AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ 2ನೇ ಬಾರಿ ಜೈಲು ಸೇರಿ ಪರಪ್ಪನ ಅಗ್ರಹಾರದಲ್ಲಿ ಕಳೆಯಿತು 100 ದಿನ

ಕೊಲೆ ಆರೋಪಿಯಾಗಿ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲು‌ ಸೇರಿ ಇಂದಿಗೆ (ನ.26) 105 ದಿನವಾಗಿದೆ. ಈ ಹಿಂದೆ ಅರೆಸ್ಟ್ ಆಗಿದ್ದ ವೇಳೆ ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲು ಒಟ್ಟು ಸೇರಿ 131 ದಿನ ಕಳೆದಿದ್ದರು. ದರ್ಶನ್ ಅವರ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಚಿತ್ರತಂಡದವರು ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ.

ನಟ ದರ್ಶನ್ 2ನೇ ಬಾರಿ ಜೈಲು ಸೇರಿ ಪರಪ್ಪನ ಅಗ್ರಹಾರದಲ್ಲಿ ಕಳೆಯಿತು 100 ದಿನ
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 26, 2025 | 8:40 PM

Share

ಕೊಲೆ ಕೇಸ್​​ನಲ್ಲಿ ಎರಡನೇ ಬಾರಿ ಜೈಲು ಸೇರಿದ ನಟ ದರ್ಶನ್ (Darshan) ಹಲವು ಏಳು ಬೀಳುಗಳ ನಡುವೆ ನೂರು ದಿನ ಜೈಲುವಾಸ ಅನುಭವಿಸಿದ್ದಾರೆ. ಜೈಲು ಸೇರಿದ ಬಳಿಕ ಕನಿಷ್ಠ ಸೌಲಭ್ಯಕ್ಕಾಗಿ ಕಾನೂನು ಹೋರಾಟ ನಡೆಸಿದ್ದ ದರ್ಶನ್, ಬಳಿಕ ನಿಯಾಮಾನುಸಾರ ಸವಲತ್ತು ಪಡೆಯುವಲ್ಲಿ ಸಕ್ಸಸ್ ಕೂಡ ಆಗಿದ್ದರು. ಹಾಗಿದರೆ ದರ್ಶನ್ ಅವರ ನೂರು ದಿನದ ಜೈಲುವಾಸ ಹೇಗಿತ್ತು? ಇಲ್ಲಿದೆ ಮಾಹಿತಿ. ಕೊಲೆ ಕೇಸ್​​ನಲ್ಲಿ ಈ ಮೊದಲು ದರ್ಶನ್ ಪಡೆದಿದ್ದ ಜಾಮೀನು ರದ್ದಾದ ಬಳಿ ಅವರನ್ನು ಪರಪ್ಪನ ಅಗ್ರಹಾರ (Parappana Agrahara) ಜೈಲಿಗೆ ಕಳಿಸಲಾಯಿತು. ಅಲ್ಲಿ ಅವರು ನೂರು ದಿನ ಸೆರೆವಾಸ‌ ಅನುಭವಿಸಿದ್ದಾರೆ.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಎರಡನೇ ಬಾರಿ ಜೈಲು ಬರೋಬ್ಬರಿ 105 ದಿನ ಕಳೆದು ಹೋಗಿದೆ. ಎರಡನೇ ಬಾರಿ ಜೈಲು ಸೇರಿದ ನಂತರ ನಟ ದರ್ಶನ್ ಜೈಲಿನಲ್ಲಿ ಹಲವು ಏಳು ಬೀಳುಗಳನ್ನ ಎದುರಿಸಿದ್ದರು. ಜೊತೆಗೆ ಜೈಲಿನಲ್ಲಿ ಕನಿಷ್ಟ ಸವಲತ್ತುಗಳು ಕೂಡ ಸಿಗ್ತಾ ಇಲ್ಲ ಅಂತಾ ಕಾನೂನು ಹೋರಾಟ ಕೂಡ ನಡೆಸಿದ್ದರು. ಇಷ್ಟೆಲ್ಲ ಸಂಕಷ್ಟಗಳ‌ ನಡುವೆ ದರ್ಶನ್ 105 ದಿನಗಳನ್ನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದಾರೆ.

ಇದೇ ವರ್ಷದ ಆಗಸ್ಟ್ 14ರಂದು ಸುಪ್ರೀಂಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ಪ್ರದೂಷ್, ನಾಗರಾಜ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನನ್ನ ರದ್ದುಗೊಳಿಸಿತ್ತು. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಅದೇ ದಿನ ದರ್ಶನ್ ಸೇರಿ ಏಳು ಮಂದಿಯನ್ನ ಅರೆಸ್ಟ್ ಮಾಡಿ ಕೋರ್ಟ್​ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಎಲ್ಲ ಏಳು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಆಗಸ್ಟ್ 14ರಂದು ಎರಡನೇ ಬಾರಿ ಜೈಲು ಸೇರಿದ್ದ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಸಾಕಷ್ಟು ಏಳು ಬೀಳುಗಳನ್ನ‌ ಅನುಭವಿಸಿದ್ದರು. ಎರಡನೇ ಬಾರಿ ಜೈಲು ಸೇರಿದ ಬಳಿಕ‌ ದರ್ಶನ್ ಅಬರಿಗೆ ಸೂಕ್ತ ವ್ಯವಸ್ಥೆ ನೀಡಲಾಗುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿತ್ತು. ಇದೇ ವಿಚಾರವಾಗಿ ದರ್ಶನ್ ಕೋರ್ಟ್ ಮೊರೆ ಹೋಗಿದ್ದು, ಜೈಲಿನಲ್ಲಿ ಸೂಕ್ತ ಹಾಸಿಗೆ, ಬೆಡ್ ಶೀಟ್, ದಿಂಬು ಕೊಡ್ತಿಲ್ಲ ಅಂತಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜೊತೆಗೆ ವಾಕ್ ಮಾಡಲು ಜಾಗ ಕೊಡ್ತಿಲ್ಲ. ಸೂರ್ಯನ ಬೆಳಕು ಕೂಡ ಬೀಳುತ್ತಿಲ್ಲ. ತಣ್ಣನೆ ವಾತಾವರಣದಿಂದ ಫಂಗಸ್ ಆಗಿದೆ ಅಂತ ಅಳಲು ತೋಡಿಕೊಂಡಿದ್ದರು.

ಇದನ್ನೂ ಓದಿ: ‘ದಿ ಡೆವಿಲ್’ ಗೆಲ್ಲಬೇಕು: ದರ್ಶನ್ ಸಿನಿಮಾಗೆ ಶುಭ ಹಾರೈಸಿದ ಸುಮಲತಾ ಅಂಬರೀಷ್

ಬಳಿಕ ಕೋರ್ಟ್ ವಿಚಾರಣೆ ವೇಳೆ, ‘ಇಲ್ಲಿ ಇರಲು ಆಗುತ್ತಿಲ್ಲ. ವಿಷ ಕೊಟ್ಟು ಬಿಡಿ ಸ್ವಾಮಿ’ ಅಂತ ಕೋರ್ಟ್​ನಲ್ಲಿ ಮನವಿ ಮಾಡಿದ್ದರು. ಬಳಿಕ ಹಾಸಿಗೆ, ಬೆಡ್ ಶೀಟ್ ಸಲುವಾಗಿ ಅರ್ಜಿ ಹಾಕಿ ಕಾನೂನು ಹೋರಾಟ ಕೂಡ ನಡೆಸಲಾಗಿತ್ತು. ಸುಮಾರು ಎರಡು ತಿಂಗಳ ಕಾಲ ಕೋರ್ಟ್ ವಿಚಾರಣೆ‌ ನಡೆಸಿ ಜೈಲಿನ ಮ್ಯಾನ್ಯುಯಲ್ ಪ್ರಕಾರ ಸೂಕ್ತ ಸವಲತ್ತುಗಳನ್ನ ಒದಗಿಸಲು ಆದೇಶಿಸಿತ್ತು. ಅದರೆ ಪುನಃ ಕೋರ್ಟ್ ವಿಚಾರಣೆ ವೇಳೆ ದರ್ಶನ್ ಚಳಿ‌ ಹೆಚ್ಚಾಗಿದೆ ಅಂತಾ ಅಳಲು ವ್ಯಕ್ತಪಡಿಸಿದ್ದಾರೆ. ಚಳಿಗಾಲ ಶುರುವಾಗಿದ್ದು, ಜೈಲಿನಲ್ಲಿ ಚಳಿ ಹೆಚ್ಚಾಗಿದೆ, ಬೆಡ್ ಶೀಟ್ ಕೊಡ್ತಿಲ್ಲ, ನಿದ್ದೆ ಇಲ್ಲದೇ ಕೂರುವಂತಾಗಿದೆ ಅಂತ ದರ್ಶನ್ ದೂರಿದ್ದರು. ಈ ಬಗ್ಗೆ ಗಮನವಹಿಸಿದ ಕೋರ್ಟ್ ಕೂಡಲೇ ಬೆಡ್ ಶೀಟ್ ಕೊಡಲು ಸೂಚಿಸಿತ್ತು. ಇಷ್ಟೆಲ್ಲ ರಾದ್ದಾಂತಗಳ ನಡುವೆ ದರ್ಶನ್ ಜೈಲು ಸೇರಿ ನೂರು ದಿನ ಕಂಪ್ಲೀಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?