AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1; ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್

ನಟ ದರ್ಶನ್​ ಮೇಲಿನ ಕೇಸ್​ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿರುವ ದರ್ಶನ್​, ನಟೋರಿಯಸ್​ ರೌಡಿಗಳ ಜೊತೆ ಸೇರಿಕೊಂಡು ಜೈಲಿನ ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮೂರು ಎಫ್​ಐಆರ್​ ದಾಖಲಾಗಿವೆ. ಆ ಪೈಕಿ ಎರಡು ಕೇಸ್​ನಲ್ಲಿ ದರ್ಶನ್​ ಎ1 ಆಗಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚಲಿದೆ.

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1; ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್
ರೌಡಿಶೀಟರ್​ ಜತೆ ದರ್ಶನ್​
ರಾಮು, ಆನೇಕಲ್​
| Edited By: |

Updated on: Aug 26, 2024 | 9:36 PM

Share

ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ದರ್ಶನ್​ ಸುಧಾರಿಸಬಹುದು ಎಂದುಕೊಂಡರೆ, ಜೈಲಿನೊಳಗೆ ಆಗಿದ್ದೇ ಬೇರೆ. ಪರಪ್ಪನ ಅಗ್ರಹಾರಕ್ಕೆ ಹೋದ ಬಳಿಕ ದರ್ಶನ್​ಗೆ ಕುಖ್ಯಾತ ರೌಡಿಗಳ ಜೊತೆ ನಂಟು ಹೆಚ್ಚಾಗಿದೆ. ಮೂರು ಪ್ರತ್ಯೇಕ ಎಫ್​ಐಆರ್​ಗಳ ಪೈಕಿ ಎರಡರಲ್ಲಿ ದರ್ಶನ್​ ಎ1 ಆಗಿದ್ದಾರೆ. ಜೈಲಿನಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಕೇಸ್​ಗಳು ದಾಖಲಾಗಿವೆ. ನಟೋರಿಯಸ್​ ರೌಡಿಶೀಟರ್​ಗಳಾದ ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ, ಧರ್ಮ, ಸತ್ಯ ಮುಂತಾದವರ ಜೊತೆ ದರ್ಶನ್​ ಕೇಸ್​ ಹಾಕಿಸಿಕೊಂಡಂತೆ ಆಗಿದೆ. ಇದರಿಂದ ದರ್ಶನ್​ಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ.

ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಕಾರಾಗೃಹಗಳ ಉಪನಿರ್ದೇಶಕರಾದ ಎಂ. ಸೋಮಶೇಖರ್​ ಅವರಿಂದ ದೂರು ದಾಖಲು ಮಾಡಲಾಗಿದೆ. ಒಟ್ಟು ಮೂರೂ ಕೇಸ್​ನಲ್ಲಿ ದರ್ಶನ್​ ಆರೋಪಿ ಆಗಿದ್ದು, ನಟನಿಗೆ ಕಾನೂನಿನ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ

‘ಕಾರಾಗೃಹ U/s. 42 ಆ್ಯಕ್ಟ್’ ಅಡಿಯಲ್ಲಿ ಒಂದು ಎಫ್​ಐಆರ್​ ದಾಖಲಾಗಿದ್ದು, ಅದರಲ್ಲಿ ದರ್ಶನ್ A1, ಮ್ಯಾನೇಜರ್​ ನಾಗರಾಜ್ A2, ವಿಲ್ಸನ್ ಗಾರ್ಡನ್ ನಾಗ A3 ಹಾಗೂ ಕುಳ್ಳ ಸೀನಾ A4 ಆಗಿದ್ದಾನೆ. ಇನ್ನೊಂದು ಎಫ್​ಐಆರ್​ನಲ್ಲಿ ದರ್ಶನ್ A1, ಧರ್ಮ A2 ಹಾಗೂ ಸತ್ಯ A3 ಆಗಿದ್ದಾನೆ. ‘U/S 42, 54 (1(A) Prisons Act & 238, 323 BNS’ ಅಡಿಯಲ್ಲಿ ಸುದರ್ಶನ್ ಕೆ.ಎಸ್. A1, ಮುಜೀಬ್ A2, ಪರಮೇಶ ನಾಯಕ್ ಲಮಾಣಿ A3, ಕೆ.ಬಿ. ರಾಯಮನೆ A4 ಆಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಜೈಲಿನಿಂದ ಒಂದೊಂದಾಗಿಯೇ ಹೊರಬರುತ್ತಿವೆ ದರ್ಶನ್​ ಅಕ್ರಮಗಳ ಫೋಟೋ

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಜೈಲು ಪಾಲಾದ ದರ್ಶನ್​ಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಆದರೆ ಈಗ ಜೈಲಿನ ಒಳಗೆ ದರ್ಶನ್​ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ. ಮರ್ಡರ್​ ಕೇಸ್​ ಜೊತೆ ಹೊಸ ಹೊಸ ಕೇಸ್​ಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಜಾಮೀನು ಸಿಗುವುದು ಇನ್ನಷ್ಟು ಕಷ್ಟ ಆಗಲಿದೆ. ಕೊಲೆ ಕೇಸ್​ ತನಿಖೆ ಹಂತದಲ್ಲಿ ದರ್ಶನ್​ ಎ2 ಆಗಿದ್ದಾರೆ. ಆದರೆ ಚಾರ್ಜ್​ಶೀಟ್​ ಸಲ್ಲಿಸುವಾಗ ಎ1 ಮಾಡುವ ಸಾಧ್ಯತೆ ಕೂಡ ದಟ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ