AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಅರುಣಾ ಕುಮಾರಿ ಫೇಕ್ ಐಡಿ ಬಗ್ಗೆ ಕೆನರಾ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ

ಗೂಗಲ್‌ನಲ್ಲಿ ಬರುವ ಐಡಿ ಕಾರ್ಡ್ ರೀತಿಯಲ್ಲಿ ಈ ಐಡಿ ಕಾರ್ಡ್ ಸೃಷ್ಟಿ ಮಾಡಲಾಗಿದೆ. ಗೂಗಲ್‌ನಲ್ಲಿ ಸಿಗುವ ಕಾರ್ಡ್‌ ನಂಬರ್ ಬಳಸಿ ಹೀಗೆ ಕ್ರಿಯೇಟ್ ಮಾಡಲಾಗಿದೆ.

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಅರುಣಾ ಕುಮಾರಿ ಫೇಕ್ ಐಡಿ ಬಗ್ಗೆ ಕೆನರಾ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ
ಅರುಣಾ ಕುಮಾರಿ
TV9 Web
| Updated By: ganapathi bhat|

Updated on:Jul 13, 2021 | 4:07 PM

Share

ಬೆಂಗಳೂರು: ನಟ​ ದರ್ಶನ್​ ಹೆಸರಿನಲ್ಲಿ ವಂಚನೆಗೆ ಯತ್ನಿಸಿದ ಪ್ರಕರಣ ನಿರ್ಮಾಪಕ ಉಮಾಪತಿ ಗೌಡ, ವಂಚಕಿ ಅರುಣಾ ಕುಮಾರಿ ಸುತ್ತಲೂ ಒಂದೊಂದು ಹೇಳಿಕೆ, ತಿರುವು ಹಾಗೂ ಸ್ಪಷ್ಟನೆ ಪಡೆಯುತ್ತಾ ಬೆಳೆಯುತ್ತಿದೆ. ಇದೀಗ ಈ ಪ್ರಕರಣದ ಬಗ್ಗೆ, ಟಿವಿ9ಗೆ ಕೆನರಾ ಬ್ಯಾಂಕ್‌ನ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಆರೋಪಿ ಅರುಣಾಕುಮಾರಿ ಐಡಿ ಕಾರ್ಡ್ ಫೇಕ್. ಇಲ್ಲಿ ಏರಿಯಾ ಬ್ರಾಂಚ್ ಮ್ಯಾನೇಜರ್ ಅನ್ನೋ ಹುದ್ದೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಅರುಣಾ ಕುಮಾರಿ ಐಡಿ ಕಾರ್ಡ್ ಬಗ್ಗೆ ಕೆನರಾ ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬ್ಯಾಂಕ್‌ನ ಐಡಿ ಕಾರ್ಡ್‌ನಲ್ಲಿ ಹುಟ್ಟಿದ ದಿನಾಂಕ ಇರಲ್ಲ. ಐಡಿ ಕಾರ್ಡ್‌ನಲ್ಲಿ ಸಿಬ್ಬಂದಿಯ ಮೊಬೈಲ್ ಸಂಖ್ಯೆ ಹಾಕಲ್ಲ. ಬ್ಯಾಂಕ್‌ನ ಐಡಿ ಕಾರ್ಡ್‌ನಲ್ಲಿ ಎಂಪ್ಲಾಯ್ ಐಡಿ ಹಾಕಲ್ಲ. ಇದು ನಕಲಿ ಐಡಿ. ಆರೋಪಿ ಅರುಣಾ ಕುಮಾರಿ ಸ್ವತಃ‌ ನಕಲಿ ಐಡಿ ಸೃಷ್ಟಿಸಿದ್ದಾಳೆ ಎಂದು ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಬರುವ ಐಡಿ ಕಾರ್ಡ್ ರೀತಿಯಲ್ಲಿ ಈ ಐಡಿ ಕಾರ್ಡ್ ಸೃಷ್ಟಿ ಮಾಡಲಾಗಿದೆ. ಗೂಗಲ್‌ನಲ್ಲಿ ಸಿಗುವ ಕಾರ್ಡ್‌ ನಂಬರ್ ಬಳಸಿ ಹೀಗೆ ಕ್ರಿಯೇಟ್ ಮಾಡಲಾಗಿದೆ. ಗೂಗಲ್‌ನಲ್ಲಿ ಕೆ. ಶಿವಪ್ರಸಾದ್‌ ಅನ್ನೋರ ಐಡಿ ಬರುತ್ತೆ. ಇದರ ಐಡಿ ಕಾರ್ಡ್‌ ನಂಬರ್ ಸಹ 41786 ಇದೆ. ಇದೇ ಸಂಖ್ಯೆಯನ್ನು ಬಳಸಿ ನಕಲಿ ಐಡಿ ಕಾರ್ಡ್‌ ಸೃಷ್ಟಿ ಮಾಡಲಾಗಿದೆ. ಹೀಗಾಗಿ ವಂಚಕಿ ಅರುಣಾಕುಮಾರಿ ಐಡಿ ಕಾರ್ಡ್ ಫೇಕ್ ಎಂದು ಟಿವಿ9ಗೆ ಕೆನರಾ ಬ್ಯಾಂಕ್‌ನ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.

ಆರೋಪಿ ಅರುಣಾ ಕುಮಾರಿ ನಾಪತ್ತೆ ಮತ್ತೊಂದೆಡೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಅರುಣಾ ಕುಮಾರಿ ನಾಪತ್ತೆಯಾಗಿದ್ದಾರೆ. ಮನೆಗೆ ಬೀಗ ಹಾಕಿ ಆರೋಪಿ ಅರುಣಾ ಕುಮಾರಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಜಂಬೂಸವಾರಿ ದಿಣ್ಣೆಯ ಬಾಡಿಗೆ ಮನೆಯಿಂದ ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ನನ್ನ ಲೈಫ್ ಹಾಳಾದರೆ ಯಾರೂ ಕೂಡ ಬರುವುದಿಲ್ಲ. ನಿರ್ಮಾಪಕ ಉಮಾಪತಿ ಮಾಡಿರುವುದು ತಪ್ಪು. ಅವರ ಸಮಸ್ಯೆಗಳನ್ನು ಅವರು ಬಗೆಹರಿಸಿಕೊಳ್ಳಬೇಕಿತ್ತು. ಈ ಪ್ರಕರಣದಲ್ಲಿ ನನ್ನನ್ನು ಬಳಸಿಕೊಂಡಿದ್ದು ತಪ್ಪು. ದಯವಿಟ್ಟು ನಮ್ಮನ್ನು ಬದುಕಲು ಬಿಟ್ಟುಬಿಡಿ. ನನ್ನ ಜತೆ ಉಮಾಪತಿಯನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೂ ಮುನ್ನವೇ ತಪ್ಪಿತಸ್ಥೆ ಎನ್ನುವುದು ಯಾಕೆ? ಎಂದು ಅರುಣಾ ಕುಮಾರಿ ಬಿಡುಗಡೆಯಾದ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ.

ಮನೆಯಲ್ಲಿ ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ತೇವೆ ಅಂತಿದ್ದಾರೆ. ಉಮಾಪತಿ ಫೋನ್ ಮಾಡಿದ್ದು, ಕರೆದಿದ್ದು ಎಲ್ಲವೂ ಸತ್ಯ. ಮಾರ್ಚ್‌ ತಿಂಗಳಿಂದ ಉಮಾಪತಿ ನನಗೆ ಪರಿಚಯವಿದೆ. ಇದರಿಂದ ಉಮಾಪತಿಗೆ ಲಾಭವೋ, ನಷ್ಟವೋ ಗೊತ್ತಿಲ್ಲ. ನಿರ್ಮಾಪಕ ಉಮಾಪತಿ ನನ್ನನ್ನು ಬಳಸಿಕೊಂಡಿದ್ದು ತಪ್ಪು. ಇದರಿಂದ ನನಗೆ ಒಂದು ರೂಪಾಯಿಯೂ ಸಿಕ್ಕಿಲ್ಲ. ನಮಗೆ ಸಿಗುತ್ತಿರುವುದು ಅವಮಾನ ಅಷ್ಟೆ ಎಂದು ಅರುಣಾ ಕುಮಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಅಮಾಯಕಿ, ದಯವಿಟ್ಟು ನನ್ನನ್ನು ಬದುಕಲು ಬಿಡಿ: ಅರುಣಾ ಕುಮಾರಿ

ದರ್ಶನ್ ಹಾಗೂ ಉಮಾಪತಿ ಶ್ರೀನಿವಾಸ್​ಗೌಡ ಪ್ರಕರಣ ಸುಖಾಂತ್ಯದತ್ತ?

Published On - 4:03 pm, Tue, 13 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ