AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1; ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್

ನಟ ದರ್ಶನ್​ ಮೇಲಿನ ಕೇಸ್​ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿರುವ ದರ್ಶನ್​, ನಟೋರಿಯಸ್​ ರೌಡಿಗಳ ಜೊತೆ ಸೇರಿಕೊಂಡು ಜೈಲಿನ ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮೂರು ಎಫ್​ಐಆರ್​ ದಾಖಲಾಗಿವೆ. ಆ ಪೈಕಿ ಎರಡು ಕೇಸ್​ನಲ್ಲಿ ದರ್ಶನ್​ ಎ1 ಆಗಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚಲಿದೆ.

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1; ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್
ರೌಡಿಶೀಟರ್​ ಜತೆ ದರ್ಶನ್​
ರಾಮು, ಆನೇಕಲ್​
| Edited By: |

Updated on: Aug 26, 2024 | 9:36 PM

Share

ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ದರ್ಶನ್​ ಸುಧಾರಿಸಬಹುದು ಎಂದುಕೊಂಡರೆ, ಜೈಲಿನೊಳಗೆ ಆಗಿದ್ದೇ ಬೇರೆ. ಪರಪ್ಪನ ಅಗ್ರಹಾರಕ್ಕೆ ಹೋದ ಬಳಿಕ ದರ್ಶನ್​ಗೆ ಕುಖ್ಯಾತ ರೌಡಿಗಳ ಜೊತೆ ನಂಟು ಹೆಚ್ಚಾಗಿದೆ. ಮೂರು ಪ್ರತ್ಯೇಕ ಎಫ್​ಐಆರ್​ಗಳ ಪೈಕಿ ಎರಡರಲ್ಲಿ ದರ್ಶನ್​ ಎ1 ಆಗಿದ್ದಾರೆ. ಜೈಲಿನಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಕೇಸ್​ಗಳು ದಾಖಲಾಗಿವೆ. ನಟೋರಿಯಸ್​ ರೌಡಿಶೀಟರ್​ಗಳಾದ ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ, ಧರ್ಮ, ಸತ್ಯ ಮುಂತಾದವರ ಜೊತೆ ದರ್ಶನ್​ ಕೇಸ್​ ಹಾಕಿಸಿಕೊಂಡಂತೆ ಆಗಿದೆ. ಇದರಿಂದ ದರ್ಶನ್​ಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ.

ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಕಾರಾಗೃಹಗಳ ಉಪನಿರ್ದೇಶಕರಾದ ಎಂ. ಸೋಮಶೇಖರ್​ ಅವರಿಂದ ದೂರು ದಾಖಲು ಮಾಡಲಾಗಿದೆ. ಒಟ್ಟು ಮೂರೂ ಕೇಸ್​ನಲ್ಲಿ ದರ್ಶನ್​ ಆರೋಪಿ ಆಗಿದ್ದು, ನಟನಿಗೆ ಕಾನೂನಿನ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ

‘ಕಾರಾಗೃಹ U/s. 42 ಆ್ಯಕ್ಟ್’ ಅಡಿಯಲ್ಲಿ ಒಂದು ಎಫ್​ಐಆರ್​ ದಾಖಲಾಗಿದ್ದು, ಅದರಲ್ಲಿ ದರ್ಶನ್ A1, ಮ್ಯಾನೇಜರ್​ ನಾಗರಾಜ್ A2, ವಿಲ್ಸನ್ ಗಾರ್ಡನ್ ನಾಗ A3 ಹಾಗೂ ಕುಳ್ಳ ಸೀನಾ A4 ಆಗಿದ್ದಾನೆ. ಇನ್ನೊಂದು ಎಫ್​ಐಆರ್​ನಲ್ಲಿ ದರ್ಶನ್ A1, ಧರ್ಮ A2 ಹಾಗೂ ಸತ್ಯ A3 ಆಗಿದ್ದಾನೆ. ‘U/S 42, 54 (1(A) Prisons Act & 238, 323 BNS’ ಅಡಿಯಲ್ಲಿ ಸುದರ್ಶನ್ ಕೆ.ಎಸ್. A1, ಮುಜೀಬ್ A2, ಪರಮೇಶ ನಾಯಕ್ ಲಮಾಣಿ A3, ಕೆ.ಬಿ. ರಾಯಮನೆ A4 ಆಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಜೈಲಿನಿಂದ ಒಂದೊಂದಾಗಿಯೇ ಹೊರಬರುತ್ತಿವೆ ದರ್ಶನ್​ ಅಕ್ರಮಗಳ ಫೋಟೋ

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಜೈಲು ಪಾಲಾದ ದರ್ಶನ್​ಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಆದರೆ ಈಗ ಜೈಲಿನ ಒಳಗೆ ದರ್ಶನ್​ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ. ಮರ್ಡರ್​ ಕೇಸ್​ ಜೊತೆ ಹೊಸ ಹೊಸ ಕೇಸ್​ಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಜಾಮೀನು ಸಿಗುವುದು ಇನ್ನಷ್ಟು ಕಷ್ಟ ಆಗಲಿದೆ. ಕೊಲೆ ಕೇಸ್​ ತನಿಖೆ ಹಂತದಲ್ಲಿ ದರ್ಶನ್​ ಎ2 ಆಗಿದ್ದಾರೆ. ಆದರೆ ಚಾರ್ಜ್​ಶೀಟ್​ ಸಲ್ಲಿಸುವಾಗ ಎ1 ಮಾಡುವ ಸಾಧ್ಯತೆ ಕೂಡ ದಟ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್