AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ

ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ
ಡಾ. ವಿಷ್ಣು ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಕ್ಕೆ ನಟ ದರ್ಶನ್​ ಆಕ್ರೋಶ
KUSHAL V
|

Updated on:Dec 26, 2020 | 6:19 PM

Share

ಬೆಂಗಳೂರು: ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ, ಆರಾಧಿಸುವ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವಿಷ್ಣು ಸರ್ ಪುತ್ಥಳಿ ಧ್ವಂಸಗೊಳಿಸಿದ್ದಾರೆ. ಯಾರೂ ಇಲ್ಲದ ವೇಳೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ. ಇಂಥ ದುಷ್ಕರ್ಮಿಗಳಿಗೆ ತಕ್ಷಣ ಶಿಕ್ಷೆ ಆಗಲೇಬೇಕು ಎಂದು ಟ್ವೀಟ್​​ ಮಾಡಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದ ಹಾಗೆ, ಮಾಗಡಿ ರಸ್ತೆಯ ಟೋಲ್​ ಗೇಟ್​ ಬಳಿಯ ಸರ್ಕಲ್​ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಬಾಲಗಂಗಾಧರನಾಥಶ್ರೀ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಈ ನಡುವೆ, ಅಲ್ಲಿ ಪ್ರತಿಷ್ಠಾಪನೆಯಾಗಿದ್ದ ಡಾ.ವಿಷ್ಣು ಪ್ರತಿಮೆಯನ್ನು ಸ್ಥಳಾಂತರ ಮಾಡಲು ಮಾತುಕತೆಯಾಗಿತ್ತು ಎಂದು ಹೇಳಲಾಗಿದೆ. ಆದರೆ, ಈ ನಡುವೆ ಕಿಡಿಗೇಡಿಗಳು ರಾತ್ರೋರಾತ್ರಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ, ಬೇರೆ ಕಡೆ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಹೇಳಿದ್ದಾರೆ ಎಂದು ಟಿವಿ9ಗೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಪ್ರತಿಕ್ರಿಯಿಸಿದರು. ಜೊತೆಗೆ, ಪ್ರತಿಮೆ ಧ್ವಂಸಗೊಳಿಸಿದವರನ್ನ ಪತ್ತೆ ಹಚ್ಚಿ ಶಿಕ್ಷೆ ನೀಡಿ. ಆದರೆ, ಈ ವಿಚಾರವನ್ನು ಮುಂದುವರಿಸುವುದು ಬೇಡ ಎಂದು ಅನಿರುದ್ಧ್ ಹೇಳಿದರು.

ಈ ನಡುವೆ, ಡಾ.ವಿಷ್ಣು ಅಭಿಮಾನಿಗಳು ಅದೇ ಸ್ಥಳದಲ್ಲಿ ಮತ್ತೊಂದು ಪುತ್ಥಳಿಯನ್ನು ಪ್ರತಿಷ್ಠಾಪನೆ ಮಾಡಿದರು. ಜೊತೆಗೆ, ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸಿದರು.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ

Published On - 5:37 pm, Sat, 26 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ