AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಶರಣಾಗ್ತೀನಿ ಅಂದ್ರು, ಬೆಳಿಗ್ಗೆ ಉಲ್ಟಾ ಹೊಡೆದ್ರು; ದರ್ಶನ್​ಗೆ ಮೊದಲೇ ಶುರುವಾಗಿತ್ತು ಟೆನ್ಷನ್

ಭಾನುವಾರ ಬೆಳಿಗ್ಗೆ ಡೆಡ್ ಬಾಡಿ ಸಿಕ್ಕಿತ್ತು. ಪ್ರಕರಣದಲ್ಲಿ ಶರಣಾಗಲು ಭಾನುವಾರ ರಾತ್ರಿಯೇ ಮಾತುಕತೆ ಆಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ನಾಲ್ವರು ಆರೋಪಿಗಳು ಶರಣಾಗಬೇಕಿತ್ತು. ಆದರೆ ಬೆಳಗ್ಗೆ ಎದ್ದು ನಮಗೆ ಭಯ ಆಗುತ್ತಾ ಇದೆ ಎಂದು ಆರೋಪಿಗಳು ಹೇಳಿದ್ದರು.

ರಾತ್ರಿ ಶರಣಾಗ್ತೀನಿ ಅಂದ್ರು, ಬೆಳಿಗ್ಗೆ ಉಲ್ಟಾ ಹೊಡೆದ್ರು; ದರ್ಶನ್​ಗೆ ಮೊದಲೇ ಶುರುವಾಗಿತ್ತು ಟೆನ್ಷನ್
ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 15, 2024 | 2:19 PM

Share

ನಟ ದರ್ಶನ್ (Darshan) ಹಾಗೂ ಗ್ಯಾಂಗ್​ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಆಗುತ್ತಿದೆ. ಮಂಗಳವಾರ (ಜೂನ್ 10) ದರ್ಶನ್ ಅರೆಸ್ಟ್ ಆಗಿದ್ದಾರೆ. ರಾತ್ರಿ ಶರಣಾಗುತ್ತೇನೆ ಎಂದಿದ್ದ ಇವರು ಬೆಳಿಗ್ಗೆ ಉಲ್ಟಾ ಹೊಡೆದಿದ್ದರು. ಇದು ದರ್ಶನ್​ ಅವರ ಟೆನ್ಷನ್​ಗೆ ಕಾರಣ ಆಗಿತ್ತು. ಕೊಲೆ ನಡೆದಾಗ ಆದ ಮಾತುಕತೆ ಏನು, ಆ ಬಳಿಕ ಆಗಿದ್ದೇನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಆರೋಪಿಗಳು ಶರಣಾಗುವ ಮುನ್ನ ಎರಡೆರಡು ಬಾರಿ ಮಾತುಕತೆ ನಡೆದಿತ್ತು. ಭಾನುವಾರ (ಜೂನ್ 9) ಮುಂಜಾನೆ 3 ಗಂಟೆ ವೇಳೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಡೆಡ್ ಬಾಡಿ ಸಿಕ್ಕಿತ್ತು. ಪ್ರಕರಣದಲ್ಲಿ ಶರಣಾಗಲು ಭಾನುವಾರ ರಾತ್ರಿಯೇ ಮಾತುಕತೆ ಆಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ನಾಲ್ವರು ಆರೋಪಿಗಳು ಶರಣಾಗಬೇಕಿತ್ತು. ಆದರೆ ಬೆಳಗ್ಗೆ ಎದ್ದು ನಮಗೆ ಭಯ ಆಗುತ್ತಾ ಇದೆ ಎಂದು ಆರೋಪಿಗಳು ಹೇಳಿದ್ದರು. ಕೂಡಲೇ ಆರೋಪಿಗಳನ್ನು ಕರೆದುಕೊಂಡು ಪ್ರದೂಶ್ ಮೈಸೂರಿಗೆ ಹೋಗಿದ್ದರು.

ಆರೋಪಿಗಳು ಮೈಸೂರಿನಲ್ಲಿ ದರ್ಶನ್ ಭೇಟಿಯಾಗಿದ್ದಾರೆ. ಈ ವೇಳೆ ಎಲ್ಲ ಖರ್ಚು ವೆಚ್ಚ ನೋಡಿಕೊಳ್ಳುತ್ತೇನೆ ಎಂದು ನಟ ದರ್ಶನ್ ಭರವಸೆ ನೀಡಿದ್ದರು. ನಟ ದರ್ಶನ್ ಮಾತುಕೊಟ್ಟ ಬಳಿಕ ಬೆಂಗಳೂರಿಗೆ ಬಂದು ಇವರು ಶರಣಾಗಿದ್ದರು ಎಂದು ವರದಿ ಆಗಿದೆ.

ಇದನ್ನೂ ಓದಿ: ‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕೆ 

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಇದರಿಂದ ಸಿಟ್ಟಾದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ 15ಕ್ಕೂ ಹೆಚ್ಚು ಜನರು ಸಾಥ್ ಕೊಟ್ಟಿದ್ದಾರೆ. ಎಲ್ಲರೂ ಪೊಲೀಸರ ವಶದಲ್ಲಿ ಇದ್ದಾರೆ. ಇಂದು ದರ್ಶನ್ ಅವರನ್ನು ಕೋರ್ಟ್ ಎದುರು ಹಾಜರು ಪಡಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:48 pm, Sat, 15 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್