AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂದಿನ ಜಗತ್ತು ಒಳ್ಳೆಯವರಿಗಲ್ಲ’; ಆಪ್ತನ ಮಗನ ಸಾವಿಗೆ ಜಗ್ಗೇಶ್ ಬೇಸರ, ಟ್ವಿಟರ್​​​ನಿಂದ ದೂರ ಸರಿದ ನಟ

ನಟ ಜಗ್ಗೇಶ್​ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟಿವ್​ ಆಗಿದ್ದಾರೆ. ಯಾರಾದರೂ ಕಷ್ಟ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡರೆ ಅದಕ್ಕೆ ಅವರು ಸ್ಪಂದಿಸುತ್ತಾರೆ. ಈಗ ಆಪ್ತನ ಮಗನನ್ನು ಕೊರೊನಾ ನುಂಗಿ ಹಾಕಿದೆ.

‘ಇಂದಿನ ಜಗತ್ತು ಒಳ್ಳೆಯವರಿಗಲ್ಲ’; ಆಪ್ತನ ಮಗನ ಸಾವಿಗೆ ಜಗ್ಗೇಶ್ ಬೇಸರ, ಟ್ವಿಟರ್​​​ನಿಂದ ದೂರ ಸರಿದ ನಟ
ಜಗ್ಗೇಶ್​
ರಾಜೇಶ್ ದುಗ್ಗುಮನೆ
|

Updated on:May 14, 2021 | 8:52 PM

Share

ಕೊರೊನಾ ಕಾಲದಲ್ಲಿ ನಟ ಜಗ್ಗೇಶ್​ ಎಲ್ಲರ ಸಹಾಯಕ್ಕೆ ನಿಂತಿದ್ದರು. ಅಗತ್ಯ ಇರುವ ಕೊರೊನಾ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ ಪೂರೈಕೆ ಮಾಡುವ ಕೆಲಸದಲ್ಲಿ ತೊಡಗಿದ್ದರು. ಆದರೆ, ಈಗ ಕೊರೊನಾ ಅವರ ಆಪ್ತರನ್ನೇ ಬಲಿ ತೆಗೆದುಕೊಂಡಿದೆ. ಈ ಕಾರಣದಿಂದ ಕೆಲ ಸಮಯದವರೆಗೆ ಸಾಮಾಜಿಕ ಜಾಲತಾಣದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ನಟ ಜಗ್ಗೇಶ್​ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟಿವ್​ ಆಗಿದ್ದಾರೆ. ಯಾರಾದರೂ ಕಷ್ಟ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡರೆ ಅದಕ್ಕೆ ಅವರು ಸ್ಪಂದಿಸುತ್ತಾರೆ. ಈಗ ಆಪ್ತನ ಮಗನನ್ನು ಕೊರೊನಾ ನುಂಗಿ ಹಾಕಿದೆ. ‘ದುಃಖ ತಡೆಯಲು ಆಗುತ್ತಿಲ್ಲ. ಹಾಗಾಗಿ ಇಲ್ಲಿಂದ ಕೆಲ ದಿನಗಳ ಕಾಲ ದೂರ ಉಳಿಯುವೆ’ ಎಂದು ಟ್ವಿಟರ್​​ನಲ್ಲಿ ಅವರು ಬರೆದುಕೊಂಡಿದ್ದಾರೆ.

‘ನನ್ನಉಸಿರಿನಂತೆ ಬೆನ್ನಿಗೆ ನಿಂತು ನನ್ನ ಬದುಕಿನ ಬಹು ಭಾಗ ಒಡಹುಟ್ಟಿದವನಂತೆ ಬಾಳಿದವ ಮಾದೇಗೌಡ. ಅವನ ಮಗನನ್ನು ಈ ಪೀಡೆರೋಗ ನುಂಗಿಹಾಕಿತು. ಇದ್ದವನು ಒಬ್ಬನೇ ಮಗ ಮಸಣಸೇರಿಬಿಟ್ಟ. ಬಹಳ ನೊಂದು ಹೋಗಿರುವೆ. ನನ್ನ ಮಗನಿಗಿಂತ 1ವರ್ಷ ಕಿರಿಯ. ಅವನಿಗೆ ಮಗಳು ಹುಟ್ಟಿ 6 ತಿಂಗಳು ಆಗಿದೆ. ಮಾದೆಗೌಡ ಈ ದುಃಖವನ್ನು ಹೇಗೆ ಸಹಿಸುತ್ತಾನೆ? ನನ್ನ ದೇಹವೇ ಸುಟ್ಟಂತೆ ಆಗಿದೆ, ಕ್ರೂರವಿಧಿ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ಕೆಲದಿನ ನಾ ಇಲ್ಲಿಂದ ದೂರ ಉಳಿಯುವೆ. ಮಾದೇಗೌಡನ ಮಗನ ಸಾವಿನಿಂದ ನನ್ನ ಮನಸ್ಸು ಒಡೆದು ಚೂರಾಗಿದೆ. ಏನು ಮಾಡಿದರೂ ಸಮಾಧಾನ ಆಗುತ್ತಿಲ್ಲ. ಬಂಗಾರದಂತ ನನ್ನ ಆತ್ಮೀಯ ಹೃದಯಗಳೇ ನಿಮ್ಮ ನೀವು ಕಾಪಾಡಿಕೊಳ್ಳಿ. ಇಂದಿನ ಯಾಂತ್ರಿಕ ಚಿಂತನೆ ಜಗದಲ್ಲಿ ಯಾರು ನಮಗಾಗಿ ಬರರು. ಸ್ವಾರ್ಥ, ಮೋಸ, ಧನದಾಹಿ ಜಗತ್ತು. ಒಳ್ಳೆಯವರಿಗಲ್ಲ ಇಂದಿನ ಜಗತ್ತು, ಕ್ಷಮೆಯಿರಲಿ’ ಎಂದು ಜಗ್ಗೇಶ್​ ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

Published On - 8:46 pm, Fri, 14 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್