AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ

ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ
ಡಾ. ವಿಷ್ಣು ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಕ್ಕೆ ನಟ ದರ್ಶನ್​ ಆಕ್ರೋಶ
KUSHAL V
|

Updated on:Dec 26, 2020 | 6:19 PM

Share

ಬೆಂಗಳೂರು: ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ, ಆರಾಧಿಸುವ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವಿಷ್ಣು ಸರ್ ಪುತ್ಥಳಿ ಧ್ವಂಸಗೊಳಿಸಿದ್ದಾರೆ. ಯಾರೂ ಇಲ್ಲದ ವೇಳೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ. ಇಂಥ ದುಷ್ಕರ್ಮಿಗಳಿಗೆ ತಕ್ಷಣ ಶಿಕ್ಷೆ ಆಗಲೇಬೇಕು ಎಂದು ಟ್ವೀಟ್​​ ಮಾಡಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದ ಹಾಗೆ, ಮಾಗಡಿ ರಸ್ತೆಯ ಟೋಲ್​ ಗೇಟ್​ ಬಳಿಯ ಸರ್ಕಲ್​ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಬಾಲಗಂಗಾಧರನಾಥಶ್ರೀ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಈ ನಡುವೆ, ಅಲ್ಲಿ ಪ್ರತಿಷ್ಠಾಪನೆಯಾಗಿದ್ದ ಡಾ.ವಿಷ್ಣು ಪ್ರತಿಮೆಯನ್ನು ಸ್ಥಳಾಂತರ ಮಾಡಲು ಮಾತುಕತೆಯಾಗಿತ್ತು ಎಂದು ಹೇಳಲಾಗಿದೆ. ಆದರೆ, ಈ ನಡುವೆ ಕಿಡಿಗೇಡಿಗಳು ರಾತ್ರೋರಾತ್ರಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ, ಬೇರೆ ಕಡೆ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಹೇಳಿದ್ದಾರೆ ಎಂದು ಟಿವಿ9ಗೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಪ್ರತಿಕ್ರಿಯಿಸಿದರು. ಜೊತೆಗೆ, ಪ್ರತಿಮೆ ಧ್ವಂಸಗೊಳಿಸಿದವರನ್ನ ಪತ್ತೆ ಹಚ್ಚಿ ಶಿಕ್ಷೆ ನೀಡಿ. ಆದರೆ, ಈ ವಿಚಾರವನ್ನು ಮುಂದುವರಿಸುವುದು ಬೇಡ ಎಂದು ಅನಿರುದ್ಧ್ ಹೇಳಿದರು.

ಈ ನಡುವೆ, ಡಾ.ವಿಷ್ಣು ಅಭಿಮಾನಿಗಳು ಅದೇ ಸ್ಥಳದಲ್ಲಿ ಮತ್ತೊಂದು ಪುತ್ಥಳಿಯನ್ನು ಪ್ರತಿಷ್ಠಾಪನೆ ಮಾಡಿದರು. ಜೊತೆಗೆ, ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸಿದರು.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ

Published On - 5:37 pm, Sat, 26 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?