AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇರ್​ ಬೇಕು ಎಂದು ಆವಾಜ್ ಹಾಕಿದ ದರ್ಶನ್; ಜೈಲಾಧಿಕಾರಿಗಳ ಉತ್ತರಕ್ಕೆ ಮಂಕಾದ ದಾಸ

ದರ್ಶನ್ ಚೇರ್​ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್​ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್​ ಅವರು ಕುರ್ಚಿ ನೀಡಲು ಸೂಚನೆ ಕೊಟ್ಟಿದ್ದರು. ಆದಾಗ್ಯೂ ಚೇರ್ ಏಕೆ ಕೊಟ್ಟಿಲ್ಲ ಎಂದು ಜೈಲಧಿಕಾರಿಗಳ ವಿರುದ್ಧ ದರ್ಶನ್ ಗರಂ ಆಗಿದ್ದಾರೆ.

ಚೇರ್​ ಬೇಕು ಎಂದು ಆವಾಜ್ ಹಾಕಿದ ದರ್ಶನ್; ಜೈಲಾಧಿಕಾರಿಗಳ ಉತ್ತರಕ್ಕೆ ಮಂಕಾದ ದಾಸ
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 21, 2024 | 9:45 AM

Share

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಅಲ್ಲಿ ಅವರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈಗ ಅವರಿಗೆ ನಿರಂತರವಾಗಿ ಬೆನ್ನನೋವು ಬರುತ್ತಿದೆ. ಹೀಗಾಗಿ ಅವರು ಕುಳಿತುಕೊಳ್ಳಲು ಚೇರ್‌ಗೆ ಮನವಿ ಮಾಡಿದ್ದರು. ಈ ಮನವಿ ಮಾಡಿ ವಾರಗಳೇ ಕಳೆದಿವೆ. ಆದಾಗ್ಯೂ ಜೈಲಾಧಿಕಾರಿಗಳು ಕುರ್ಚಿಯನ್ನು ನೀಡಿಲ್ಲ. ಇದರಿಂದ ದರ್ಶನ್ ಗರಂ ಆಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಹಾಯಾಗಿ ಇದ್ದರು. ವಿಲ್ಸನ್​ ಗಾರ್ಡನ್ ನಾಗ ಅವರಿಗೆ ಸಾಕಷ್ಟು ವ್ಯವಸ್ಥೆ ಮಾಡಿಕೊಟ್ಟಿದ್ದರು. ಈ ವ್ಯವಸ್ಥೆಯಿಂದ ಅವರಿಗೆ ಯಾವುದೇ ತೊಂದರೆ ಆಗಿರಲಿಲ್ಲ. ಈ ವಿಚಾರ ಹೊರ ಬಂದ ನಂತರ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ದರ್ಶನ್ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರಂತೆ.

ದರ್ಶನ್ ಚೇರ್​ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್​ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್​ ಅವರು ಕುರ್ಚಿ ನೀಡಲು ಸೂಚನೆ ಕೊಟ್ಟಿದ್ದರು. ಆದಾಗ್ಯೂ ಚೇರ್ ಏಕೆ ಕೊಟ್ಟಿಲ್ಲ ಎಂದು ಜೈಲಧಿಕಾರಿಗಳ ವಿರುದ್ಧ ದರ್ಶನ್ ಗರಂ ಆಗಿದ್ದಾರೆ. ದರ್ಶನ್ ಮಾತಿಗೆ ಖಡಕ್ಕಾಗಿ ಜೈಲಾಧಿಕಾರಿಗಳು ತೀರುಗೇಟು ನೀಡಿದ್ದಾರೆ.

‘ಕೋರ್ಟ್​ನ ಅಧಿಕೃತ ಆದೇಶ ಬಂದ ಬಳಿಕವೇ ಚೇರ್ ಕೊಡಲಾಗುತ್ತದೆ’ ಎಂದು ಜೈಲಧಿಕಾರಿಗಳು ನೇರ ಮಾತಲ್ಲಿ ಹೇಳಿದ್ದಾರೆ. ಜೈಲಾಧಿಕಾರಿಗಳ ಮಾತಿಗೆ ದರ್ಶನ್​ ಸಪ್ಪೆ ಮುಖ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಸದ್ಯ ದರ್ಶನ್​ಗೆ ಬೆಂಗಳೂರಿನ ಜೈಲಿನಲ್ಲಿ ಕಷ್ಟಗಳು ಬಿಟ್ಟು ಬಿಡದೆ ಕಾಡುತ್ತಿವೆ.

ಇದನ್ನೂ ಓದಿ: ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ; ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ: ಗುರು ಕಿರಣ್

ವಿಚಾರಣಾದೀನ ಕೈದಿಗಳಿಗೆ ಕೆಲ ಅವಶ್ಯಕ ವಸ್ತುಗಳನ್ನ ಕೊಡಬುದಾದ ನಿಯಮಗಳಿವೆ. ಆದರೆ ಎಲ್ಲದಕ್ಕೂ ಕೋರ್ಟ್​ ಆದೇಶ ಬೇಕು ಎಂದು ಬಳ್ಳಾರಿ ಸೆಂಟ್ರಲ್ ಜೈಲಾಧಿಕಾರಿಗಳು ಹೇಳುತ್ತಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನ ಕಠಿಣತೆಗೆ ಆರೋಪಿ ದರ್ಶನ್ ಹೈರಾಣಾವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ