AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಥಿಯ ಜಾಲಿ ರೈಡ್​: ದಾರಿ ಮಧ್ಯೆ ಸಿಕ್ಕ ಅಭಿಮಾನಿಗೆ ನಟನ ‘ದರ್ಶನ’..!

ಕೊಡಗು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತನ್ನ ಮನೆಗೆ ಬರ್ತಾರೆ ಅಂದ್ರೆ ಎಷ್ಟು ಖುಷಿಯಾಗಿರ ಬೇಡ. ಸಿನಿಮಾದಲ್ಲಿ ಸ್ಕ್ರೀನ್ ಮೇಲೆ ನೋಡ್ತಿದ್ದ ನಟ ಎದುರಿಗೆ ಬಂದ್ರೆ ಆನಂದಕ್ಕೆ ಪಾರವೇ ಇರೋದಿಲ್ಲ. ಅಂಥದ್ದೊಂದು ಅನುಭವ ದರ್ಶನ್ ಅಭಿಮಾನಿಯೊಬ್ಬರಿಗೆ ಆಗಿದೆ. ಬೈಕ್ ಏರಿ ಮಡಿಕೇರಿ ಕಡೆ ಜಾಲಿ ರೈಡ್​.. ನಟ ದರ್ಶನ್​ಗೆ ವಾಹನಗಳು ಅಂದ್ರೆ ತುಂಬಾ ಕ್ರೇಜ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷ್ಯವೇ. ಸ್ಟಾರ್ ನಟ ದರ್ಶನ್ ತನ್ನ ಗಜಪಡೆ ಕಟ್ಟಿಕೊಂಡು ಬೆಂಗಳೂರಿನಿಂದ ಬೈಕ್ ಏರಿ ಸ್ನೇಹಿತರ ಜೊತೆ ಮಂಜಿನ ನಗರಿ […]

ಸಾರಥಿಯ ಜಾಲಿ ರೈಡ್​: ದಾರಿ ಮಧ್ಯೆ ಸಿಕ್ಕ ಅಭಿಮಾನಿಗೆ ನಟನ ‘ದರ್ಶನ’..!
ಪೃಥ್ವಿಶಂಕರ
| Edited By: |

Updated on: Nov 20, 2020 | 11:17 AM

Share

ಕೊಡಗು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತನ್ನ ಮನೆಗೆ ಬರ್ತಾರೆ ಅಂದ್ರೆ ಎಷ್ಟು ಖುಷಿಯಾಗಿರ ಬೇಡ. ಸಿನಿಮಾದಲ್ಲಿ ಸ್ಕ್ರೀನ್ ಮೇಲೆ ನೋಡ್ತಿದ್ದ ನಟ ಎದುರಿಗೆ ಬಂದ್ರೆ ಆನಂದಕ್ಕೆ ಪಾರವೇ ಇರೋದಿಲ್ಲ. ಅಂಥದ್ದೊಂದು ಅನುಭವ ದರ್ಶನ್ ಅಭಿಮಾನಿಯೊಬ್ಬರಿಗೆ ಆಗಿದೆ.

ಬೈಕ್ ಏರಿ ಮಡಿಕೇರಿ ಕಡೆ ಜಾಲಿ ರೈಡ್​.. ನಟ ದರ್ಶನ್​ಗೆ ವಾಹನಗಳು ಅಂದ್ರೆ ತುಂಬಾ ಕ್ರೇಜ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷ್ಯವೇ. ಸ್ಟಾರ್ ನಟ ದರ್ಶನ್ ತನ್ನ ಗಜಪಡೆ ಕಟ್ಟಿಕೊಂಡು ಬೆಂಗಳೂರಿನಿಂದ ಬೈಕ್ ಏರಿ ಸ್ನೇಹಿತರ ಜೊತೆ ಮಂಜಿನ ನಗರಿ ಮಡಿಕೇರಿ ಕಡೆ ಜಾಲಿ ರೈಡ್​ಗೆ ಬಂದಿದ್ದಾರೆ. ನಟರಾದ ಚಿಕ್ಕಣ್ಣ, ಪ್ರಜ್ವಲ್ ದೇವರಾಜ್ ಸೇರಿದಂತೆ ಹಲವು ಸ್ನೇಹಿತರು ಚಾಲೆಂಜಿಂಗ್ ಸ್ಟಾರ್​ಗೆ ಸಾಥ್ ನೀಡಿದ್ದಾರೆ.

ಅಭಿಮಾನಿ ರಾಧಾ ಅನ್ನೋವ್ರು ದರ್ಶನ್​ಗೆ ಮನೆಗೆ ಅಹ್ವಾನ ನೀಡಿದ್ದಾರೆ. ಸ್ನೇಹಿತರೊಬ್ಬರ ತೋಟದಲ್ಲಿ ದರ್ಶನ್ ಕ್ರಿಕೆಟ್ ಆಟವಾಡಿ ಸಾಕಷ್ಟು ಎಂಜಾಯ್ ಕೂಡ ಮಾಡಿದ್ರು. ಇನ್ನ ದಾರಿ ಮಧ್ಯೆ ಮನೆಗೆ ಕರೆದ ಅಭಿಮಾನಿ ಮನೆಗೆ ತೆರಳಿದ ದರ್ಶನ್ ಅಭಿಮಾನಿಯ ಆಸೆ ಈಡೇರಿಸಿದ್ದಾರೆ. ಬೆಂಗಳೂರಿನಿಂದ ಮಡಿಕೇರಿ ಕಡೆ ತೆರಳುವ ವೇಳೆ ಸೋಮವಾರಪೇಟೆ ತಾಲ್ಲೂಕಿನ ಬೈಚನಹಳ್ಳಿ ಬಳಿ ಮಡಿಕೇರಿಗೆ ತೆರಳೋ ಹೆದ್ದಾರಿ ಬಳಿ ದರ್ಶನ್ ರೆಸ್ಟ್ ಮಾಡೋಕೆ ಅಂತಾ ತಮ್ಮ ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ನಟ ದರ್ಶನ್ ಮನೆ ಹತ್ರ ಬಂದಿದ್ದನ್ನ ನೋಡಿದ ಅಭಿಮಾನಿ ರಾಧಾ ಅನ್ನೋವ್ರು ದರ್ಶನ್ ಅವ್ರಿಗೆ ಮನೆಗೆ ಅಹ್ವಾನ ನೀಡಿದ್ದಾರೆ.

ಈ ವೇಳೆ ಅಭಿಮಾನಿ ಆಹ್ವಾನ ತಿರಸ್ಕಾರ ಮಾಡದ ದರ್ಶನ್, ರಾಧಾ ಅವ್ರ ಮನೆಗೆ ಭೇಟಿ ನೀಡಿದ್ದಾರೆ. ಮನೆಯಲ್ಲಿದ್ದ ವೃದ್ಧ ದಂಪತಿಯ ಆರೋಗ್ಯ ವಿಚಾರಿಸಿ ಅವ್ರ ಜೊತೆಗೆ ಪೋಟೋ ತೆಗೆಸಿಕೊಂಡು ಪುನಃ ತಮ್ಮ ಜಾಲಿ ರೈಡ್ ಮುಂದುವರೆಸಿದ್ದಾರೆ ದರ್ಶನ್. ಇನ್ನ ಒಮ್ಮೆ ಕರೆದ ಕೂಡಲೇ ಮನೆಗೆ ಬಂದ ಸ್ಟಾರ್ ನಟನ ಸರಳತೆಗೆ ಅಭಿಮಾನಿ ರಾಧಾ ಕೂಡ ನೆಚ್ಚಿನ ನಟನನ್ನ ನೋಡಿ ಫುಲ್ ಖುಷಿಯಾಗಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ