ಹಿರಿಯ ನಟಿ ಲೀಲಾವತಿಯ ಯೋಗಕ್ಷೇಮ ವಿಚಾರಿಸಿದ ನಟ ದರ್ಶನ್

Leelavathi: ನಟ ದರ್ಶನ್ ಇಂದು (ನವೆಂಬರ್ 26) ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಹಿರಿಯ ನಟಿ ಲೀಲಾವತಿಯ ಯೋಗಕ್ಷೇಮ ವಿಚಾರಿಸಿದ ನಟ ದರ್ಶನ್
ದರ್ಶನ್-ಲೀಲಾವತಿ
Follow us
|

Updated on: Nov 26, 2023 | 5:55 PM

ಹಿರಿಯ ನಟಿ ಲೀಲಾವತಿಯವರ (Leelavathi) ಆರೋಗ್ಯ ಬಹುವಾಗಿ ಕ್ಷೀಣಿಸಿದೆ. ಈಗಂತೂ ಹಾಸಿಗೆ ಬಿಟ್ಟು ಏಳಲಾರದ ಸ್ಥಿತಿ ತಲುಪಿದ್ದಾರೆ. ಇದೇ ಕಾರಣಕ್ಕೆ ಚಿತ್ರರಂಗದ ಹಲವು ನಟ-ನಟಿಯರು ಒಬ್ಬರ ಹಿಂದೊಬ್ಬರು ಬಂದು ತಮ್ಮ ಚಿತ್ರರಂಗದ ಹಿರಿಯ ನಟಿಯ ಕಂಡು ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ಹೋಗುವ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಅರ್ಜುನ್ ಸರ್ಜಾ, ಲೀಲಾವತಿ ಹಾಗೂ ವಿನೋದ್ ರಾಜ್ ಅವರ ಮನೆಗೆ ಭೇಟಿ ನೀಡಿದ್ದರು. ಇಂದು (ನವೆಂಬರ್ 26) ಕ್ಕೆ ನಟ ದರ್ಶನ್ ಅವರು ಲೀಲಾವತಿಯವರನ್ನು ಕಾಣಲು ಬಂದಿದ್ದರು.

ನೆಲಮಂಗಲದ ಸೋಲದೇವನಹಳ್ಳಿಯ ಲೀಲಾವತಿ ಹಾಗೂ ವಿನೋದ್ ರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ ನಟ ದರ್ಶನ್, ಹಾಸಿಗೆ ಮೇಲೆ ಮಲಗಿದ್ದ ಲೀಲಾವಾತಿಯವರನ್ನು ಕಂಡು ಮಾತನಾಡಿಸಲು ಪ್ರಯತ್ನಿಸಿದರು. ಅಮ್ಮ ನಾನು ದರ್ಶನ್ ಬಂದಿದ್ದೀನಿ ಎಂದು ಅಕ್ಕರೆಯಿಂದ ಮಾತನಾಡಿದರು. ಆದರೆ ಹಿರಿಯ ಜೀವನಕ್ಕೆ ಪ್ರತಿಕ್ರಿಯೆ ನೀಡುವಷ್ಟು ದೇಹದಲ್ಲಿ ತ್ರಾಣವಿಲ್ಲ. ‘ಎಲ್ಲರನ್ನೂ ಗುರುತು ಹಿಡೀತಾರೆ ಆದರೆ ಮಾತನಾಡಲು ಆಗುತ್ತಿಲ್ಲ’ ಎಂದು ವಿನೋದ್ ರಾಜ್ ಹೇಳಿದರು.

ವಿನೋದ್ ರಾಜ್​ ಅವರು ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ನಿನ್ನೆ (ನವೆಂಬರ್ 25) ಆ ಆಸ್ಪತ್ರೆಯಲ್ಲಿ ಹೋಮ ಹವನಗಳನ್ನು ನೆರವೇರಿಸಿದ್ದಾರೆ. ಇಂದು (ನವೆಂಬರ್ 26) ನಟ ದರ್ಶನ್ ಸಹ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದರು. ವಿನೋದ್ ರಾಜ್​ ಜೊತೆ ಕೆಲ ಕಾಲ ಮಾತನಾಡಿ ಬಳಿಕ ಲೀಲಾವತಿ ಅವರ ಆರೋಗ್ಯ ವಿಚಾರಿಸಿ ತೆರಳಿದರು.

ಇದನ್ನೂ ಓದಿ:ಅಭಿಷೇಕ್​ ಅಂಬರೀಷ್​ ನಟನೆಯ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾ ನೋಡಿ 5ಕ್ಕೆ 5 ಸ್ಟಾರ್ ನೀಡಿದ ದರ್ಶನ್​

ಕೆಲವು ದಿನಗಳ ಹಿಂದೆಯಷ್ಟೆ ನಟ ಅರ್ಜುನ್ ಸರ್ಜಾ, ಸೋಲದೇವನಹಳ್ಳಿಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು. ವಿನೋದ್ ರಾಜ್ ಜೊತೆ ಸೇರಿ ಅವರ ತೋಟದಲ್ಲಿ ಸುತ್ತಾಡಿ ಖುಷಿ ಪಟ್ಟಿದ್ದರು. ಅವರ ತೋಟದ ಕೆಲಸದವರ ಜೊತೆ ಚಿತ್ರಗಳನ್ನು ತೆಗೆಸಿಕೊಂಡಿದ್ದರು. ವಿನೋದ್ ರಾಜ್​ಗೆ ಹಾಗೂ ಲೀಲಾವತಿ ಅವರಿಗೆ ಧೈರ್ಯ ತುಂಬಿದರು.

ಅದಕ್ಕೂ ಮುನ್ನ ನಟಿಯರಾದ ಮಾಳವಿಕಾ ಅವಿನಾಶ್, ಶ್ರುತಿ, ಸುಧಾರಾಣಿ ಅವರುಗಳು ಸಹ ಹೋಗಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು. ಅದಾದ ಬಳಿಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಪದಾಧಿಕಾರಿಗಳು ಭೇಟಿ ನೀಡಿದ್ದರು. ಆ ಬಳಿಕ ಶ್ರೀನಾಥ್, ಶ್ರೀಧರ್, ಟೆನ್ನಿಸ್ ಕೃಷ್ಣ, ದೊಡ್ಡಣ್ಣ ಸೇರಿದಂತೆ ಹಲವು ಹಿರಿಯ ನಟರು, ನಟಿಯರು ಲೀಲಾವತಿಯವರ ಮನೆಗೆ ಭೇಟಿ ನೀಡಿದ್ದರು. ಬಸ್ ಮಾಡಿಕೊಂಡು ಎಲ್ಲ ನಟರು ಒಟ್ಟಾಗಿ ಲೀಲಾವತಿ ಮನೆಗೆ ಭೇಟಿ ನೀಡಿ ಅಲ್ಲಿ ಲೀಲಾವತಿಯವರ ಮುಂದೆ ಹಾಡು, ನೃತ್ಯ, ನಾಟಗಳನ್ನು ಮಾಡಿ ಅವರ ಮನರಂಜಿಸುವ ಕಾರ್ಯ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ