AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ

ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ
ಡಾ. ವಿಷ್ಣು ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಕ್ಕೆ ನಟ ದರ್ಶನ್​ ಆಕ್ರೋಶ
KUSHAL V
|

Updated on:Dec 26, 2020 | 6:19 PM

Share

ಬೆಂಗಳೂರು: ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ, ಆರಾಧಿಸುವ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವಿಷ್ಣು ಸರ್ ಪುತ್ಥಳಿ ಧ್ವಂಸಗೊಳಿಸಿದ್ದಾರೆ. ಯಾರೂ ಇಲ್ಲದ ವೇಳೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ. ಇಂಥ ದುಷ್ಕರ್ಮಿಗಳಿಗೆ ತಕ್ಷಣ ಶಿಕ್ಷೆ ಆಗಲೇಬೇಕು ಎಂದು ಟ್ವೀಟ್​​ ಮಾಡಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದ ಹಾಗೆ, ಮಾಗಡಿ ರಸ್ತೆಯ ಟೋಲ್​ ಗೇಟ್​ ಬಳಿಯ ಸರ್ಕಲ್​ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಬಾಲಗಂಗಾಧರನಾಥಶ್ರೀ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಈ ನಡುವೆ, ಅಲ್ಲಿ ಪ್ರತಿಷ್ಠಾಪನೆಯಾಗಿದ್ದ ಡಾ.ವಿಷ್ಣು ಪ್ರತಿಮೆಯನ್ನು ಸ್ಥಳಾಂತರ ಮಾಡಲು ಮಾತುಕತೆಯಾಗಿತ್ತು ಎಂದು ಹೇಳಲಾಗಿದೆ. ಆದರೆ, ಈ ನಡುವೆ ಕಿಡಿಗೇಡಿಗಳು ರಾತ್ರೋರಾತ್ರಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ, ಬೇರೆ ಕಡೆ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಹೇಳಿದ್ದಾರೆ ಎಂದು ಟಿವಿ9ಗೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಪ್ರತಿಕ್ರಿಯಿಸಿದರು. ಜೊತೆಗೆ, ಪ್ರತಿಮೆ ಧ್ವಂಸಗೊಳಿಸಿದವರನ್ನ ಪತ್ತೆ ಹಚ್ಚಿ ಶಿಕ್ಷೆ ನೀಡಿ. ಆದರೆ, ಈ ವಿಚಾರವನ್ನು ಮುಂದುವರಿಸುವುದು ಬೇಡ ಎಂದು ಅನಿರುದ್ಧ್ ಹೇಳಿದರು.

ಈ ನಡುವೆ, ಡಾ.ವಿಷ್ಣು ಅಭಿಮಾನಿಗಳು ಅದೇ ಸ್ಥಳದಲ್ಲಿ ಮತ್ತೊಂದು ಪುತ್ಥಳಿಯನ್ನು ಪ್ರತಿಷ್ಠಾಪನೆ ಮಾಡಿದರು. ಜೊತೆಗೆ, ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸಿದರು.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ

Published On - 5:37 pm, Sat, 26 December 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ