AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್ ಕಾರು ಚಾಲಕ ಪದ್ಮನಾಭ ನಿಧನ; ಕಂಬನಿ ಮಿಡಿದ ನಟ

ನಟ ಜಗ್ಗೇಶ್ ಅವರ ಕಾರು ಚಾಲಕ ಪದ್ಮನಾಭ ಇಂದು (ಜನವರಿ 29) ಹೃದಯ ಸ್ತಂಭನದಿಂದ ಮೃತರಾಗಿದ್ದಾರೆ. ಕಳೆದ 28 ವರ್ಷಗಳಿಂದ ಪದ್ಮನಾಭ ಅವರು ಜಗ್ಗೇಶ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಪದ್ಮನಾಭ ಅವರ ಅಂತ್ಯಕ್ರಿಯೆಯಲ್ಲಿ ಜಗ್ಗೇಶ್ ಭಾಗಿಯಾಗಿದ್ದಾರೆ. ಭಾವುಕವಾಗಿ ಅಂತಿಮ ನಮನ ಸಲ್ಲಿದ್ದಾರೆ.

ಜಗ್ಗೇಶ್ ಕಾರು ಚಾಲಕ ಪದ್ಮನಾಭ ನಿಧನ; ಕಂಬನಿ ಮಿಡಿದ ನಟ
Padmanabha, Jaggesh
ಮದನ್​ ಕುಮಾರ್​
|

Updated on: Jan 29, 2026 | 3:52 PM

Share

ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ನಟ ಜಗ್ಗೇಶ್ ಅವರ ಕಾರು ಚಾಲಕನಾಗಿ (Jaggesh Car Driver) ಕೆಲಸ ಮಾಡಿದ್ದ ಪದ್ಮನಾಭ ಅವರು ನಿಧನರಾಗಿದ್ದಾರೆ. ಈ ವಿಷಯವನ್ನು ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಪದ್ಮನಾಭ ಅವರಿಗೆ 54 ವರ್ಷ ವಯಸ್ಸಾಗಿತ್ತು. ಹೃದಯ ಸ್ತಂಭನದಿಂದ (Cardiac Arrest) ಅವರು ಕೊನೆಯುಸಿರು ಎಳೆದಿದ್ದಾರೆ ಎಂಬುದು ತಿಳಿದು ಬಂದಿದೆ. ಮೃತರ ಆತ್ಮಕ್ಕೆ ಜಗ್ಗೇಶ್ ಅವರು ಶಾಂತಿ ಕೋರಿದ್ದಾರೆ. ಪದ್ಮನಾಭ ಅವರ ಅಂತ್ಯಕ್ರಿಯೆಯಲ್ಲಿ ಜಗ್ಗೇಶ್ (Jaggesh) ಭಾಗಿ ಆಗಿದ್ದಾರೆ. ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಂಬನಿ ಮಿಡಿದ್ದಾರೆ.

‘ಒಂದು ದಿನ ಇದ್ದದ್ದು ಮತ್ತೊಂದು ದಿನ ಇಲ್ಲವಾಗುತ್ತೆ. ನಶ್ವರ ಈ ಜಗತ್ತು. ಶ್ರೀ ಕೃಷ್ಣನ ಮಾತು. ನನ್ನ ಚಾಲಕ ಪದ್ಧ (ಪದ್ಮನಾಭ) 28 ವರ್ಷ ನನ್ನ ಚಾಲಕನಾಗಿ ಕಾರ್ಯ ನಿರ್ವಹಿಸಿದ್ದ. ನಮ್ಮ ಮನೆಯಲ್ಲಿ ಹೆಂಡತಿ, ಮಕ್ಕಳು, ಮೊಮ್ಮಗನಿಗೆ ಹಾಗು ನಮ್ಮ ಮನೆಯ ಸದಸ್ಯರು ಶ್ವಾನ (ಅರ್ಜುನ, ಪಿಂಟು, ಸೂರಜ್, ಸೂರ್ಯ) ಆತ್ಮೀಯನಾಗಿದ್ದ’ ಎಂದು ಜಗ್ಗೇಶ್ ಪೋಸ್ಟ್ ಮಾಡಿದ್ದಾರೆ.

‘ನನಗಿಂತ ಹೆಚ್ಚು ಮೊಬೈಲ್ ಕರೆ ಇವನಿಗೆ ಬರುತ್ತಿತ್ತು. ಸಿನಿಮಾ ಹಾಗು ರಾಜಕೀಯದ ನನ್ನ ಸ್ನೇಹಿತರು ಇವನಿಗೆ ಕರೆಮಾಡಿ ನನಗೆ ವಿಷಯ ಮುಟ್ಟಿಸುತ್ತಿದ್ದರು. ಕಾರಣ ನಾನು ಮೊಬೈಲ್ ಬಳಸೋಲ್ಲ. ಆ ಕಾರಣ ನನ್ನ ಬಲ್ಲ ಎಲ್ಲರಿಗೂ ತಿಳಿದಿದೆ (ಸಾಮಾಜಿಕ ಜಾಲತಾಣ ಮಾತ್ರ)’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ?

‘ಕೇವಲ 54 ವರ್ಷ ವಯಸ್ಸಿಗೆ ಹೃದಯ ಸ್ತಂಭನವಾಗಿ ಕೊನೆ ಉಸಿರು ನಿಲ್ಲಿಸಿದ. ಅವನ ಮೇಲಿನ ಪ್ರೀತಿ ಹಾಗೂ ಸೇವೆಯ ಋಣಕ್ಕೆ ಅವನ ಕೊನೆಯ ಕ್ಷಣದವರೆಗೂ ಜೊತೆಗಿದ್ದು ವಿದಾಯ ಹೇಳಿಬಂದೆ. ಮನಸ್ಸಿಗೆ ತುಂಬಾ ದುಃಖವಾಯಿತು. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಪದ್ದ. ಹೋಗಿ ಬಾ’ ಎಂದು ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!