AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಟಿ ಏಟು ಕೊಡಬೇಡಿ, ಮನುಷ್ಯರಾಗಿ ಮನುಷ್ಯತ್ವ ಪಾಲಿಸೋಣ’; ಪೊಲೀಸರಿಗೆ ಜಗ್ಗೇಶ್ ಮನವಿ

ಕಳೆದ ಬಾರಿ ಲಾಕ್​ಡೌನ್​ ವೇಳೆ ಸುಮ್ಮನೆ ಸುತ್ತಾಡಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಈ ಬಾರಿ ಆ ರೀತಿ ಮಾಡಬೇಡಿ ಎಂಬುದು ಜಗ್ಗೇಶ್​ ಮನವಿ.

‘ಲಾಟಿ ಏಟು ಕೊಡಬೇಡಿ, ಮನುಷ್ಯರಾಗಿ ಮನುಷ್ಯತ್ವ ಪಾಲಿಸೋಣ’; ಪೊಲೀಸರಿಗೆ ಜಗ್ಗೇಶ್ ಮನವಿ
ನಟ ಜಗ್ಗೇಶ್​​
ರಾಜೇಶ್ ದುಗ್ಗುಮನೆ
|

Updated on: May 09, 2021 | 5:31 PM

Share

ಮಹಾಮಾರಿ ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ನಾಳೆಯಿಂದ 14 ದಿನ ಬೆಂಗಳೂರು ಸೇರಿ ಇಡೀ ಕರ್ನಾಟಕ ಲಾಕ್​ಡೌನ್ ಆಗಲಿದೆ. ಈ ಅವಧಿಯಲ್ಲಿ ಸುಮ್ಮನೆ ಸುತ್ತಾಡಿದರೆ ಕೇಸ್​ ಬೀಳಲಿದೆ. ಈ ಮಧ್ಯೆ ನಟ ಜಗ್ಗೇಶ್​ ಪೊಲೀಸರಿಗೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಸೋಮವಾರ (ಮೇ 10) ಬೆಳಗ್ಗೆ 6ರಿಂದ ಕರ್ನಾಟಕ ಲಾಕ್​ಡೌನ್​ ಆಗಲಿದೆ. ಈ ಬಾರಿ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಲು ಸರ್ಕಾರ ಸಜ್ಜಾಗಿದೆ. ಯಾರಾದರೂ ಅನಗತ್ಯವಾಗಿ ಹೊರಬಂದರೆ ಪೊಲೀಸರ ಕೈಗೆ ಸಿಕ್ಕಿ ಬೀಳೋದು ಪಕ್ಕಾ. ಕಳೆದ ಬಾರಿ ಲಾಕ್​ಡೌನ್​ ವೇಳೆ ಸುಮ್ಮನೆ ಸುತ್ತಾಡಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಈ ಬಾರಿ ಆ ರೀತಿ ಮಾಡಬೇಡಿ ಎಂಬುದು ಜಗ್ಗೇಶ್​ ಮನವಿ.

‘ಆದೇಶ ಪಾಲಿಸದವರಿಗೆ ದಂಡ ಹಾಕಿ, ವಾಹನ ಜಪ್ತಿಮಾಡಿ ತೊಂದರೆ ಇಲ್ಲ. ಆದರೆ ನಿರ್ದಯವಾಗಿ ಲಾಟಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆಯುತ್ತಾರೆ. ಆದರೆ ವಯಸ್ಸಾದವರಿಗೆ ಯಾವ ಕಾಯಿಲೆ ಇರುತ್ತದೆ ಎಂಬುದು ನಿಮಗೇನು ತಿಳಿದಿರುತ್ತದೆ? ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ ಬದಲು ಪ್ರಾಣ ಹೋಗುವಂತೆ ಹೊಡೆಯುತ್ತಾರೆ. ಈ ಹಾಳಾದ ಕೊರೊನಾ ಮನುಕುಲದ ಅನ್ನ, ದುಡಿಮೆ, ನೆಮ್ಮದಿಯ ಕಸಿದಿದೆ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಜನತೆಯಲ್ಲೂ ನನ್ನ ಮನವಿ. ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ದರೆಯೇ ಹತ್ತಿ ಉರಿಯುತ್ತಿದೆ. ದಯಮಾಡಿ ಸ್ವಲ್ಪದಿನ ವೈದ್ಯಲೋಕದ ಮಾತಿನಂತೆ ಕೆಲತಿಂಗಳು ಎಚ್ಚರವಾಗಿ ಇದ್ದುಬಿಡಿ ಪ್ಲೀಸ್​’ ಎಂದು ಜಗ್ಗೇಶ್​ ಜನರಲ್ಲಿ ಮವಿಮಾಡಿದ್ದಾರೆ.

ಇದನ್ನೂ ಓದಿ: ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

Follow Us
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ