ಬೆಂಗಳೂರಿನಲ್ಲಿ ಮಳೆಯ ಅವಾಂತರ: ಮುಳುಗಿತು ನಟ ಜಗ್ಗೇಶ್​​ ಒಡೆತನದ ಐಷಾರಾಮಿ ಕಾರು

ವೈಯಕ್ತಿಕ ಜೀವನದ ಕುರಿತು ಜಗ್ಗೇಶ್ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ಅವರು ಕಾರು ಮುಳುಗಿರುವ ಕುರಿತು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆಯ ಅವಾಂತರ: ಮುಳುಗಿತು ನಟ ಜಗ್ಗೇಶ್​​ ಒಡೆತನದ ಐಷಾರಾಮಿ ಕಾರು
ಜಗ್ಗೇಶ್

Updated on: May 22, 2023 | 9:31 AM

ಬೆಂಗಳೂರಿನಲ್ಲಿ ಭಾನುವಾರ (ಮೇ 21) ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ. ಈ ಮಧ್ಯೆ ನಟ, ರಾಜಕಾರಣಿ ಜಗ್ಗೇಶ್​ಗೂ (Jaggesh) ಬೆಂಗಳೂರು ಮಳೆಯ ಎಫೆಕ್ಟ್ ತಟ್ಟಿದೆ. ಅವರ ಒಡೆತನದ ಐಷಾರಾಮಿ ಕಾರು ಮಳೆಗೆ ಮುಳುಗಿ ಹೋಗಿದೆ. ಸದ್ಯ, ಕಾರು ಮುಳುಗಿದ ಸ್ಥಳದಲ್ಲಿಂದ ನೀರನ್ನು ಹೊರತೆಗೆಯುವ ಕೆಲಸ ಆಗುತ್ತಿದೆ. ಈ ಬಗ್ಗೆ ಅವರು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಜಗ್ಗೇಶ್ ಅವರು ಸದ್ಯ ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅನೇಕ ಆಗುಹೋಗುಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಜೊತೆಗೆ ವೈಯಕ್ತಿಕ ಜೀವನದ ಕುರಿತು ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ಅವರು ಕಾರು ಮುಳುಗಿರುವ ಕುರಿತು ಮಾಹಿತಿ ನೀಡಿದ್ದಾರೆ.

‘ನನ್ನ ಮನೆಯ ರಿಪೇರಿ ಕಾರ್ಯದ ಪ್ರಯುಕ್ತ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್​​ನಲ್ಲಿ ನನ್ನ bmw5 ಕಾರು ನಿಲ್ಲಿಸಿದ್ದೆ. ಅಕಾಲಿಕ ಮಳೆಯಿಂದ ನೀರಿನಲ್ಲಿ ಮುಳುಗಡೆ ಆಯಿತು. 5hp ಮೋಟರ್ ಬಳಸಿ ನೀರು ಹೊರಹಾಕಿಸಲಾಯಿತು. ಇಂಥ ಆಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ’ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಮುಳುಗಿದ ಕಾರಿನ ಫೋಟೋ ಕೂಡ ಹಾಕಿದ್ದಾರೆ.

ಇದನ್ನೂ ಓದಿ: Jaggesh: ಡಾ.ಭುಜಂಗ ಶೆಟ್ಟಿಯ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ ನಟ ಜಗ್ಗೇಶ್   

ಭುಜಂಗ ಶೆಟ್ಟಿ ನಿಧನಕ್ಕೆ ಸಂತಾಪ

ಡಾ. ಭುಜಂಗ ಶೆಟ್ಟಿ ಅವರ ಸಾವಿನ ವಾರ್ತೆ ಜಗ್ಗೇಶ್ ಅವರಿಗೆ ಆಘಾತ ತಂದಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದರು. ‘ಇಂದಿನ ದೇವಯ್ಯಪಾರ್ಕ್ ಮೆಟ್ರೋ ಅಡಿಯಲ್ಲಿ 1980ರಲ್ಲಿ ಇವರ ಕಣ್ಣಿನ ಕ್ಲಿನಿಕ್ ಇತ್ತು. ಅಮ್ಮನ ಕಣ್ಣಿನ ಪರೀಕ್ಷೆಗಾಗಿ ಇವರ ಬಳಿ ಹೋಗಿದ್ದ ನೆನಪು. ನಂತರ ಅವರ ಬೆಳವಣಿಗೆ, ಅವರ ಆಸ್ಪತ್ರೆಯಲ್ಲಿ ನಡೆದ ನನ್ನ ಅನೇಕ ಚಿತ್ರದ ಚಿತ್ರೀಕರಣ.. ರಾಜಣ್ಣ ಕಣ್ಣಿನ ದಾನಕ್ಕೆ ಇವರೇ ಪ್ರೇರಣೆ. ಒಟ್ಟಾರೆ ಆತ್ಮೀಯರು ಕಾಲವಾದ ವಿಷಯ ಕೇಳಿ ಅಘಾತವಾಯಿತು’ ಎಂದು ಜಗ್ಗೇಶ್ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Mon, 22 May 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us