AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ

ದರ್ಶನ್ ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 07, 2024 | 11:51 AM

Share

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರು ಬಳ್ಳಾರಿ ಜೈಲಿನ ಊಟ ಮಾಡುತ್ತಿದ್ದಾರೆ. ಈ ಮಧ್ಯೆ ದರ್ಶನ್​ಗೆ ಜೈಲಿನ ನೈಜತೆ ಅರಿವಾಗುತ್ತಿದೆ. ಈ ಮಧ್ಯೆ ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ದರ್ಶನ್‌ಗೆ ತಣ್ಣೀರು ಸ್ನಾನವೇ ಗತಿ ಆಗಿದೆ. ಇಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರು ಹಾಯಾಗಿ ಇದ್ದರು. ಅವರು ಸುಖವಾಗಿ ಸಮಯ ಕಳೆಯುತ್ತಾ ಇದ್ದರು. ಈ ವ್ಯವಸ್ಥೆ ಮಾಡಿಕೊಟ್ಟಿದ್ದು ವಿಲ್ಸನ್ ಗಾರ್ಡನ್ ನಾಗ. ಆದರೆ, ಈಗ ಬಳ್ಳಾರಿಯಲ್ಲಿ ವ್ಯವಸ್ಥೆ ಮಾಡಿಕೊಡಲು ಯಾರೂ ಇಲ್ಲ. ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ಹಬ್ಬಕ್ಕೆ ಇಲ್ಲ ಕಳೆ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಆರೋಪಿ ದರ್ಶನ್ ಇರುವ ಕಾರಣಕ್ಕೆ ಹಬ್ಬದ ಸಂಭ್ರಮ ಕಳೆಗುಂದಿದೆ. ಬಳ್ಳಾರಿ ಜೈಲಿನಲ್ಲಿ ಗಣೇಶನ ಚತುರ್ಥಿ ಈ ವರ್ಷ ಸರಳವಾಗಿ ಆಚರಣೆ ಮಾಡಲು ನಿರ್ಧಾರ‌‌ ಮಾಡಲಾಗಿದೆ. ಕೇವಲ ಜೈಲು ಸಿಬ್ಬಂದಿಗೆ ಮಾತ್ರ ಗಣೇಶ ಮಂಟಪ ಅಲಂಕಾರ ಮಾಡಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ದರ್ಶನ್​ ಕ್ರೌರ್ಯ ಎಷ್ಟಿತ್ತು? ಚಾರ್ಜ್​​ಶೀಟ್​ನಲ್ಲಿ ಮತ್ತೊಂದು ಶಾಕಿಂಗ್ ವಿಚಾರ ರಿವೀಲ್

ಪ್ರತಿ ವರ್ಷ ಎಲ್ಲ ಕೈದಿಗಳು ಸೇರಿ ಅದ್ದೂರಿಯಾಗಿ ಅಲಂಕಾರ ಮಾಡಿ ಹಬ್ಬ ಮಾಡುತ್ತಿದ್ದರು. ಈ ವರ್ಷ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಸರಳವಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಾರಿ ಕೈ ಮುಗಿದು ಪ್ರಾರ್ಥನೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ನಿರ್ಧಾರ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ