ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ದರ್ಶನ್ ಅವರು ಚಿಂತಾಕ್ರಾಂತರಾಗಿದ್ದಾರೆ. ಅವರನ್ನು ಆರು ದಿನ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಈ ಮಧ್ಯೆ ಅವರು ಜೈಲಿನಲ್ಲಿ ಮೊದಲ ರಾತ್ರಿ ನಿದ್ದೆ ಮಾಡಿಲ್ಲ. ಅವರು ಚಿಂತೆಯಲ್ಲೇ ರಾತ್ರಿಯೆಲ್ಲ ಕಳೆದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 12, 2024 | 6:59 AM

ನಟ ದರ್ಶನ್ (Darshan) ಅವರು ದೊಡ್ಡ ಸಂಕಷ್ಟ ಎದುರಿಸಿದ್ದಾರೆ. ಚಿತ್ರದುರ್ಗದ ವ್ಯಕ್ತಿ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಆಪ್ತೆ ಎನಿಸಿಕೊಂಡಿರುವ ಪವಿತ್ರಾ ಗೌಡ ಕೂಡ ಈ ಪ್ರಕಣದಲ್ಲಿ ಎ1 ಅಪರಾಧಿ ಎನಿಸಿಕೊಂಡಿದ್ದು, ದರ್ಶನ್ ಎ2 ಅಪರಾಧಿ ಆಗಿದ್ದಾರೆ. ಸದ್ಯ ಕೊಲೆ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ದರ್ಶನ್ ಅವರು ತೀವ್ರ ಚಿಂತೆಗೆ ಒಳಗಾಗಿದ್ದಾರೆ. ಜೈಲ್​ ಸೆಲ್​ನಲ್ಲಿರೋ ಅವರು ರಾತ್ರಿಯೆಲ್ಲ ನಿದ್ದೆ ಮಾಡಿಲ್ಲ.

ಅನ್ನಪೂರ್ಣೇಶ್ವರಿ ನಗರ ಠಾಣೆಯ ಲಾಕಪ್​ನಲ್ಲಿ ದರ್ಶನ್ ಹಾಗೂ ಸಹಚರರು ಇದ್ದಾರೆ. ರಾತ್ರಿ ದರ್ಶನ್​ ಅವರಿಗೆ ಹೋಟೆಲ್​ನಿಂದ ದೊನ್ನೆ ಬಿರಿಯಾನಿ ತರಿಸಲಾಗಿದೆ. ಅದನ್ನು ಎಲ್ಲರೂ ತಿಂದಿದ್ದಾರೆ. ಇತ್ತ ದರ್ಶನ್​ಗೆ ರಾತ್ರಿಯೆಲ್ಲ ನಿದ್ದೆ ಬಂದಿಲ್ಲ. ರಾತ್ರಿ ವೇಳೆ ಲಾಕಪ್​ನಲ್ಲಿ ಎಚ್ಚರಗೊಂಡು ಕುಳಿತಿದ್ದಾರೆ. ಬಂಧನದ ಬಳಿಕ ಅವರು ಚಿಂತಾಕ್ರಾಂತರಾಗಿದ್ದಾರೆ. ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ನಗರ ಠಾಣೆ ಬಳಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್, ಎಸ್​. ಪ್ರದೋಶ್​, ಆರ್. ನಾಗರಾಜು, ಕೆ. ಪವನ್, ಎಂ. ಲಕ್ಷ್ಮಣ್​, ದೀಪಕ್​ ಕುಮಾರ್, ನಂದೀಶ್​, ನಿಖಿಲ್ ನಾಯಕ್​, ಕಾರ್ತಿಕ್​, ರಾಘವೇಂದ್ರ ಅಲಿಯಾಸ್​ ರಾಘು, ಕೇಶವಮೂರ್ತಿ ಪೊಲೀಸರ ಅತಿಥಿ ಆಗಿದ್ದಾರೆ. ಎಲ್ಲರನ್ನೂ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ಠಾಣೆಯಲ್ಲಿರುವ ಕೊಲೆ ಆರೋಪಿ ದರ್ಶನ್​ಗೆ ದೊನ್ನೆ ಬಿರಿಯಾನಿ ತರಿಸಿದ ಪೊಲೀಸರು

ಆರು ದಿನಗಳ ಕಾಲ ದರ್ಶನ್ ವಿಚಾರಣೆ ನಡೆಯಲಿದೆ. ಇಂದಿನಿಂದ ಸಾಕ್ಷ್ಯ ಕಲೆ ಹಾಕೋ ಕೆಲಸ ಆರಂಭ ಆಗಲಿದೆ. ಕಿಡ್ನಾಪ್ ಮಾಡಿ ಕರೆದೊಯ್ದ ಜಾಗಗಳ ಮಹಜರನ್ನು ಪೊಲೀಸರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಕೂಡಿ ಹಾಕಿ ಹಲ್ಲೆ ಮಾಡಿದ ಜಾಗ, ಶವ ಎಸೆದ ಜಾಗದಲ್ಲಿ ಮಹಜರು ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ