AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತ ನೋಡೋಕೆ ಬಂದವನಲ್ಲ ಈ ‘ವಾಮನ’; ಆ್ಯಕ್ಷನ್ ಮೂಲಕ ಗಮನ ಸೆಳೆದ ಧನ್ವೀರ್

ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ‘ವಾಮನ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್​​ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಆ್ಯಕ್ಷನ್ ಟೀಸರ್ ಇತ್ತೀಚೆಗೆ ಮೈಸೂರಿನಲ್ಲಿ ರಿಲೀಸ್ ಆಯಿತು. ಧನ್ವೀರ್ ಅವರು ಟೀಸರ್​ನಲ್ಲಿ ಗಮನ ಸೆಳೆದರು. ‘ಅವನು ಬರೀ ರಕ್ತ ನೋಡೋಕೆ ಬಂದವನಲ್ಲ, ರಕ್ತದ ಹಿಂದಿರೋ ಚರಿತ್ರೆನೆ ಕೆದಕೋಕೆ ಬಂದವನು’ ಎಂಬ ಡೈಲಾಗ್ ಟೀಸರ್​ನಲ್ಲಿ ಹೈಲೈಟ್ ಆಗಿದೆ.

ರಕ್ತ ನೋಡೋಕೆ ಬಂದವನಲ್ಲ ಈ ‘ವಾಮನ’; ಆ್ಯಕ್ಷನ್ ಮೂಲಕ ಗಮನ ಸೆಳೆದ ಧನ್ವೀರ್
ರಾಜೇಶ್ ದುಗ್ಗುಮನೆ
|

Updated on: Aug 18, 2023 | 2:47 PM

Share

ನಟ ಧನ್ವೀರ್ ಅವರು 2019ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಅಲ್ಲಿಂದ ಇಲ್ಲಿವರೆಗೆ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಧನ್ವೀರ್ (Dhanveer) ಆ್ಯಕ್ಷನ್ ಪ್ರಿಯರು. ಆ್ಯಕ್ಷನ್ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ಈಗ ಅವರು ‘ವಾಮನ’ ಚಿತ್ರದ (Vamana Movie) ಮೂಲಕ ಬರೋಕೆ ರೆಡಿ ಆಗಿದ್ದಾರೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿಯರಿಗೆ ಭಾರೀ ಭೋಜನ ಇರಲಿದೆ. ಇತ್ತೀಚೆಗೆ ರಿಲೀಸ್ ಆದ ಆ್ಯಕ್ಷನ್ ಟೀಸರ್ ಗಮನ ಸೆಳೆಯುತ್ತಿದೆ. ಈ ಟೀಸರ್ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ‘ವಾಮನ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್​​ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಆ್ಯಕ್ಷನ್ ಟೀಸರ್ ಇತ್ತೀಚೆಗೆ ಮೈಸೂರಿನಲ್ಲಿ ರಿಲೀಸ್ ಆಯಿತು. ಧನ್ವೀರ್ ಅವರು ಟೀಸರ್​ನಲ್ಲಿ ಗಮನ ಸೆಳೆದರು. ‘ಅವನು ಬರೀ ರಕ್ತ ನೋಡೋಕೆ ಬಂದವನಲ್ಲ, ರಕ್ತದ ಹಿಂದಿರೋ ಚರಿತ್ರೆನೆ ಕೆದಕೋಕೆ ಬಂದವನು’ ಎಂಬ ಡೈಲಾಗ್ ಟೀಸರ್​ನಲ್ಲಿ ಹೈಲೈಟ್ ಆಗಿದೆ. ಈ ಮೊದಲು ರಿಲೀಸ್ ಆದ ಚಿತ್ರದ ಹಾಡುಗಳು ಸಾಕಷ್ಟು ಗಮನ ಸೆಳೆದಿದೆ.

‘ಇದು ಆ್ಯಕ್ಷನ್ ಸಿನಿಮಾ. ಈ ಚಿತ್ರದಲ್ಲಿ ಯಾವ ರೀತಿಯ ಆ್ಯಕ್ಷನ್ ಇರುತ್ತದೆ ಎಂಬುದನ್ನು ನಾವು ತೋರಿಸಬೇಕಿತ್ತು. ಅದಕ್ಕಾಗಿ ಈ ಟೀಸರ್ ರಿಲೀಸ್ ಮಾಡಿದ್ದೇವೆ. ವಾಮನ ಚಿತ್ರದಲ್ಲಿ ನಾಲ್ಕು ಆ್ಯಕ್ಷನ್ ದೃಶ್ಯಗಳಿವೆ’ ಎಂದು ನಿರ್ದೇಶಕ ಶಂಕರ್ ರಾಮನ್ ಮಾಹಿತಿ ನೀಡಿದ್ದಾರೆ.

ಚಿತ್ರದ ಮೂರು ಫೈಟ್​ಗೆ ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಭಿನ್ನ ರೀತಿಯ ಫೈಟ್​ನ ಇಡಲಾಗಿದೆಯಂತೆ. ಕಥೆಯ ಜೊತೆಯಲ್ಲೇ ಸಾಗುವ ಈ ಫೈಟ್ ಪ್ರೇಕ್ಷಕರಿಗೆ ಭಿನ್ನ ಅನುಭವ ನೀಡಲಿದೆ ಎಂಬುದು ನಿರ್ದೇಶಕರ ಅಭಿಪ್ರಾಯ. ವಿಕ್ರಮ್ ಮೋರ್ ಕೂಡ ಸಾಹಸ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ವಾಮನ’ ಅವತಾರದ ಬಗ್ಗೆ ನಟ ಧನ್ವೀರ್ ಮಾತು; ಮಾಸ್ ಆಗಿ ಬರ್ತಿದೆ ಸಿನಿಮಾ

ವಾಮನ ಎಂದರೇನು ಎನ್ನುವ ಪ್ರಶ್ನೆಗೂ ತಂಡ ಉತ್ತರ ನೀಡಿದೆ. ದಶಾವತಾರದಲ್ಲಿ ಬರುವ ಐದನೇ ಅವತಾರವೇ ವಾಮನ. ಸಿನಿಮಾದಲ್ಲೂ ದುಷ್ಟರನ್ನು ಈ ವಾಮನ ನಾಶ ಮಾಡುತ್ತಾನೆ. ರೌಡಿಸಂ, ಡ್ರಗ್ಸ್ ಮಾಫಿಯಾ, ಭೂಗತಲೋಕದ ಹಿನ್ನೆಲೆಯಲ್ಲಿ ಕಥೆ ಸಾಗುತ್ತದೆ. ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ  ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಕೆಲವು ರಾಜಕೀಯ ಮುಖಂಡರು ಹಾಜರಿ ಹಾಕಿದ್ದರು.

ಸಂಪತ್ ರಾಜ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ತಾರಾ, ಅವಿನಾಶ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಚೇತನ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?