AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ

ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ
ಡಾ. ವಿಷ್ಣು ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಕ್ಕೆ ನಟ ದರ್ಶನ್​ ಆಕ್ರೋಶ
KUSHAL V
|

Updated on:Dec 26, 2020 | 6:19 PM

Share

ಬೆಂಗಳೂರು: ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ, ಆರಾಧಿಸುವ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವಿಷ್ಣು ಸರ್ ಪುತ್ಥಳಿ ಧ್ವಂಸಗೊಳಿಸಿದ್ದಾರೆ. ಯಾರೂ ಇಲ್ಲದ ವೇಳೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ. ಇಂಥ ದುಷ್ಕರ್ಮಿಗಳಿಗೆ ತಕ್ಷಣ ಶಿಕ್ಷೆ ಆಗಲೇಬೇಕು ಎಂದು ಟ್ವೀಟ್​​ ಮಾಡಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದ ಹಾಗೆ, ಮಾಗಡಿ ರಸ್ತೆಯ ಟೋಲ್​ ಗೇಟ್​ ಬಳಿಯ ಸರ್ಕಲ್​ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಬಾಲಗಂಗಾಧರನಾಥಶ್ರೀ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಈ ನಡುವೆ, ಅಲ್ಲಿ ಪ್ರತಿಷ್ಠಾಪನೆಯಾಗಿದ್ದ ಡಾ.ವಿಷ್ಣು ಪ್ರತಿಮೆಯನ್ನು ಸ್ಥಳಾಂತರ ಮಾಡಲು ಮಾತುಕತೆಯಾಗಿತ್ತು ಎಂದು ಹೇಳಲಾಗಿದೆ. ಆದರೆ, ಈ ನಡುವೆ ಕಿಡಿಗೇಡಿಗಳು ರಾತ್ರೋರಾತ್ರಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ, ಬೇರೆ ಕಡೆ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಹೇಳಿದ್ದಾರೆ ಎಂದು ಟಿವಿ9ಗೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಪ್ರತಿಕ್ರಿಯಿಸಿದರು. ಜೊತೆಗೆ, ಪ್ರತಿಮೆ ಧ್ವಂಸಗೊಳಿಸಿದವರನ್ನ ಪತ್ತೆ ಹಚ್ಚಿ ಶಿಕ್ಷೆ ನೀಡಿ. ಆದರೆ, ಈ ವಿಚಾರವನ್ನು ಮುಂದುವರಿಸುವುದು ಬೇಡ ಎಂದು ಅನಿರುದ್ಧ್ ಹೇಳಿದರು.

ಈ ನಡುವೆ, ಡಾ.ವಿಷ್ಣು ಅಭಿಮಾನಿಗಳು ಅದೇ ಸ್ಥಳದಲ್ಲಿ ಮತ್ತೊಂದು ಪುತ್ಥಳಿಯನ್ನು ಪ್ರತಿಷ್ಠಾಪನೆ ಮಾಡಿದರು. ಜೊತೆಗೆ, ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸಿದರು.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ

Published On - 5:37 pm, Sat, 26 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು