Breaking: ನಟ, ನಿರ್ದೇಶಕ ಠಪೋರಿ ಸತ್ಯ ನಿಧನ, ಆಪ್ತರ ಕಂಬನಿ

Tapori Sathya: 30 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಸತ್ಯ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು.

Breaking: ನಟ, ನಿರ್ದೇಶಕ ಠಪೋರಿ ಸತ್ಯ ನಿಧನ, ಆಪ್ತರ ಕಂಬನಿ
ಠಪೋರಿ ಸತ್ಯ
Follow us
|

Updated on:Apr 23, 2023 | 11:15 PM

ನಂದ ಲವ್ಸ್ ನಂದಿತ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಸತ್ಯ (ಠಪೋರಿ ಸತ್ಯ) ನಿಧನ ಹೊಂದಿದ್ದಾರೆ. ಶ್ವಾಸಕೊಶದ ಸಮಸ್ಯೆಯಿಂದ ಬಳಲುತ್ತಿದ್ದ ಸತ್ಯ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಸತ್ಯ ಅವರಿಗೆ 46 ವರ್ಷ ವಯಸ್ಸಾಗಿತ್ತು.

ಲೂಸ್ ಮಾದ ಯೋಗಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದ ನಂದ ಲವ್ಸ್ ನಂದಿತ ಸಿನಿಮಾದಲ್ಲಿ ಕ್ವಾಟ್ರು ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ಸತ್ಯ, ಟಪೋರಿ ಸತ್ಯ ಎಂದೇ ಹೆಸರಾಗಿದ್ದ ಇವರು ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದರು. ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾ ನಿರ್ದೇಶನ ಮಾಡುವ ಹುಮ್ಮಸ್ಸಿನಲ್ಲಿದ್ದ ಸತ್ಯ ಸಿನಿಮಾಕ್ಕಾಗಿ ಆಡಿಷನ್ ಸಹ ಮಾಡುತ್ತಿದ್ದರು. ಆದರೆ ಹಠಾತ್ತನೆ ನಿಧನ ಹೊಂದಿದ್ದಾರೆ. ಸತ್ಯ ಅವರ ಪಾರ್ಥೀವ ಶರೀರವನ್ನು ಬನಶಂಕರಿ ಬಳಿಯ ನಿವಾಸಕ್ಕೆ  ಕೊಂಡೊಯ್ಯಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:05 pm, Sun, 23 April 23

ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್