AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ 1, ದರ್ಶನ್ ಎ 2; ನಟನಿಗೆ ಹೆಚ್ಚಿದ ಸಂಕಷ್ಟ

ರೇಣುಕಾ ಸ್ವಾಮಿಯ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಎ 1 ಆಗಿದ್ದು, ನಟ ದರ್ಶನ್​ ಎ 2 ಹಾಗೂ ಸಹಚರ ಕೆ. ಪವನ್​ ಎ 3 ಆಗಿದ್ದಾನೆ. ಬೌರಿಂಗ್​ ಆಸ್ಪತ್ರೆಯಲ್ಲಿ ಎಲ್ಲ 13 ಆರೋಪಿಗಳ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಒಟ್ಟು 13 ಜನರನ್ನು ಇಂದು (ಜೂನ್​ 11) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತಿದೆ. ತನಿಖೆಯ ತೀವ್ರತೆ ಹೆಚ್ಚಾಗಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ 1, ದರ್ಶನ್ ಎ 2; ನಟನಿಗೆ ಹೆಚ್ಚಿದ ಸಂಕಷ್ಟ
ದರ್ಶನ್​, ಪವಿತ್ರಾ ಗೌಡ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 11, 2024 | 7:03 PM

Share

ನಟಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು (Renuka Swamy) ಕೊಲೆ ಮಾಡಿದ ಆರೋಪ ದರ್ಶನ್​ ಮೇಲಿದೆ. ಈ ಪ್ರಕರಣದ ತನಿಖೆ ಚುರುಕಾಗಿದೆ. ಕೇಸ್​ನಲ್ಲಿ ಪವಿತ್ರಾ ಗೌಡ (Pavithra Gowda) ಎ1 ಆಗಿದ್ದು, ದರ್ಶನ್​ ಎ2 ಹಾಗೂ ಕೆ. ಪವನ್​ ಎ3 ಆಗಿದ್ದಾನೆ. ಎಲ್ಲರ ಮೆಡಿಕಲ್​ ಟೆಸ್ಟ್​ ಮಾಡಿಸಲಾಗಿದೆ. ಒಟ್ಟು 13 ಜನರನ್ನು ಇಂದು (ಜೂನ್​ 11) ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿದ ದರ್ಶನ್​ (Darshan) ಬದುಕಿನಲ್ಲಿ ಈ ಪ್ರಕರಣ ಕಪ್ಪು ಚುಕ್ಕಿ ಆಗಿದೆ. ಈಗ ದರ್ಶನ್​ ಜೈಲುಪಾಲಾಗುವ ಸಾಧ್ಯತೆ ದಟ್ಟವಾಗಿದೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ತನಿಖೆ ಮುಂದುವರಿದಂತೆಲ್ಲ ಶಾಕಿಂಗ್​ ವಿಚಾರಗಳು ಬಹಿರಂಗ ಆಗುತ್ತಿವೆ. ದರ್ಶನ್​, ಪವಿತ್ರಾ ಗೌಡ ಹಾಗೂ ಅವರ ಸಹಚರರ ವಿರುದ್ಧ ಅನೇಕ ಸಾಕ್ಷಿಗಳು ಸಿಗುತ್ತಿವೆ. ಕೊಲೆ ನಡೆದ ಶೆಡ್​ಗೆ ಅದೇ ರಾತ್ರಿ ದರ್ಶನ್​ ಕಾರು ಬಂದಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ. ಪ್ರಾಥಮಿಕ ತನಿಖೆ ನಡೆದಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸ್​ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ; ಇಲ್ಲಿದೆ ಎಲ್ಲರ ವಿವರ

ರೇಣುಕಾ ಸ್ವಾಮಿ ಅವರ ಮೃತ ದೇಹ ಸಿಕ್ಕ ನಂತರ ಪೊಲೀಸರು ತನಿಖೆ ಶುರು ಮಾಡಿದರು. ಆ ವೇಳೆ ದರ್ಶನ್​ ಹೆಸರು ಹೊರಬಂದಿತ್ತು. ಕೂಡಲೇ ದರ್ಶನ್​ರನ್ನು ಮೈಸೂರಲ್ಲಿ ಪೊಲೀಸರು ಅರೆಸ್ಟ್​ ಮಾಡಿದರು. ಬಳಿಕ ಅವರನ್ನು ಬೆಂಗಳೂರಿಗೆ ಕರೆದುಕೊಂಡು ತನಿಖೆ ಚುರುಕುಗೊಳಿಸಲಾಯಿತು. ನಂತರ ಬೌರಿಂಗ್​ ಆಸ್ಪತ್ರೆಯಲ್ಲಿ ಪವಿತ್ರಾ ಗೌಡ, ದರ್ಶನ್​, ಕೆ. ಪವನ್​ ಸೇರಿದಂತೆ ಎಲ್ಲ 13 ಆರೋಪಿಗಳನ್ನು ಮೆಡಿಕಲ್​ ಟೆಸ್ಟ್​ಗೆ ಒಳಪಡಿಸಲಾಯಿತು. ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:28 pm, Tue, 11 June 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!