ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ

ದರ್ಶನ್ ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 07, 2024 | 11:51 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರು ಬಳ್ಳಾರಿ ಜೈಲಿನ ಊಟ ಮಾಡುತ್ತಿದ್ದಾರೆ. ಈ ಮಧ್ಯೆ ದರ್ಶನ್​ಗೆ ಜೈಲಿನ ನೈಜತೆ ಅರಿವಾಗುತ್ತಿದೆ. ಈ ಮಧ್ಯೆ ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ದರ್ಶನ್‌ಗೆ ತಣ್ಣೀರು ಸ್ನಾನವೇ ಗತಿ ಆಗಿದೆ. ಇಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರು ಹಾಯಾಗಿ ಇದ್ದರು. ಅವರು ಸುಖವಾಗಿ ಸಮಯ ಕಳೆಯುತ್ತಾ ಇದ್ದರು. ಈ ವ್ಯವಸ್ಥೆ ಮಾಡಿಕೊಟ್ಟಿದ್ದು ವಿಲ್ಸನ್ ಗಾರ್ಡನ್ ನಾಗ. ಆದರೆ, ಈಗ ಬಳ್ಳಾರಿಯಲ್ಲಿ ವ್ಯವಸ್ಥೆ ಮಾಡಿಕೊಡಲು ಯಾರೂ ಇಲ್ಲ. ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ಹಬ್ಬಕ್ಕೆ ಇಲ್ಲ ಕಳೆ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಆರೋಪಿ ದರ್ಶನ್ ಇರುವ ಕಾರಣಕ್ಕೆ ಹಬ್ಬದ ಸಂಭ್ರಮ ಕಳೆಗುಂದಿದೆ. ಬಳ್ಳಾರಿ ಜೈಲಿನಲ್ಲಿ ಗಣೇಶನ ಚತುರ್ಥಿ ಈ ವರ್ಷ ಸರಳವಾಗಿ ಆಚರಣೆ ಮಾಡಲು ನಿರ್ಧಾರ‌‌ ಮಾಡಲಾಗಿದೆ. ಕೇವಲ ಜೈಲು ಸಿಬ್ಬಂದಿಗೆ ಮಾತ್ರ ಗಣೇಶ ಮಂಟಪ ಅಲಂಕಾರ ಮಾಡಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ದರ್ಶನ್​ ಕ್ರೌರ್ಯ ಎಷ್ಟಿತ್ತು? ಚಾರ್ಜ್​​ಶೀಟ್​ನಲ್ಲಿ ಮತ್ತೊಂದು ಶಾಕಿಂಗ್ ವಿಚಾರ ರಿವೀಲ್

ಪ್ರತಿ ವರ್ಷ ಎಲ್ಲ ಕೈದಿಗಳು ಸೇರಿ ಅದ್ದೂರಿಯಾಗಿ ಅಲಂಕಾರ ಮಾಡಿ ಹಬ್ಬ ಮಾಡುತ್ತಿದ್ದರು. ಈ ವರ್ಷ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಸರಳವಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಾರಿ ಕೈ ಮುಗಿದು ಪ್ರಾರ್ಥನೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ನಿರ್ಧಾರ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.