AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1; ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್

ನಟ ದರ್ಶನ್​ ಮೇಲಿನ ಕೇಸ್​ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿರುವ ದರ್ಶನ್​, ನಟೋರಿಯಸ್​ ರೌಡಿಗಳ ಜೊತೆ ಸೇರಿಕೊಂಡು ಜೈಲಿನ ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮೂರು ಎಫ್​ಐಆರ್​ ದಾಖಲಾಗಿವೆ. ಆ ಪೈಕಿ ಎರಡು ಕೇಸ್​ನಲ್ಲಿ ದರ್ಶನ್​ ಎ1 ಆಗಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚಲಿದೆ.

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1; ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್
ರೌಡಿಶೀಟರ್​ ಜತೆ ದರ್ಶನ್​
ರಾಮು, ಆನೇಕಲ್​
| Edited By: |

Updated on: Aug 26, 2024 | 9:36 PM

Share

ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ದರ್ಶನ್​ ಸುಧಾರಿಸಬಹುದು ಎಂದುಕೊಂಡರೆ, ಜೈಲಿನೊಳಗೆ ಆಗಿದ್ದೇ ಬೇರೆ. ಪರಪ್ಪನ ಅಗ್ರಹಾರಕ್ಕೆ ಹೋದ ಬಳಿಕ ದರ್ಶನ್​ಗೆ ಕುಖ್ಯಾತ ರೌಡಿಗಳ ಜೊತೆ ನಂಟು ಹೆಚ್ಚಾಗಿದೆ. ಮೂರು ಪ್ರತ್ಯೇಕ ಎಫ್​ಐಆರ್​ಗಳ ಪೈಕಿ ಎರಡರಲ್ಲಿ ದರ್ಶನ್​ ಎ1 ಆಗಿದ್ದಾರೆ. ಜೈಲಿನಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಕೇಸ್​ಗಳು ದಾಖಲಾಗಿವೆ. ನಟೋರಿಯಸ್​ ರೌಡಿಶೀಟರ್​ಗಳಾದ ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ, ಧರ್ಮ, ಸತ್ಯ ಮುಂತಾದವರ ಜೊತೆ ದರ್ಶನ್​ ಕೇಸ್​ ಹಾಕಿಸಿಕೊಂಡಂತೆ ಆಗಿದೆ. ಇದರಿಂದ ದರ್ಶನ್​ಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ.

ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಕಾರಾಗೃಹಗಳ ಉಪನಿರ್ದೇಶಕರಾದ ಎಂ. ಸೋಮಶೇಖರ್​ ಅವರಿಂದ ದೂರು ದಾಖಲು ಮಾಡಲಾಗಿದೆ. ಒಟ್ಟು ಮೂರೂ ಕೇಸ್​ನಲ್ಲಿ ದರ್ಶನ್​ ಆರೋಪಿ ಆಗಿದ್ದು, ನಟನಿಗೆ ಕಾನೂನಿನ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ

‘ಕಾರಾಗೃಹ U/s. 42 ಆ್ಯಕ್ಟ್’ ಅಡಿಯಲ್ಲಿ ಒಂದು ಎಫ್​ಐಆರ್​ ದಾಖಲಾಗಿದ್ದು, ಅದರಲ್ಲಿ ದರ್ಶನ್ A1, ಮ್ಯಾನೇಜರ್​ ನಾಗರಾಜ್ A2, ವಿಲ್ಸನ್ ಗಾರ್ಡನ್ ನಾಗ A3 ಹಾಗೂ ಕುಳ್ಳ ಸೀನಾ A4 ಆಗಿದ್ದಾನೆ. ಇನ್ನೊಂದು ಎಫ್​ಐಆರ್​ನಲ್ಲಿ ದರ್ಶನ್ A1, ಧರ್ಮ A2 ಹಾಗೂ ಸತ್ಯ A3 ಆಗಿದ್ದಾನೆ. ‘U/S 42, 54 (1(A) Prisons Act & 238, 323 BNS’ ಅಡಿಯಲ್ಲಿ ಸುದರ್ಶನ್ ಕೆ.ಎಸ್. A1, ಮುಜೀಬ್ A2, ಪರಮೇಶ ನಾಯಕ್ ಲಮಾಣಿ A3, ಕೆ.ಬಿ. ರಾಯಮನೆ A4 ಆಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಜೈಲಿನಿಂದ ಒಂದೊಂದಾಗಿಯೇ ಹೊರಬರುತ್ತಿವೆ ದರ್ಶನ್​ ಅಕ್ರಮಗಳ ಫೋಟೋ

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಜೈಲು ಪಾಲಾದ ದರ್ಶನ್​ಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಆದರೆ ಈಗ ಜೈಲಿನ ಒಳಗೆ ದರ್ಶನ್​ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ. ಮರ್ಡರ್​ ಕೇಸ್​ ಜೊತೆ ಹೊಸ ಹೊಸ ಕೇಸ್​ಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಜಾಮೀನು ಸಿಗುವುದು ಇನ್ನಷ್ಟು ಕಷ್ಟ ಆಗಲಿದೆ. ಕೊಲೆ ಕೇಸ್​ ತನಿಖೆ ಹಂತದಲ್ಲಿ ದರ್ಶನ್​ ಎ2 ಆಗಿದ್ದಾರೆ. ಆದರೆ ಚಾರ್ಜ್​ಶೀಟ್​ ಸಲ್ಲಿಸುವಾಗ ಎ1 ಮಾಡುವ ಸಾಧ್ಯತೆ ಕೂಡ ದಟ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ