AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಟಿ ಏಟು ಕೊಡಬೇಡಿ, ಮನುಷ್ಯರಾಗಿ ಮನುಷ್ಯತ್ವ ಪಾಲಿಸೋಣ’; ಪೊಲೀಸರಿಗೆ ಜಗ್ಗೇಶ್ ಮನವಿ

ಕಳೆದ ಬಾರಿ ಲಾಕ್​ಡೌನ್​ ವೇಳೆ ಸುಮ್ಮನೆ ಸುತ್ತಾಡಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಈ ಬಾರಿ ಆ ರೀತಿ ಮಾಡಬೇಡಿ ಎಂಬುದು ಜಗ್ಗೇಶ್​ ಮನವಿ.

‘ಲಾಟಿ ಏಟು ಕೊಡಬೇಡಿ, ಮನುಷ್ಯರಾಗಿ ಮನುಷ್ಯತ್ವ ಪಾಲಿಸೋಣ’; ಪೊಲೀಸರಿಗೆ ಜಗ್ಗೇಶ್ ಮನವಿ
ನಟ ಜಗ್ಗೇಶ್​​
ರಾಜೇಶ್ ದುಗ್ಗುಮನೆ
|

Updated on: May 09, 2021 | 5:31 PM

Share

ಮಹಾಮಾರಿ ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ನಾಳೆಯಿಂದ 14 ದಿನ ಬೆಂಗಳೂರು ಸೇರಿ ಇಡೀ ಕರ್ನಾಟಕ ಲಾಕ್​ಡೌನ್ ಆಗಲಿದೆ. ಈ ಅವಧಿಯಲ್ಲಿ ಸುಮ್ಮನೆ ಸುತ್ತಾಡಿದರೆ ಕೇಸ್​ ಬೀಳಲಿದೆ. ಈ ಮಧ್ಯೆ ನಟ ಜಗ್ಗೇಶ್​ ಪೊಲೀಸರಿಗೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಸೋಮವಾರ (ಮೇ 10) ಬೆಳಗ್ಗೆ 6ರಿಂದ ಕರ್ನಾಟಕ ಲಾಕ್​ಡೌನ್​ ಆಗಲಿದೆ. ಈ ಬಾರಿ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಲು ಸರ್ಕಾರ ಸಜ್ಜಾಗಿದೆ. ಯಾರಾದರೂ ಅನಗತ್ಯವಾಗಿ ಹೊರಬಂದರೆ ಪೊಲೀಸರ ಕೈಗೆ ಸಿಕ್ಕಿ ಬೀಳೋದು ಪಕ್ಕಾ. ಕಳೆದ ಬಾರಿ ಲಾಕ್​ಡೌನ್​ ವೇಳೆ ಸುಮ್ಮನೆ ಸುತ್ತಾಡಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಈ ಬಾರಿ ಆ ರೀತಿ ಮಾಡಬೇಡಿ ಎಂಬುದು ಜಗ್ಗೇಶ್​ ಮನವಿ.

‘ಆದೇಶ ಪಾಲಿಸದವರಿಗೆ ದಂಡ ಹಾಕಿ, ವಾಹನ ಜಪ್ತಿಮಾಡಿ ತೊಂದರೆ ಇಲ್ಲ. ಆದರೆ ನಿರ್ದಯವಾಗಿ ಲಾಟಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆಯುತ್ತಾರೆ. ಆದರೆ ವಯಸ್ಸಾದವರಿಗೆ ಯಾವ ಕಾಯಿಲೆ ಇರುತ್ತದೆ ಎಂಬುದು ನಿಮಗೇನು ತಿಳಿದಿರುತ್ತದೆ? ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ ಬದಲು ಪ್ರಾಣ ಹೋಗುವಂತೆ ಹೊಡೆಯುತ್ತಾರೆ. ಈ ಹಾಳಾದ ಕೊರೊನಾ ಮನುಕುಲದ ಅನ್ನ, ದುಡಿಮೆ, ನೆಮ್ಮದಿಯ ಕಸಿದಿದೆ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಜನತೆಯಲ್ಲೂ ನನ್ನ ಮನವಿ. ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ದರೆಯೇ ಹತ್ತಿ ಉರಿಯುತ್ತಿದೆ. ದಯಮಾಡಿ ಸ್ವಲ್ಪದಿನ ವೈದ್ಯಲೋಕದ ಮಾತಿನಂತೆ ಕೆಲತಿಂಗಳು ಎಚ್ಚರವಾಗಿ ಇದ್ದುಬಿಡಿ ಪ್ಲೀಸ್​’ ಎಂದು ಜಗ್ಗೇಶ್​ ಜನರಲ್ಲಿ ಮವಿಮಾಡಿದ್ದಾರೆ.

ಇದನ್ನೂ ಓದಿ: ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ