AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ದರ್ಶನ್ ಅವರು ಚಿಂತಾಕ್ರಾಂತರಾಗಿದ್ದಾರೆ. ಅವರನ್ನು ಆರು ದಿನ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಈ ಮಧ್ಯೆ ಅವರು ಜೈಲಿನಲ್ಲಿ ಮೊದಲ ರಾತ್ರಿ ನಿದ್ದೆ ಮಾಡಿಲ್ಲ. ಅವರು ಚಿಂತೆಯಲ್ಲೇ ರಾತ್ರಿಯೆಲ್ಲ ಕಳೆದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 12, 2024 | 6:59 AM

Share

ನಟ ದರ್ಶನ್ (Darshan) ಅವರು ದೊಡ್ಡ ಸಂಕಷ್ಟ ಎದುರಿಸಿದ್ದಾರೆ. ಚಿತ್ರದುರ್ಗದ ವ್ಯಕ್ತಿ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಆಪ್ತೆ ಎನಿಸಿಕೊಂಡಿರುವ ಪವಿತ್ರಾ ಗೌಡ ಕೂಡ ಈ ಪ್ರಕಣದಲ್ಲಿ ಎ1 ಅಪರಾಧಿ ಎನಿಸಿಕೊಂಡಿದ್ದು, ದರ್ಶನ್ ಎ2 ಅಪರಾಧಿ ಆಗಿದ್ದಾರೆ. ಸದ್ಯ ಕೊಲೆ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ದರ್ಶನ್ ಅವರು ತೀವ್ರ ಚಿಂತೆಗೆ ಒಳಗಾಗಿದ್ದಾರೆ. ಜೈಲ್​ ಸೆಲ್​ನಲ್ಲಿರೋ ಅವರು ರಾತ್ರಿಯೆಲ್ಲ ನಿದ್ದೆ ಮಾಡಿಲ್ಲ.

ಅನ್ನಪೂರ್ಣೇಶ್ವರಿ ನಗರ ಠಾಣೆಯ ಲಾಕಪ್​ನಲ್ಲಿ ದರ್ಶನ್ ಹಾಗೂ ಸಹಚರರು ಇದ್ದಾರೆ. ರಾತ್ರಿ ದರ್ಶನ್​ ಅವರಿಗೆ ಹೋಟೆಲ್​ನಿಂದ ದೊನ್ನೆ ಬಿರಿಯಾನಿ ತರಿಸಲಾಗಿದೆ. ಅದನ್ನು ಎಲ್ಲರೂ ತಿಂದಿದ್ದಾರೆ. ಇತ್ತ ದರ್ಶನ್​ಗೆ ರಾತ್ರಿಯೆಲ್ಲ ನಿದ್ದೆ ಬಂದಿಲ್ಲ. ರಾತ್ರಿ ವೇಳೆ ಲಾಕಪ್​ನಲ್ಲಿ ಎಚ್ಚರಗೊಂಡು ಕುಳಿತಿದ್ದಾರೆ. ಬಂಧನದ ಬಳಿಕ ಅವರು ಚಿಂತಾಕ್ರಾಂತರಾಗಿದ್ದಾರೆ. ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ನಗರ ಠಾಣೆ ಬಳಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್, ಎಸ್​. ಪ್ರದೋಶ್​, ಆರ್. ನಾಗರಾಜು, ಕೆ. ಪವನ್, ಎಂ. ಲಕ್ಷ್ಮಣ್​, ದೀಪಕ್​ ಕುಮಾರ್, ನಂದೀಶ್​, ನಿಖಿಲ್ ನಾಯಕ್​, ಕಾರ್ತಿಕ್​, ರಾಘವೇಂದ್ರ ಅಲಿಯಾಸ್​ ರಾಘು, ಕೇಶವಮೂರ್ತಿ ಪೊಲೀಸರ ಅತಿಥಿ ಆಗಿದ್ದಾರೆ. ಎಲ್ಲರನ್ನೂ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ಠಾಣೆಯಲ್ಲಿರುವ ಕೊಲೆ ಆರೋಪಿ ದರ್ಶನ್​ಗೆ ದೊನ್ನೆ ಬಿರಿಯಾನಿ ತರಿಸಿದ ಪೊಲೀಸರು

ಆರು ದಿನಗಳ ಕಾಲ ದರ್ಶನ್ ವಿಚಾರಣೆ ನಡೆಯಲಿದೆ. ಇಂದಿನಿಂದ ಸಾಕ್ಷ್ಯ ಕಲೆ ಹಾಕೋ ಕೆಲಸ ಆರಂಭ ಆಗಲಿದೆ. ಕಿಡ್ನಾಪ್ ಮಾಡಿ ಕರೆದೊಯ್ದ ಜಾಗಗಳ ಮಹಜರನ್ನು ಪೊಲೀಸರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಕೂಡಿ ಹಾಕಿ ಹಲ್ಲೆ ಮಾಡಿದ ಜಾಗ, ಶವ ಎಸೆದ ಜಾಗದಲ್ಲಿ ಮಹಜರು ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್