AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ಲೀಲಾವತಿಯ ಯೋಗಕ್ಷೇಮ ವಿಚಾರಿಸಿದ ನಟ ದರ್ಶನ್

Leelavathi: ನಟ ದರ್ಶನ್ ಇಂದು (ನವೆಂಬರ್ 26) ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಹಿರಿಯ ನಟಿ ಲೀಲಾವತಿಯ ಯೋಗಕ್ಷೇಮ ವಿಚಾರಿಸಿದ ನಟ ದರ್ಶನ್
ದರ್ಶನ್-ಲೀಲಾವತಿ
ಮಂಜುನಾಥ ಸಿ.
|

Updated on: Nov 26, 2023 | 5:55 PM

Share

ಹಿರಿಯ ನಟಿ ಲೀಲಾವತಿಯವರ (Leelavathi) ಆರೋಗ್ಯ ಬಹುವಾಗಿ ಕ್ಷೀಣಿಸಿದೆ. ಈಗಂತೂ ಹಾಸಿಗೆ ಬಿಟ್ಟು ಏಳಲಾರದ ಸ್ಥಿತಿ ತಲುಪಿದ್ದಾರೆ. ಇದೇ ಕಾರಣಕ್ಕೆ ಚಿತ್ರರಂಗದ ಹಲವು ನಟ-ನಟಿಯರು ಒಬ್ಬರ ಹಿಂದೊಬ್ಬರು ಬಂದು ತಮ್ಮ ಚಿತ್ರರಂಗದ ಹಿರಿಯ ನಟಿಯ ಕಂಡು ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ಹೋಗುವ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಅರ್ಜುನ್ ಸರ್ಜಾ, ಲೀಲಾವತಿ ಹಾಗೂ ವಿನೋದ್ ರಾಜ್ ಅವರ ಮನೆಗೆ ಭೇಟಿ ನೀಡಿದ್ದರು. ಇಂದು (ನವೆಂಬರ್ 26) ಕ್ಕೆ ನಟ ದರ್ಶನ್ ಅವರು ಲೀಲಾವತಿಯವರನ್ನು ಕಾಣಲು ಬಂದಿದ್ದರು.

ನೆಲಮಂಗಲದ ಸೋಲದೇವನಹಳ್ಳಿಯ ಲೀಲಾವತಿ ಹಾಗೂ ವಿನೋದ್ ರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ ನಟ ದರ್ಶನ್, ಹಾಸಿಗೆ ಮೇಲೆ ಮಲಗಿದ್ದ ಲೀಲಾವಾತಿಯವರನ್ನು ಕಂಡು ಮಾತನಾಡಿಸಲು ಪ್ರಯತ್ನಿಸಿದರು. ಅಮ್ಮ ನಾನು ದರ್ಶನ್ ಬಂದಿದ್ದೀನಿ ಎಂದು ಅಕ್ಕರೆಯಿಂದ ಮಾತನಾಡಿದರು. ಆದರೆ ಹಿರಿಯ ಜೀವನಕ್ಕೆ ಪ್ರತಿಕ್ರಿಯೆ ನೀಡುವಷ್ಟು ದೇಹದಲ್ಲಿ ತ್ರಾಣವಿಲ್ಲ. ‘ಎಲ್ಲರನ್ನೂ ಗುರುತು ಹಿಡೀತಾರೆ ಆದರೆ ಮಾತನಾಡಲು ಆಗುತ್ತಿಲ್ಲ’ ಎಂದು ವಿನೋದ್ ರಾಜ್ ಹೇಳಿದರು.

ವಿನೋದ್ ರಾಜ್​ ಅವರು ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ನಿನ್ನೆ (ನವೆಂಬರ್ 25) ಆ ಆಸ್ಪತ್ರೆಯಲ್ಲಿ ಹೋಮ ಹವನಗಳನ್ನು ನೆರವೇರಿಸಿದ್ದಾರೆ. ಇಂದು (ನವೆಂಬರ್ 26) ನಟ ದರ್ಶನ್ ಸಹ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದರು. ವಿನೋದ್ ರಾಜ್​ ಜೊತೆ ಕೆಲ ಕಾಲ ಮಾತನಾಡಿ ಬಳಿಕ ಲೀಲಾವತಿ ಅವರ ಆರೋಗ್ಯ ವಿಚಾರಿಸಿ ತೆರಳಿದರು.

ಇದನ್ನೂ ಓದಿ:ಅಭಿಷೇಕ್​ ಅಂಬರೀಷ್​ ನಟನೆಯ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾ ನೋಡಿ 5ಕ್ಕೆ 5 ಸ್ಟಾರ್ ನೀಡಿದ ದರ್ಶನ್​

ಕೆಲವು ದಿನಗಳ ಹಿಂದೆಯಷ್ಟೆ ನಟ ಅರ್ಜುನ್ ಸರ್ಜಾ, ಸೋಲದೇವನಹಳ್ಳಿಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು. ವಿನೋದ್ ರಾಜ್ ಜೊತೆ ಸೇರಿ ಅವರ ತೋಟದಲ್ಲಿ ಸುತ್ತಾಡಿ ಖುಷಿ ಪಟ್ಟಿದ್ದರು. ಅವರ ತೋಟದ ಕೆಲಸದವರ ಜೊತೆ ಚಿತ್ರಗಳನ್ನು ತೆಗೆಸಿಕೊಂಡಿದ್ದರು. ವಿನೋದ್ ರಾಜ್​ಗೆ ಹಾಗೂ ಲೀಲಾವತಿ ಅವರಿಗೆ ಧೈರ್ಯ ತುಂಬಿದರು.

ಅದಕ್ಕೂ ಮುನ್ನ ನಟಿಯರಾದ ಮಾಳವಿಕಾ ಅವಿನಾಶ್, ಶ್ರುತಿ, ಸುಧಾರಾಣಿ ಅವರುಗಳು ಸಹ ಹೋಗಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು. ಅದಾದ ಬಳಿಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಪದಾಧಿಕಾರಿಗಳು ಭೇಟಿ ನೀಡಿದ್ದರು. ಆ ಬಳಿಕ ಶ್ರೀನಾಥ್, ಶ್ರೀಧರ್, ಟೆನ್ನಿಸ್ ಕೃಷ್ಣ, ದೊಡ್ಡಣ್ಣ ಸೇರಿದಂತೆ ಹಲವು ಹಿರಿಯ ನಟರು, ನಟಿಯರು ಲೀಲಾವತಿಯವರ ಮನೆಗೆ ಭೇಟಿ ನೀಡಿದ್ದರು. ಬಸ್ ಮಾಡಿಕೊಂಡು ಎಲ್ಲ ನಟರು ಒಟ್ಟಾಗಿ ಲೀಲಾವತಿ ಮನೆಗೆ ಭೇಟಿ ನೀಡಿ ಅಲ್ಲಿ ಲೀಲಾವತಿಯವರ ಮುಂದೆ ಹಾಡು, ನೃತ್ಯ, ನಾಟಗಳನ್ನು ಮಾಡಿ ಅವರ ಮನರಂಜಿಸುವ ಕಾರ್ಯ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​