Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ನಗರದ  ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1980ರ ಅಕ್ಟೋಬರ್ 17ರಂದು ಜನಿಸಿದ್ದ ಚಿರಂಜೀವಿ ಸರ್ಜಾ, ಬೆಂಗಳೂರಿನ ಬಾಲ್ಡ್​ವಿನ್ ಬಾಲಕರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದಿದ್ದರು. ಜಯನಗರದ ವಿಜಯಾ ಕಾಲೇಜಿನಲ್ಲಿ ಪದವಿ ಮಾಡಿದ್ದರು. ಚಿತ್ರರಂಗದಲ್ಲಿ ಚಿರಂಜೀವಿ ಸರ್ಜಾ ಕುಟುಂಬ ಸಕ್ರಿಯವಾಗಿದೆ. ನಟ ಅರ್ಜುನ್ ಸರ್ಜಾ ಸೋದರಳಿಯ: ಚಿರಂಜೀವಿ ಸರ್ಜಾ, ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ. 2006ರಿಂದ ಅರ್ಜುನ್ ಸರ್ಜಾ ಜೊತೆ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ರು. 2009ರಲ್ಲಿ ‘ವಾಯುಪುತ್ರ’ […]

ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ
Follow us
ಸಾಧು ಶ್ರೀನಾಥ್​
| Updated By:

Updated on:Jun 07, 2020 | 8:16 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ನಗರದ  ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1980ರ ಅಕ್ಟೋಬರ್ 17ರಂದು ಜನಿಸಿದ್ದ ಚಿರಂಜೀವಿ ಸರ್ಜಾ, ಬೆಂಗಳೂರಿನ ಬಾಲ್ಡ್​ವಿನ್ ಬಾಲಕರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದಿದ್ದರು. ಜಯನಗರದ ವಿಜಯಾ ಕಾಲೇಜಿನಲ್ಲಿ ಪದವಿ ಮಾಡಿದ್ದರು. ಚಿತ್ರರಂಗದಲ್ಲಿ ಚಿರಂಜೀವಿ ಸರ್ಜಾ ಕುಟುಂಬ ಸಕ್ರಿಯವಾಗಿದೆ.

ನಟ ಅರ್ಜುನ್ ಸರ್ಜಾ ಸೋದರಳಿಯ: ಚಿರಂಜೀವಿ ಸರ್ಜಾ, ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ. 2006ರಿಂದ ಅರ್ಜುನ್ ಸರ್ಜಾ ಜೊತೆ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ರು. 2009ರಲ್ಲಿ ‘ವಾಯುಪುತ್ರ’ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದ್ದರು. ಈವರೆಗೆ 22 ಸಿನಿಮಾಗಳಲ್ಲಿ ಚಿರಂಜೀವಿ ಸರ್ಜಾ ಅಭಿನಯಿಸಿದ್ದಾರೆ. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್​ ಜತೆ ನಿಶ್ಚಿತಾರ್ಥ ವಾಗಿತ್ತು. 2018ರ ಮೇ 2ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಜಿಲ್, ಚಂದ್ರಲೇಖ, ಅಜಿತ್, ರುದ್ರತಾಂಡವ, ಆಟಗಾರ, ರಾಮಲೀಲಾ, ಆಕೆ, ಭರ್ಜರಿ, ಸಂಹಾರ, ಸಿಜರ್, ಅಮ್ಮ ಐ ಲವ್​ ಯು, ಶಿವಾರ್ಜುನ ಸೇರಿ ಹಲವು ಸಿನಿಮಾಗಳಲ್ಲಿ ಚಿರಂಜೀವಿ ಸರ್ಜಾ ನಟಿಸಿದ್ದರು.

ಮೃತ ಚಿರಂಜೀವಿ ಸರ್ಜಾಗೂ ಕೊರೊನಾ ಟೆಸ್ಟ್: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಗಂಟಲು ದ್ರವ ತೆಗೆದು ಕೊವಿಡ್ ಟೆಸ್ಟ್ ಮಾಡಲು ಅಪೋಲೊ ಆಸ್ಪತ್ರೆ ವೈದ್ಯರಿಗೆ ಆರೋಗ್ಯಾಧಿಕಾರಿಗಳ ಸೂಚನೆ ನೀಡಿದ್ದಾರೆ.

3 ದಿನದ ಹಿಂದೆ ಬ್ರೇನ್ ಸ್ಟ್ರೋಕ್: 3 ದಿನದ ಹಿಂದೆ ಮನೆಯಲ್ಲಿದ್ದಾಗ ಚಿರಂಜೀವಿ ಸರ್ಜಾಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿದ್ದರು. ಇಂದು ಮತ್ತೆ 3 ಬಾರಿ ಫಿಟ್ಸ್ ಕಾಣಿಸಿಕೊಂಡಿತ್ತು. ಹೀಗಾಗಿ ಮಧ್ಯಾಹ್ನ ಅಪೋಲೊ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ  ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ.

Published On - 4:31 pm, Sun, 7 June 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ