆ ಏಕೆ ಕಷ್ಟವೋ ಗೊತ್ತಿಲ್ಲ’; ನಟ ಚೇತನ್

ದರ್ಶನ್ ಅರೆಸ್ಟ್ ಆಗಿರೋ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳು ಅವರನ್ನು ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ದರ್ಶನ್ ಬಗ್ಗೆ ಟೀಕೆ ಮಾಡಿದ್ದಾರೆ. ಈಗ ದರ್ಶನ್ ಜೈಲೂಟದ ಬಗ್ಗೆ ದೂರು ನೀಡುತ್ತಿರುವ ಬಗ್ಗೆ ನಟ ಚೇತನ್ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ನಂಗೆ ಜೈಲೂಟ ಸಖತ್ ಇಷ್ಟ, ಬೇರೆಯವರಿಗೆ ಏಕೆ ಕಷ್ಟವೋ ಗೊತ್ತಿಲ್ಲ’; ನಟ ಚೇತನ್
ದರ್ಶನ್-ಚೇತನ್
ರಾಜೇಶ್ ದುಗ್ಗುಮನೆ
|

Updated on: Jul 31, 2024 | 10:44 AM

Share

ನಟ ದರ್ಶನ್ ಅವರು ಜೈಲೂಟ ಚೆನ್ನಾಗಿಲ್ಲ, ಮನೆ ಊಟ ಕೊಡಿ ಎಂದು ಪದೇ ಪದೇ ಕೇಳಿಕೊಳ್ಳುತ್ತಿದ್ದಾರೆ. ಈಗಾಗಲೇ ಕೋರ್ಟ್​ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಕೆ ಆಗಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಬಳಿ ಮನೆ ಊಟ ಕೊಡೋಕೆ ಕೇಳಿದ್ದರು. ಆದರೆ, ಈ ಅರ್ಜಿ ತಿರಸ್ಕರಿಸಲ್ಪಟ್ಟಿದೆ. ಇದನ್ನು ದರ್ಶನ್ ಅವರು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದಾರೆ. ಈ ಮಧ್ಯೆ ‘ಆ ದಿನಗಳು’ ಚೇತನ್ ಅವರು ಜೈಲೂಟವನ್ನು ಹೊಗಳಿದ್ದಾರೆ. ‘ನಂಗೆ ಜೈಲೂಟ ಸಖತ್ ಇಷ್ಟ’ ಎಂದಿದ್ದಾರೆ.

ದರ್ಶನ್ ಅರೆಸ್ಟ್ ಆಗಿರೋ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳು ಅವರನ್ನು ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ದರ್ಶನ್ ಬಗ್ಗೆ ಟೀಕೆ ಮಾಡಿದ್ದಾರೆ. ಈಗ ದರ್ಶನ್ ಜೈಲೂಟದ ಬಗ್ಗೆ ದೂರು ನೀಡುತ್ತಿರುವ ಬಗ್ಗೆ ನಟ ಚೇತನ್ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಜೈಲೂಟು ನನಗೆ ಸಖತ್ ಇಷ್ಟ. ನನ್ನ ಬರ್ತ್​ಡೇ ದಿನ ನಾನು ಜೈಲಿನಲ್ಲಿ ಇದ್ದೆ. ಆ ದಿನ ಪುಳಿಯೋಗರೆ ಕೊಟ್ಟಿದ್ದರು. ಆ ಪುಳಿಯೋಗರೆ ನನಗೆ ಸಖತ್ ಇಷ್ಟ. ನನಗೆ ಏನು ಕೊಟ್ಟರೂ ಅದನ್ನು ತಿನ್ನುತ್ತಿದ್ದೆ. ಹೀಗಾಗಿ, ಅಲ್ಲಿಯ ಊಟ ನನಗೆ ಸಮಸ್ಯೆ ಆಗಿಲ್ಲ. ಬೇರೆಯವರಿಗೆ ಕಷ್ಟ ಆದರೆ ಅದು ಅವರು ಅಭ್ಯಾಸ ಮಾಡಿಕೊಂಡಿದ್ದು’ ಎಂದಿದ್ದಾರೆ ಚೇತನ್. ಈ ಮೂಲಕ ಪರೋಕ್ಷವಾಗಿ ದರ್ಶನ್ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ದರ್ಶನ್ ಬರೆದಿದ್ದ ಪತ್ರದಲ್ಲಿ ಏನಿತ್ತು?

ದರ್ಶನ್ ಅವರನ್ನು ಚೇತನ್ ಭೇಟಿ ಮಾಡಿದ್ದು ಕೆಲವೇ ಕೆಲವು ಬಾರಿಯಂತೆ. ಈ ಬಗ್ಗೆ ಮಾತನಾಡಿರೋ ಅವರು, ‘ದರ್ಶನ್ ಅವರನ್ನು ಎರಡು ಮೂರು ಭೇಟಿ ಮಾಡಿದ್ದೆ ಅಷ್ಟೆ. ಅವರ ಬಗ್ಗೆ ನನಗೆ ಗೊತ್ತಾಗೋದು ಮಾಧ್ಯಮದವರಿಂದ. ನ್ಯಾಯಾಲಯದ ವ್ಯವಸ್ಥೆಯ​ ಮೇಲೆ ನಂಬಿಕೆ ಇದೆ. ಈ ಪ್ರಕರಣದಲ್ಲಿ ಪೊಲೀಸರು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಪ್ಪು ಮಾಡದೆ ಇದ್ದರೆ ಶಿಕ್ಷೆ ಆಗಬಾರದು’ ಎಂದಿದ್ದಾರೆ ಚೇತನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ