AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: May 09, 2024 | 8:44 AM

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ