AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮೈಸೂರಿಗೆ ತೆರಳಲಿದ್ದಾರೆ ನಟ ದರ್ಶನ್; ಕಾರಣ ಏನು?

ದರ್ಶನ್ ಅವರು ಕೊಲೆ ಬಳಿಕ ಮೈಸೂರಿಗೆ ತೆರಳಿದ್ದರು. ಅಲ್ಲಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನು, ಶರಣಾಗಲು ಕೆಲವರು ಒಪ್ಪದೇ ಇದ್ದಾಗ ಮೈಸೂರಿಗೆ ಕರೆಸಿ ಅವರ ಮನ ಒಲಿಸೋ ಪ್ರಯತ್ನವನ್ನು ದರ್ಶನ್ ಮಾಡಿದ್ದರು. ಹೀಗಾಗಿ ಅಲ್ಲಿಯ ವಿಚಾರಣೆ ತುಂಬಾನೇ ಮುಖ್ಯವಾಗಲಿದೆ.

ಇಂದು ಮೈಸೂರಿಗೆ ತೆರಳಲಿದ್ದಾರೆ ನಟ ದರ್ಶನ್; ಕಾರಣ ಏನು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 18, 2024 | 6:55 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಸ್ಟಾರ್ ಹೀರೋಗಳಿಗೆ ನೋಟಿಸ್ ನೀಡೋ ಕೆಲಸ ಆಗುತ್ತಿದೆ. ಪಾರ್ಟಿಯಲ್ಲಿ ಚಿಕ್ಕಣ್ಣ ಇದ್ದರು ಅನ್ನೋ ಕಾರಣಕ್ಕೆ ಅವರಿಗೂ ನೋಟಿಸ್ ಹೋಗಿದೆ. ಅವರು ವಿಚಾರಣೆಗೆ ಹಾಜರಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮಧ್ಯೆ ಇಂದು (ಜೂನ್ 18) ನಟ ದರ್ಶನ್ (Darshan) ಅವರನ್ನು ಮೈಸೂರಿಗೆ ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಅವರು ಕೊಲೆ ಬಳಿಕ ಮೈಸೂರಿಗೆ ತೆರಳಿದ್ದರು. ಅಲ್ಲಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನು, ಶರಣಾಗಲು ಕೆಲವರು ಒಪ್ಪದೇ ಇದ್ದಾಗ ಮೈಸೂರಿಗೆ ಕರೆಸಿ ಅವರ ಮನ ಒಲಿಸೋ ಪ್ರಯತ್ನವನ್ನು ದರ್ಶನ್ ಮಾಡಿದ್ದರು. ಹೀಗಾಗಿ, ಕೊಲೆ ಆರೋಪಿ ದರ್ಶನ್ ಜೊತೆ ಪವನ್, ನಾಗರಾಜ್, ನಂದೀಶ್, ಲಕ್ಷ್ಮಣ್, ದೀಪಕ್​ನನ್ನು ಮೈಸೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡೋ ಸಾಧ್ಯತೆ ಇದೆ. ವಿಚಾರಣೆ ದೃಷ್ಟಿಯಲ್ಲಿ ಇದು ತುಂಬಾನೇ ಮುಖ್ಯ ಆಗಲಿದೆ. ದರ್ಶನ್ ಮೈಸೂರಿನಲ್ಲಿ ಏನು ಮಾಡಿದರು, ಕೊಲೆಗೆ ಸಂಬಂಧಿಸಿ ಅವರು ಹೋಟೆಲ್​ನಲ್ಲಿ ಚರ್ಚೆ ಮಾಡಿದ್ದರೇ ಎನ್ನುವ ಕುರಿತು ತನಿಖೆ ನಡೆಯಲಿದೆ.

ಇದನ್ನೂ ಓದಿ: ದರ್ಶನ್​ ಕೇಸ್: ವಿಚಾರಣೆ ಬಳಿಕ ಚಿಕ್ಕಣ್ಣ ಪ್ರತಿಕ್ರಿಯೆ; ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ

ಕಳೆದ ಮಂಗಳವಾರ (ಜೂನ್ 11) ದರ್ಶನ್ ಅರೆಸ್ಟ್ ಆಗಿದ್ದರು. ದರ್ಶನ್ ಜೊತೆ ಪವಿತ್ರಾ ಗೌಡ, ಪವನ್, ವಿನಯ್ ಸೇರಿ 19 ಜನರ ಬಂಧನ ಆಗಿದೆ. ಅವರ ವಿಚಾರಣೆ ಪ್ರಗತಿಯಲ್ಲಿದೆ. ಈಗಾಗಲೇ ಪೊಲೀಸರು ಎರಡನೇ ಬಾರಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:51 am, Tue, 18 June 24

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ