AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ

ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ
ಡಾ. ವಿಷ್ಣು ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಕ್ಕೆ ನಟ ದರ್ಶನ್​ ಆಕ್ರೋಶ
KUSHAL V
|

Updated on:Dec 26, 2020 | 6:19 PM

Share

ಬೆಂಗಳೂರು: ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ, ಆರಾಧಿಸುವ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವಿಷ್ಣು ಸರ್ ಪುತ್ಥಳಿ ಧ್ವಂಸಗೊಳಿಸಿದ್ದಾರೆ. ಯಾರೂ ಇಲ್ಲದ ವೇಳೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ. ಇಂಥ ದುಷ್ಕರ್ಮಿಗಳಿಗೆ ತಕ್ಷಣ ಶಿಕ್ಷೆ ಆಗಲೇಬೇಕು ಎಂದು ಟ್ವೀಟ್​​ ಮಾಡಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದ ಹಾಗೆ, ಮಾಗಡಿ ರಸ್ತೆಯ ಟೋಲ್​ ಗೇಟ್​ ಬಳಿಯ ಸರ್ಕಲ್​ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಬಾಲಗಂಗಾಧರನಾಥಶ್ರೀ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಈ ನಡುವೆ, ಅಲ್ಲಿ ಪ್ರತಿಷ್ಠಾಪನೆಯಾಗಿದ್ದ ಡಾ.ವಿಷ್ಣು ಪ್ರತಿಮೆಯನ್ನು ಸ್ಥಳಾಂತರ ಮಾಡಲು ಮಾತುಕತೆಯಾಗಿತ್ತು ಎಂದು ಹೇಳಲಾಗಿದೆ. ಆದರೆ, ಈ ನಡುವೆ ಕಿಡಿಗೇಡಿಗಳು ರಾತ್ರೋರಾತ್ರಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ, ಬೇರೆ ಕಡೆ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಹೇಳಿದ್ದಾರೆ ಎಂದು ಟಿವಿ9ಗೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಪ್ರತಿಕ್ರಿಯಿಸಿದರು. ಜೊತೆಗೆ, ಪ್ರತಿಮೆ ಧ್ವಂಸಗೊಳಿಸಿದವರನ್ನ ಪತ್ತೆ ಹಚ್ಚಿ ಶಿಕ್ಷೆ ನೀಡಿ. ಆದರೆ, ಈ ವಿಚಾರವನ್ನು ಮುಂದುವರಿಸುವುದು ಬೇಡ ಎಂದು ಅನಿರುದ್ಧ್ ಹೇಳಿದರು.

ಈ ನಡುವೆ, ಡಾ.ವಿಷ್ಣು ಅಭಿಮಾನಿಗಳು ಅದೇ ಸ್ಥಳದಲ್ಲಿ ಮತ್ತೊಂದು ಪುತ್ಥಳಿಯನ್ನು ಪ್ರತಿಷ್ಠಾಪನೆ ಮಾಡಿದರು. ಜೊತೆಗೆ, ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸಿದರು.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ

Published On - 5:37 pm, Sat, 26 December 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ