AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮೈಸೂರಿಗೆ ತೆರಳಲಿದ್ದಾರೆ ನಟ ದರ್ಶನ್; ಕಾರಣ ಏನು?

ದರ್ಶನ್ ಅವರು ಕೊಲೆ ಬಳಿಕ ಮೈಸೂರಿಗೆ ತೆರಳಿದ್ದರು. ಅಲ್ಲಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನು, ಶರಣಾಗಲು ಕೆಲವರು ಒಪ್ಪದೇ ಇದ್ದಾಗ ಮೈಸೂರಿಗೆ ಕರೆಸಿ ಅವರ ಮನ ಒಲಿಸೋ ಪ್ರಯತ್ನವನ್ನು ದರ್ಶನ್ ಮಾಡಿದ್ದರು. ಹೀಗಾಗಿ ಅಲ್ಲಿಯ ವಿಚಾರಣೆ ತುಂಬಾನೇ ಮುಖ್ಯವಾಗಲಿದೆ.

ಇಂದು ಮೈಸೂರಿಗೆ ತೆರಳಲಿದ್ದಾರೆ ನಟ ದರ್ಶನ್; ಕಾರಣ ಏನು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 18, 2024 | 6:55 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಸ್ಟಾರ್ ಹೀರೋಗಳಿಗೆ ನೋಟಿಸ್ ನೀಡೋ ಕೆಲಸ ಆಗುತ್ತಿದೆ. ಪಾರ್ಟಿಯಲ್ಲಿ ಚಿಕ್ಕಣ್ಣ ಇದ್ದರು ಅನ್ನೋ ಕಾರಣಕ್ಕೆ ಅವರಿಗೂ ನೋಟಿಸ್ ಹೋಗಿದೆ. ಅವರು ವಿಚಾರಣೆಗೆ ಹಾಜರಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮಧ್ಯೆ ಇಂದು (ಜೂನ್ 18) ನಟ ದರ್ಶನ್ (Darshan) ಅವರನ್ನು ಮೈಸೂರಿಗೆ ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಅವರು ಕೊಲೆ ಬಳಿಕ ಮೈಸೂರಿಗೆ ತೆರಳಿದ್ದರು. ಅಲ್ಲಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನು, ಶರಣಾಗಲು ಕೆಲವರು ಒಪ್ಪದೇ ಇದ್ದಾಗ ಮೈಸೂರಿಗೆ ಕರೆಸಿ ಅವರ ಮನ ಒಲಿಸೋ ಪ್ರಯತ್ನವನ್ನು ದರ್ಶನ್ ಮಾಡಿದ್ದರು. ಹೀಗಾಗಿ, ಕೊಲೆ ಆರೋಪಿ ದರ್ಶನ್ ಜೊತೆ ಪವನ್, ನಾಗರಾಜ್, ನಂದೀಶ್, ಲಕ್ಷ್ಮಣ್, ದೀಪಕ್​ನನ್ನು ಮೈಸೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡೋ ಸಾಧ್ಯತೆ ಇದೆ. ವಿಚಾರಣೆ ದೃಷ್ಟಿಯಲ್ಲಿ ಇದು ತುಂಬಾನೇ ಮುಖ್ಯ ಆಗಲಿದೆ. ದರ್ಶನ್ ಮೈಸೂರಿನಲ್ಲಿ ಏನು ಮಾಡಿದರು, ಕೊಲೆಗೆ ಸಂಬಂಧಿಸಿ ಅವರು ಹೋಟೆಲ್​ನಲ್ಲಿ ಚರ್ಚೆ ಮಾಡಿದ್ದರೇ ಎನ್ನುವ ಕುರಿತು ತನಿಖೆ ನಡೆಯಲಿದೆ.

ಇದನ್ನೂ ಓದಿ: ದರ್ಶನ್​ ಕೇಸ್: ವಿಚಾರಣೆ ಬಳಿಕ ಚಿಕ್ಕಣ್ಣ ಪ್ರತಿಕ್ರಿಯೆ; ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ

ಕಳೆದ ಮಂಗಳವಾರ (ಜೂನ್ 11) ದರ್ಶನ್ ಅರೆಸ್ಟ್ ಆಗಿದ್ದರು. ದರ್ಶನ್ ಜೊತೆ ಪವಿತ್ರಾ ಗೌಡ, ಪವನ್, ವಿನಯ್ ಸೇರಿ 19 ಜನರ ಬಂಧನ ಆಗಿದೆ. ಅವರ ವಿಚಾರಣೆ ಪ್ರಗತಿಯಲ್ಲಿದೆ. ಈಗಾಗಲೇ ಪೊಲೀಸರು ಎರಡನೇ ಬಾರಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:51 am, Tue, 18 June 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್