AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ನಗರದ  ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1980ರ ಅಕ್ಟೋಬರ್ 17ರಂದು ಜನಿಸಿದ್ದ ಚಿರಂಜೀವಿ ಸರ್ಜಾ, ಬೆಂಗಳೂರಿನ ಬಾಲ್ಡ್​ವಿನ್ ಬಾಲಕರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದಿದ್ದರು. ಜಯನಗರದ ವಿಜಯಾ ಕಾಲೇಜಿನಲ್ಲಿ ಪದವಿ ಮಾಡಿದ್ದರು. ಚಿತ್ರರಂಗದಲ್ಲಿ ಚಿರಂಜೀವಿ ಸರ್ಜಾ ಕುಟುಂಬ ಸಕ್ರಿಯವಾಗಿದೆ. ನಟ ಅರ್ಜುನ್ ಸರ್ಜಾ ಸೋದರಳಿಯ: ಚಿರಂಜೀವಿ ಸರ್ಜಾ, ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ. 2006ರಿಂದ ಅರ್ಜುನ್ ಸರ್ಜಾ ಜೊತೆ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ರು. 2009ರಲ್ಲಿ ‘ವಾಯುಪುತ್ರ’ […]

ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ
ಸಾಧು ಶ್ರೀನಾಥ್​
| Edited By: |

Updated on:Jun 07, 2020 | 8:16 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ನಗರದ  ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1980ರ ಅಕ್ಟೋಬರ್ 17ರಂದು ಜನಿಸಿದ್ದ ಚಿರಂಜೀವಿ ಸರ್ಜಾ, ಬೆಂಗಳೂರಿನ ಬಾಲ್ಡ್​ವಿನ್ ಬಾಲಕರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದಿದ್ದರು. ಜಯನಗರದ ವಿಜಯಾ ಕಾಲೇಜಿನಲ್ಲಿ ಪದವಿ ಮಾಡಿದ್ದರು. ಚಿತ್ರರಂಗದಲ್ಲಿ ಚಿರಂಜೀವಿ ಸರ್ಜಾ ಕುಟುಂಬ ಸಕ್ರಿಯವಾಗಿದೆ.

ನಟ ಅರ್ಜುನ್ ಸರ್ಜಾ ಸೋದರಳಿಯ: ಚಿರಂಜೀವಿ ಸರ್ಜಾ, ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ. 2006ರಿಂದ ಅರ್ಜುನ್ ಸರ್ಜಾ ಜೊತೆ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ರು. 2009ರಲ್ಲಿ ‘ವಾಯುಪುತ್ರ’ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದ್ದರು. ಈವರೆಗೆ 22 ಸಿನಿಮಾಗಳಲ್ಲಿ ಚಿರಂಜೀವಿ ಸರ್ಜಾ ಅಭಿನಯಿಸಿದ್ದಾರೆ. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್​ ಜತೆ ನಿಶ್ಚಿತಾರ್ಥ ವಾಗಿತ್ತು. 2018ರ ಮೇ 2ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಜಿಲ್, ಚಂದ್ರಲೇಖ, ಅಜಿತ್, ರುದ್ರತಾಂಡವ, ಆಟಗಾರ, ರಾಮಲೀಲಾ, ಆಕೆ, ಭರ್ಜರಿ, ಸಂಹಾರ, ಸಿಜರ್, ಅಮ್ಮ ಐ ಲವ್​ ಯು, ಶಿವಾರ್ಜುನ ಸೇರಿ ಹಲವು ಸಿನಿಮಾಗಳಲ್ಲಿ ಚಿರಂಜೀವಿ ಸರ್ಜಾ ನಟಿಸಿದ್ದರು.

ಮೃತ ಚಿರಂಜೀವಿ ಸರ್ಜಾಗೂ ಕೊರೊನಾ ಟೆಸ್ಟ್: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಗಂಟಲು ದ್ರವ ತೆಗೆದು ಕೊವಿಡ್ ಟೆಸ್ಟ್ ಮಾಡಲು ಅಪೋಲೊ ಆಸ್ಪತ್ರೆ ವೈದ್ಯರಿಗೆ ಆರೋಗ್ಯಾಧಿಕಾರಿಗಳ ಸೂಚನೆ ನೀಡಿದ್ದಾರೆ.

3 ದಿನದ ಹಿಂದೆ ಬ್ರೇನ್ ಸ್ಟ್ರೋಕ್: 3 ದಿನದ ಹಿಂದೆ ಮನೆಯಲ್ಲಿದ್ದಾಗ ಚಿರಂಜೀವಿ ಸರ್ಜಾಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿದ್ದರು. ಇಂದು ಮತ್ತೆ 3 ಬಾರಿ ಫಿಟ್ಸ್ ಕಾಣಿಸಿಕೊಂಡಿತ್ತು. ಹೀಗಾಗಿ ಮಧ್ಯಾಹ್ನ ಅಪೋಲೊ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ  ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ.

Published On - 4:31 pm, Sun, 7 June 20

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ