AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮೈಸೂರಿಗೆ ತೆರಳಲಿದ್ದಾರೆ ನಟ ದರ್ಶನ್; ಕಾರಣ ಏನು?

ದರ್ಶನ್ ಅವರು ಕೊಲೆ ಬಳಿಕ ಮೈಸೂರಿಗೆ ತೆರಳಿದ್ದರು. ಅಲ್ಲಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನು, ಶರಣಾಗಲು ಕೆಲವರು ಒಪ್ಪದೇ ಇದ್ದಾಗ ಮೈಸೂರಿಗೆ ಕರೆಸಿ ಅವರ ಮನ ಒಲಿಸೋ ಪ್ರಯತ್ನವನ್ನು ದರ್ಶನ್ ಮಾಡಿದ್ದರು. ಹೀಗಾಗಿ ಅಲ್ಲಿಯ ವಿಚಾರಣೆ ತುಂಬಾನೇ ಮುಖ್ಯವಾಗಲಿದೆ.

ಇಂದು ಮೈಸೂರಿಗೆ ತೆರಳಲಿದ್ದಾರೆ ನಟ ದರ್ಶನ್; ಕಾರಣ ಏನು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 18, 2024 | 6:55 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಸ್ಟಾರ್ ಹೀರೋಗಳಿಗೆ ನೋಟಿಸ್ ನೀಡೋ ಕೆಲಸ ಆಗುತ್ತಿದೆ. ಪಾರ್ಟಿಯಲ್ಲಿ ಚಿಕ್ಕಣ್ಣ ಇದ್ದರು ಅನ್ನೋ ಕಾರಣಕ್ಕೆ ಅವರಿಗೂ ನೋಟಿಸ್ ಹೋಗಿದೆ. ಅವರು ವಿಚಾರಣೆಗೆ ಹಾಜರಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮಧ್ಯೆ ಇಂದು (ಜೂನ್ 18) ನಟ ದರ್ಶನ್ (Darshan) ಅವರನ್ನು ಮೈಸೂರಿಗೆ ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಅವರು ಕೊಲೆ ಬಳಿಕ ಮೈಸೂರಿಗೆ ತೆರಳಿದ್ದರು. ಅಲ್ಲಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನು, ಶರಣಾಗಲು ಕೆಲವರು ಒಪ್ಪದೇ ಇದ್ದಾಗ ಮೈಸೂರಿಗೆ ಕರೆಸಿ ಅವರ ಮನ ಒಲಿಸೋ ಪ್ರಯತ್ನವನ್ನು ದರ್ಶನ್ ಮಾಡಿದ್ದರು. ಹೀಗಾಗಿ, ಕೊಲೆ ಆರೋಪಿ ದರ್ಶನ್ ಜೊತೆ ಪವನ್, ನಾಗರಾಜ್, ನಂದೀಶ್, ಲಕ್ಷ್ಮಣ್, ದೀಪಕ್​ನನ್ನು ಮೈಸೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡೋ ಸಾಧ್ಯತೆ ಇದೆ. ವಿಚಾರಣೆ ದೃಷ್ಟಿಯಲ್ಲಿ ಇದು ತುಂಬಾನೇ ಮುಖ್ಯ ಆಗಲಿದೆ. ದರ್ಶನ್ ಮೈಸೂರಿನಲ್ಲಿ ಏನು ಮಾಡಿದರು, ಕೊಲೆಗೆ ಸಂಬಂಧಿಸಿ ಅವರು ಹೋಟೆಲ್​ನಲ್ಲಿ ಚರ್ಚೆ ಮಾಡಿದ್ದರೇ ಎನ್ನುವ ಕುರಿತು ತನಿಖೆ ನಡೆಯಲಿದೆ.

ಇದನ್ನೂ ಓದಿ: ದರ್ಶನ್​ ಕೇಸ್: ವಿಚಾರಣೆ ಬಳಿಕ ಚಿಕ್ಕಣ್ಣ ಪ್ರತಿಕ್ರಿಯೆ; ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ

ಕಳೆದ ಮಂಗಳವಾರ (ಜೂನ್ 11) ದರ್ಶನ್ ಅರೆಸ್ಟ್ ಆಗಿದ್ದರು. ದರ್ಶನ್ ಜೊತೆ ಪವಿತ್ರಾ ಗೌಡ, ಪವನ್, ವಿನಯ್ ಸೇರಿ 19 ಜನರ ಬಂಧನ ಆಗಿದೆ. ಅವರ ವಿಚಾರಣೆ ಪ್ರಗತಿಯಲ್ಲಿದೆ. ಈಗಾಗಲೇ ಪೊಲೀಸರು ಎರಡನೇ ಬಾರಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:51 am, Tue, 18 June 24

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?