AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ

ದರ್ಶನ್ ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 07, 2024 | 11:51 AM

Share

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರು ಬಳ್ಳಾರಿ ಜೈಲಿನ ಊಟ ಮಾಡುತ್ತಿದ್ದಾರೆ. ಈ ಮಧ್ಯೆ ದರ್ಶನ್​ಗೆ ಜೈಲಿನ ನೈಜತೆ ಅರಿವಾಗುತ್ತಿದೆ. ಈ ಮಧ್ಯೆ ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ದರ್ಶನ್‌ಗೆ ತಣ್ಣೀರು ಸ್ನಾನವೇ ಗತಿ ಆಗಿದೆ. ಇಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರು ಹಾಯಾಗಿ ಇದ್ದರು. ಅವರು ಸುಖವಾಗಿ ಸಮಯ ಕಳೆಯುತ್ತಾ ಇದ್ದರು. ಈ ವ್ಯವಸ್ಥೆ ಮಾಡಿಕೊಟ್ಟಿದ್ದು ವಿಲ್ಸನ್ ಗಾರ್ಡನ್ ನಾಗ. ಆದರೆ, ಈಗ ಬಳ್ಳಾರಿಯಲ್ಲಿ ವ್ಯವಸ್ಥೆ ಮಾಡಿಕೊಡಲು ಯಾರೂ ಇಲ್ಲ. ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ಹಬ್ಬಕ್ಕೆ ಇಲ್ಲ ಕಳೆ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಆರೋಪಿ ದರ್ಶನ್ ಇರುವ ಕಾರಣಕ್ಕೆ ಹಬ್ಬದ ಸಂಭ್ರಮ ಕಳೆಗುಂದಿದೆ. ಬಳ್ಳಾರಿ ಜೈಲಿನಲ್ಲಿ ಗಣೇಶನ ಚತುರ್ಥಿ ಈ ವರ್ಷ ಸರಳವಾಗಿ ಆಚರಣೆ ಮಾಡಲು ನಿರ್ಧಾರ‌‌ ಮಾಡಲಾಗಿದೆ. ಕೇವಲ ಜೈಲು ಸಿಬ್ಬಂದಿಗೆ ಮಾತ್ರ ಗಣೇಶ ಮಂಟಪ ಅಲಂಕಾರ ಮಾಡಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ದರ್ಶನ್​ ಕ್ರೌರ್ಯ ಎಷ್ಟಿತ್ತು? ಚಾರ್ಜ್​​ಶೀಟ್​ನಲ್ಲಿ ಮತ್ತೊಂದು ಶಾಕಿಂಗ್ ವಿಚಾರ ರಿವೀಲ್

ಪ್ರತಿ ವರ್ಷ ಎಲ್ಲ ಕೈದಿಗಳು ಸೇರಿ ಅದ್ದೂರಿಯಾಗಿ ಅಲಂಕಾರ ಮಾಡಿ ಹಬ್ಬ ಮಾಡುತ್ತಿದ್ದರು. ಈ ವರ್ಷ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಸರಳವಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಾರಿ ಕೈ ಮುಗಿದು ಪ್ರಾರ್ಥನೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ನಿರ್ಧಾರ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ