AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಟಿ ಏಟು ಕೊಡಬೇಡಿ, ಮನುಷ್ಯರಾಗಿ ಮನುಷ್ಯತ್ವ ಪಾಲಿಸೋಣ’; ಪೊಲೀಸರಿಗೆ ಜಗ್ಗೇಶ್ ಮನವಿ

ಕಳೆದ ಬಾರಿ ಲಾಕ್​ಡೌನ್​ ವೇಳೆ ಸುಮ್ಮನೆ ಸುತ್ತಾಡಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಈ ಬಾರಿ ಆ ರೀತಿ ಮಾಡಬೇಡಿ ಎಂಬುದು ಜಗ್ಗೇಶ್​ ಮನವಿ.

‘ಲಾಟಿ ಏಟು ಕೊಡಬೇಡಿ, ಮನುಷ್ಯರಾಗಿ ಮನುಷ್ಯತ್ವ ಪಾಲಿಸೋಣ’; ಪೊಲೀಸರಿಗೆ ಜಗ್ಗೇಶ್ ಮನವಿ
ನಟ ಜಗ್ಗೇಶ್​​
ರಾಜೇಶ್ ದುಗ್ಗುಮನೆ
|

Updated on: May 09, 2021 | 5:31 PM

Share

ಮಹಾಮಾರಿ ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ನಾಳೆಯಿಂದ 14 ದಿನ ಬೆಂಗಳೂರು ಸೇರಿ ಇಡೀ ಕರ್ನಾಟಕ ಲಾಕ್​ಡೌನ್ ಆಗಲಿದೆ. ಈ ಅವಧಿಯಲ್ಲಿ ಸುಮ್ಮನೆ ಸುತ್ತಾಡಿದರೆ ಕೇಸ್​ ಬೀಳಲಿದೆ. ಈ ಮಧ್ಯೆ ನಟ ಜಗ್ಗೇಶ್​ ಪೊಲೀಸರಿಗೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಸೋಮವಾರ (ಮೇ 10) ಬೆಳಗ್ಗೆ 6ರಿಂದ ಕರ್ನಾಟಕ ಲಾಕ್​ಡೌನ್​ ಆಗಲಿದೆ. ಈ ಬಾರಿ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಲು ಸರ್ಕಾರ ಸಜ್ಜಾಗಿದೆ. ಯಾರಾದರೂ ಅನಗತ್ಯವಾಗಿ ಹೊರಬಂದರೆ ಪೊಲೀಸರ ಕೈಗೆ ಸಿಕ್ಕಿ ಬೀಳೋದು ಪಕ್ಕಾ. ಕಳೆದ ಬಾರಿ ಲಾಕ್​ಡೌನ್​ ವೇಳೆ ಸುಮ್ಮನೆ ಸುತ್ತಾಡಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಈ ಬಾರಿ ಆ ರೀತಿ ಮಾಡಬೇಡಿ ಎಂಬುದು ಜಗ್ಗೇಶ್​ ಮನವಿ.

‘ಆದೇಶ ಪಾಲಿಸದವರಿಗೆ ದಂಡ ಹಾಕಿ, ವಾಹನ ಜಪ್ತಿಮಾಡಿ ತೊಂದರೆ ಇಲ್ಲ. ಆದರೆ ನಿರ್ದಯವಾಗಿ ಲಾಟಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆಯುತ್ತಾರೆ. ಆದರೆ ವಯಸ್ಸಾದವರಿಗೆ ಯಾವ ಕಾಯಿಲೆ ಇರುತ್ತದೆ ಎಂಬುದು ನಿಮಗೇನು ತಿಳಿದಿರುತ್ತದೆ? ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ ಬದಲು ಪ್ರಾಣ ಹೋಗುವಂತೆ ಹೊಡೆಯುತ್ತಾರೆ. ಈ ಹಾಳಾದ ಕೊರೊನಾ ಮನುಕುಲದ ಅನ್ನ, ದುಡಿಮೆ, ನೆಮ್ಮದಿಯ ಕಸಿದಿದೆ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಜನತೆಯಲ್ಲೂ ನನ್ನ ಮನವಿ. ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ದರೆಯೇ ಹತ್ತಿ ಉರಿಯುತ್ತಿದೆ. ದಯಮಾಡಿ ಸ್ವಲ್ಪದಿನ ವೈದ್ಯಲೋಕದ ಮಾತಿನಂತೆ ಕೆಲತಿಂಗಳು ಎಚ್ಚರವಾಗಿ ಇದ್ದುಬಿಡಿ ಪ್ಲೀಸ್​’ ಎಂದು ಜಗ್ಗೇಶ್​ ಜನರಲ್ಲಿ ಮವಿಮಾಡಿದ್ದಾರೆ.

ಇದನ್ನೂ ಓದಿ: ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ