AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ

‘ಉತ್ತರಕಾಂಡ’ ಚಿತ್ರದಲ್ಲಿ ಶಿವಣ್ಣ, ಡಾಲಿ ಧನಂಜಯ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇದರ ಜೊತೆಗೆ ಸಿನಿಮಾದ ಪಾತ್ರವರ್ಗ ಹಿರಿದಾಗುತ್ತಿದೆ. ದಿಗಂತ್ ಅವರು ತಂಡ ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಮಿರ್ಚಿ ಮಲ್ಲಿಗೆ ಹೆಸರಿನ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ
ದಿಗಂತ್
TV9 Web
| Edited By: |

Updated on: Apr 18, 2024 | 10:23 AM

Share

ನಟ ದಿಗಂತ್ ಮಂಚಾಲೆಗೆ (Diganth Manchale) ಈ ವರ್ಷ ಸಖತ್ ವಿಶೇಷ ಎನಿಸಿಕೊಂಡಿದೆ. 2024ರಲ್ಲಿ ಅವರ ನಟನೆಯ ‘ಬ್ಯಾಚುಲರ್ ಪಾರ್ಟಿ’ ಹಾಗೂ ‘ಮಾರಿಗೋಲ್ಡ್’ ಸಿನಿಮಾ ರಿಲೀಸ್ ಆಗಿದೆ. ಇದರ ಜೊತೆಗೆ ಅವರು ಹೊಸ ಸಿನಿಮಾಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಸಿನಿಮಾದಲ್ಲಿ ದೂದ್​ಪೇಡಾ ನಟಿಸುತ್ತಿದ್ದಾರೆ. ಹಾಗಂತ ಅವರ ಪಾತ್ರ ಪೇಡೆಯಷ್ಟು ಸ್ವೀಟ್ ಇಲ್ಲ. ಸಖತ್ ರಗಡ್ ಆಗಿ ಅವರ ಪಾತ್ರ ಇರಲಿದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ.

‘ಉತ್ತರಕಾಂಡ’ ಸಿನಿಮಾದಲ್ಲಿ ಡಾಲಿ ಧನಂಜಯ್, ಶಿವಣ್ಣ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಗಮನ ಸೆಳೆದಿದೆ. ಇದರ ಜೊತೆಗೆ ಸಿನಿಮಾದ ಪಾತ್ರವರ್ಗ ಹಿರಿದಾಗುತ್ತಿದೆ. ದಿಗಂತ್ ಅವರು ತಂಡ ಸೇರಿಕೊಂಡಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್​ನಲ್ಲಿ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

ಇದನ್ನೂ ಓದಿ: ‘ಉತ್ತರಕಾಂಡ’ ಚಿತ್ರಕ್ಕೆ ‘ಶೈತಾನ್’ ಸಿನಿಮಾ ಸಂಗೀತ ಸಂಯೋಜಕ; ಕನ್ನಡಕ್ಕೆ ಬಂದ ಅಮಿತ್ ತ್ರಿವೇದಿ

‘ಲವ್ ಮತ್ತ್ ಗುಟ್ಕಾ ಜೀವಕ್ಕ್ ಅನಾಹುತ ಹೆಂಗ ಹಂಗಾ ದೂದ್ ಪೇಡಾ ದಿಗಂತ್ ಇಗ್ ಮಿರ್ಚಿ ಮಲ್ಲಿಗಿ ಉತ್ತರಕಾಂಡ ಪಿಚ್ಚರದಾಗ’ ಎಂದು ನಿರ್ಮಾಣ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್ ಪೋಸ್ಟ್ ಮಾಡಿದೆ. ದಿಗಂತ್ ಅವರು ಸಾಫ್ಟ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ಆದರೆ, ಈ ಬಾರಿ ಅವರ ಲುಕ್ ಬದಲಾಗಿದೆ. ಕೈಯಲ್ಲಿ ಪಾನ್ ಪರಾಗ್ ಪ್ಯಾಕ್ ಇದೆ. ಪೋಸ್ಟರ್ ನೋಡಿದವರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಬೆಂಕಿ ಲುಕ್ ರೀ ಆರ್​ಎಂಡಿ ಭಾಯ್’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

View this post on Instagram

A post shared by KRG Studios (@krgstudios)

‘ಉತ್ತರಕಾಂಡ’ ಪಕ್ಕಾ ಆ್ಯಕ್ಷನ್ ಡ್ರಾಮಾ ಚಿತ್ರವಾಗಿರಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮತ್ತು ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ‘ಟಗರು’ ಸಿನಿಮಾದಲ್ಲಿ ಈ ಕಾಂಬಿನೇಷನ್ ಗಮನ ಸೆಳೆದಿತ್ತು. ‘ಉತ್ತರಕಾಂಡ’ ಚಿತ್ರಕ್ಕೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಅವರು ‘ಕೆಆರ್​ಜಿ’ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ