AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇರ್​ ಬೇಕು ಎಂದು ಆವಾಜ್ ಹಾಕಿದ ದರ್ಶನ್; ಜೈಲಾಧಿಕಾರಿಗಳ ಉತ್ತರಕ್ಕೆ ಮಂಕಾದ ದಾಸ

ದರ್ಶನ್ ಚೇರ್​ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್​ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್​ ಅವರು ಕುರ್ಚಿ ನೀಡಲು ಸೂಚನೆ ಕೊಟ್ಟಿದ್ದರು. ಆದಾಗ್ಯೂ ಚೇರ್ ಏಕೆ ಕೊಟ್ಟಿಲ್ಲ ಎಂದು ಜೈಲಧಿಕಾರಿಗಳ ವಿರುದ್ಧ ದರ್ಶನ್ ಗರಂ ಆಗಿದ್ದಾರೆ.

ಚೇರ್​ ಬೇಕು ಎಂದು ಆವಾಜ್ ಹಾಕಿದ ದರ್ಶನ್; ಜೈಲಾಧಿಕಾರಿಗಳ ಉತ್ತರಕ್ಕೆ ಮಂಕಾದ ದಾಸ
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 21, 2024 | 9:45 AM

Share

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಅಲ್ಲಿ ಅವರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈಗ ಅವರಿಗೆ ನಿರಂತರವಾಗಿ ಬೆನ್ನನೋವು ಬರುತ್ತಿದೆ. ಹೀಗಾಗಿ ಅವರು ಕುಳಿತುಕೊಳ್ಳಲು ಚೇರ್‌ಗೆ ಮನವಿ ಮಾಡಿದ್ದರು. ಈ ಮನವಿ ಮಾಡಿ ವಾರಗಳೇ ಕಳೆದಿವೆ. ಆದಾಗ್ಯೂ ಜೈಲಾಧಿಕಾರಿಗಳು ಕುರ್ಚಿಯನ್ನು ನೀಡಿಲ್ಲ. ಇದರಿಂದ ದರ್ಶನ್ ಗರಂ ಆಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಹಾಯಾಗಿ ಇದ್ದರು. ವಿಲ್ಸನ್​ ಗಾರ್ಡನ್ ನಾಗ ಅವರಿಗೆ ಸಾಕಷ್ಟು ವ್ಯವಸ್ಥೆ ಮಾಡಿಕೊಟ್ಟಿದ್ದರು. ಈ ವ್ಯವಸ್ಥೆಯಿಂದ ಅವರಿಗೆ ಯಾವುದೇ ತೊಂದರೆ ಆಗಿರಲಿಲ್ಲ. ಈ ವಿಚಾರ ಹೊರ ಬಂದ ನಂತರ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ದರ್ಶನ್ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರಂತೆ.

ದರ್ಶನ್ ಚೇರ್​ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್​ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್​ ಅವರು ಕುರ್ಚಿ ನೀಡಲು ಸೂಚನೆ ಕೊಟ್ಟಿದ್ದರು. ಆದಾಗ್ಯೂ ಚೇರ್ ಏಕೆ ಕೊಟ್ಟಿಲ್ಲ ಎಂದು ಜೈಲಧಿಕಾರಿಗಳ ವಿರುದ್ಧ ದರ್ಶನ್ ಗರಂ ಆಗಿದ್ದಾರೆ. ದರ್ಶನ್ ಮಾತಿಗೆ ಖಡಕ್ಕಾಗಿ ಜೈಲಾಧಿಕಾರಿಗಳು ತೀರುಗೇಟು ನೀಡಿದ್ದಾರೆ.

‘ಕೋರ್ಟ್​ನ ಅಧಿಕೃತ ಆದೇಶ ಬಂದ ಬಳಿಕವೇ ಚೇರ್ ಕೊಡಲಾಗುತ್ತದೆ’ ಎಂದು ಜೈಲಧಿಕಾರಿಗಳು ನೇರ ಮಾತಲ್ಲಿ ಹೇಳಿದ್ದಾರೆ. ಜೈಲಾಧಿಕಾರಿಗಳ ಮಾತಿಗೆ ದರ್ಶನ್​ ಸಪ್ಪೆ ಮುಖ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಸದ್ಯ ದರ್ಶನ್​ಗೆ ಬೆಂಗಳೂರಿನ ಜೈಲಿನಲ್ಲಿ ಕಷ್ಟಗಳು ಬಿಟ್ಟು ಬಿಡದೆ ಕಾಡುತ್ತಿವೆ.

ಇದನ್ನೂ ಓದಿ: ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ; ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ: ಗುರು ಕಿರಣ್

ವಿಚಾರಣಾದೀನ ಕೈದಿಗಳಿಗೆ ಕೆಲ ಅವಶ್ಯಕ ವಸ್ತುಗಳನ್ನ ಕೊಡಬುದಾದ ನಿಯಮಗಳಿವೆ. ಆದರೆ ಎಲ್ಲದಕ್ಕೂ ಕೋರ್ಟ್​ ಆದೇಶ ಬೇಕು ಎಂದು ಬಳ್ಳಾರಿ ಸೆಂಟ್ರಲ್ ಜೈಲಾಧಿಕಾರಿಗಳು ಹೇಳುತ್ತಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನ ಕಠಿಣತೆಗೆ ಆರೋಪಿ ದರ್ಶನ್ ಹೈರಾಣಾವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ