AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪ ಸಾಬೀತಾದರೆ ಚಿತ್ರರಂಗದಿಂದ ದರ್ಶನ್ ಬ್ಯಾನ್? ಇರುವ ಅಡೆತಡೆಗಳೇನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆಲ್ಲ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಈ ಪ್ರಕರಣದಿಂದ ದರ್ಶನ್ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಿನಿ ಕರಿಯರ್ ಎಕೊನೆಗೊಳ್ಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಆರೋಪ ಸಾಬೀತಾದರೆ ಚಿತ್ರರಂಗದಿಂದ ದರ್ಶನ್ ಬ್ಯಾನ್? ಇರುವ ಅಡೆತಡೆಗಳೇನು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 12, 2024 | 12:30 PM

Share

ನಟ ದರ್ಶನ್ (Darshan) ಅವರು ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ದರ್ಶನ್ ಅವರು ಅರೆಸ್ಟ್ ಆಗಿರುವುದರಿಂದ ಸ್ಯಾಂಡಲ್​ವುಡ್ ಸೈಲೆಂಟ್ ಆಗಿದೆ. ಬಹುತೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಕೆಲವೇ ಕೆಲವು ಸೆಲೆಬ್ರಿಟಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿಜಕ್ಕೂ ತಪ್ಪಾಗಿದ್ದರೆ ಶಿಕ್ಷೆ ಆಗಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಈ ರೀತಿ ಘಟನೆಗಳು ನಡೆದಾಗ ಕರ್ನಾಟಕ ಚಲನಚಿತ್ರ ಮಂಡಳಿ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತದೆ ಅನ್ನೋದು ಮುಖ್ಯವಾಗುತ್ತದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಅವರು ಈ ಕೇಸ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಅವರು ಚಿತ್ರರಂಗದ ಮಾನ-ಮರ್ಯಾದೆ ಕಳೆದಿರುವುದಾಗಿ ಅವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ಅವರ ಮೇಲೆ ನಿಷೇಧ ಹೇರುವುದಾಗಿಯೂ ಹೇಳಿದ್ದಾರೆ. ಜೊತೆಗೆ ಈ ವಿಚಾರದಲ್ಲಿ ಕಲಾವಿದರ ಸಂಘದವರು ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಕಲಾವಿದರ ಸಂಘದ ವಿಚಾರಕ್ಕೆ ಬರೋದಾದರೆ ಅದು ಸಂಪೂರ್ಣ ನಿಷ್ಕ್ರಿಯವೇ ಆಗಿ ಬಿಟ್ಟಿದೆ ಎನ್ನಬಹುದು. ಅಂಬರೀಷ್ ಅವರು ಈ ಸಂಘಕ್ಕೆ ಅಧ್ಯಕ್ಷರಾಗಿದ್ದರು. ಅವರು ಮೃತಪಟ್ಟ ಬಳಿಕ ಮತ್ತೊಬ್ಬರ ಆಯ್ಕೆ ಆಗಿಲ್ಲ. ಸಭೆಗಳು ಕೂಡ ನಡೆಯುತ್ತಿಲ್ಲ. ಹೀಗಿರುವಾಗ ಸಂಘದವರು ದರ್ಶನ್​ನ ಬ್ಯಾನ್ ಮಾಡೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ, ದರ್ಶನ್ ಮೇಲೆ ರೌಡಿಶೀಟರ್? ಗೃಹ ಸಚಿವರು ಹೇಳಿದ್ದೇನು ನೋಡಿ

ದರ್ಶನ್ ಸಿನಿಮಾಗಳಿಗೆ ಬೇಡಿಕೆ ಇದೆ. ಅವರು ಸಿನಿಮಾಗಳಿಂದ ಅನೇಕರಿಗೆ ಕೆಲಸ ಸಿಗುತ್ತಿದೆ. ಇವರನ್ನು ಬ್ಯಾನ್ ಮಾಡಬೇಕು ಎಂದಾಗ ಅದನ್ನು ಬೆಂಬಲಿಸೋರು ಕಡಿಮೆ ಎನ್ನುವ ಮಾತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ